ಕನ್ನಡಪ್ರಭ ವಾರ್ತೆ ಹುಣಸಗಿ
ಅಲ್ಲದೆ, ನೋಟಿಸ್ ಜಾರಿಯಾದ ನಾಲ್ಕು ವಾರಗಳ ಒಳಗೆ ತಮ್ಮ ಅಭಿಪ್ರಾಯ ಮತ್ತು ಕೈಗೊಂಡ ಕ್ರಮದ ಬಗ್ಗೆ ಉಪ ಲೋಕಾಯುಕ್ತ ಬೆಂಗಳೂರು ಅವರಿಗೆ ವರದಿ ಸಲ್ಲಿಸಲು ಜಿಲ್ಲಾಧಿಕಾರಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವರಿಗೆ ನ್ಯಾ. ಫಣೀಂದ್ರ ಅವರು ನಿರ್ದೇಶನ ನೀಡಿದ್ದಾರೆ.
"ಕನ್ನಡಪ್ರಭ "ದಲ್ಲಿ ಪ್ರಕಟಗೊಂಡ ವರದಿ ಉಲ್ಲೇಖಿಸಿ, ಸ್ಯುಮೋಟೊ ಅಧಿಕಾರವನ್ನು ಚಲಾಯಿಸಲು ಮೂಲ ವಸ್ತುವಾಗಿ ಪರಿಗಣಿಸಿ ಕರ್ನಾಟಕ ಲೋಕಾಯುಕ್ತ ಕಾಯ್ದೆ 1984 ರ 7(2) 9(3)(ಎ) ಪ್ರಕಾರ ನನ್ನ ಅಧಿಕಾರವನ್ನು ಚಲಾಯಿಸಿ ನಿರ್ದೇಶಿಸಲಾಗಿದೆ ಎಂದು ಅವರು ನೋಟಿಸ್ನಲ್ಲಿ ತಿಳಿಸಿದ್ದಾರೆ.ಈ ನೋಟೀಸ್ ತಲುಪುತ್ತಲ್ಲೇ, ಎಚ್ಚೆತ್ತುಕೊಂಡು ಪಟ್ಟಣ ಪಂಚಾಯತ ಅಧಿಕಾರಿಗಳು ಅಲ್ಲಿನ ವಾತಾವರಣ ಸ್ವಚ್ಛತಾ ಕಾರ್ಯಕ್ಕೆ ಮುಂದಾಗಿದ್ದಾರೆ. ಶೌಚಾಲಯದಿಂದ ಹರಿಯುತ್ತಿರುವ ಮಲಮೂತ್ರ ಸ್ಥಗಿತಗೊಂಡು ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.