ಯಾದಗಿರಿ: ನಾಳೆ ಗಣರಾಜ್ಯೋತ್ಸವ: ಸಂವಿಧಾನ ಜಾಗೃತಿ ಜಾಥಾಗೆ ಸಿದ್ಧತೆ

KannadaprabhaNewsNetwork |  
Published : Jan 25, 2024, 02:04 AM IST
ಯಾದಗಿರಿ ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಸುಶೀಲಾ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಎಡಿಸಿ ಶರಣಬಸಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಸರೋಜಾ, ಇತರೆ ಅಧಿಕಾರಿಗಳು ಇದ್ದರು. | Kannada Prabha

ಸಾರಾಂಶ

ಪೂರ್ವಭಾವಿ ಸಭೆಯಲ್ಲಿ ಅಧಿಕಾರಿಗಳಿಗೆ ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲಾ ಅವರು ಸೂಚನೆ ನೀಡಿ, ಜ.26ರಂದು ಜಿಲ್ಲಾ ಕೇಂದ್ರದ ಮೂಲಕವೂ ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರದ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ ಎಂದರು

ಕನ್ನಡಪ್ರಭ ವಾರ್ತೆ ಯಾದಗಿರಿ

ಇದೇ ಜ.26ರಂದು ನಡೆಯಲಿರುವ ಗಣರಾಜ್ಯೋತ್ಸವ ಹಾಗೂ ಸಂವಿಧಾನ ದಿನಾಚರಣೆ ಪ್ರಯುಕ್ತ ಸಂವಿಧಾನ ಜಾಗೃತಿ ಜಾಥಾಗೆ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಸುಶೀಲಾ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಸಂವಿಧಾನ ದಿನಾಚರಣೆ ಪ್ರಯುಕ್ತ ಬೆಂಗಳೂರಿನಲ್ಲಿ ನಡೆಯಲಿರುವ ಸಂವಿಧಾನ ಜಾಗೃತಿ ಜಾಥಾ ರಾಷ್ಟ್ರೀಯಮಟ್ಟದ ಕಾರ್ಯಕ್ರಮ ಸಮಾವೇಶಕ್ಕೆ ಜ.26ರಂದು ಜಿಲ್ಲಾ ಕೇಂದ್ರದ ಮೂಲಕವೂ ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರದ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ ಎಂದರು.

ಅಚ್ಚುಕಟ್ಟುತನ ಇರಲಿ:

ಭಾರತ ಸಂವಿಧಾನ ಮತ್ತು ಏಕತೆ ಕಾರ್ಯಕ್ರಮ ಆಚರಿಸುವ ನಿಟ್ಟಿನಲ್ಲಿ ಜಾಥಾ ಜಿಲ್ಲಾ ಕೇಂದ್ರದಿಂದ ಹೊರಡಲಿದೆ. ಸಂವಿಧಾನ ಮಹತ್ವ ಜಾಗೃತಿ ಕುರಿತ ವಿಡಿಯೋಗಳನ್ನು ಪ್ರದರ್ಶಿಸುವ ಎಲ್‌ಇಡಿ ವಾಹನಗಳು ಜಿಲ್ಲೆಯ ಗ್ರಾಪಂಗಳನ್ನು ತಲುಪಲಿವೆ. ಸಂವಿಧಾನ ಪೀಠಿಕೆ ಪ್ರತಿಗಳನ್ನು ಮೆರವಣಿಗೆ ವೇಳೆ ವಿತರಿಸಲಾಗುತ್ತದೆ. ಈ ವಿಶೇಷ ಕಾರ್ಯಕ್ರಮವನ್ನು ಅಧಿಕಾರಿಗಳು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ನಗರ ಹಾಗೂ ಗ್ರಾಮಗಳ ಮೂಲಕ ಮೆರವಣಿಗೆ ಈ ಸಂದರ್ಭ ಸಂವಿಧಾನದ ಪ್ರತಿಗಳ ವಿತರಣೆಗೆ ಜಿಲ್ಲಾಧಿಕಾರಿ ಸೂಚಿಸಿದರು.

ಮೆರವಣಿಗೆಯ ರಚನೆ, ಸಂಯೋಜನೆ, ಮಾರ್ಗಗಳು ತಂಗುವಿಕೆ ಇನ್ನಿತರ ವಿಷಯಗಳನ್ನು ಜಿಲ್ಲಾ ಸಮಿತಿ ರೂಪಿಸಲಿದೆ. ಸಂವಿಧಾನ ಪೀಠಿಕೆ, ನ್ಯಾಯ, ಸಾಮಾಜಿಕ, ರಾಜಕೀಯ, ಆರ್ಥಿಕ ಮತ್ತು ಸಂವಿಧಾನಶಿಲ್ಪಿ ಡಾ. ಅಂಬೇಡ್ಕರ್ ಅವರ ಪರಿಕಲ್ಪನೆ, ಸ್ಥಳೀಯ ಕಲೆ, ಸಂಸ್ಕೃತಿ, ಇನ್ನಿತರ ಮಹತ್ತರ ವಿಷಯಗಳು ಜಾಗೃತಿ ಸ್ತಬ್ಧಚಿತ್ರದಲ್ಲಿ ಒಳಗೊಳ್ಳಲಿದೆ. ನಗರ ಹಾಗೂ ಗ್ರಾಮಗಳ ಮೂಲಕ ಮೆರವಣಿಗೆ ಸಾಗಲಿದೆ ಎಂದರು.

ಸಂವಿಧಾನ ಸಂಬಂಧಿತ ವಿಷಯಗಳ ಕುರಿತ ಸ್ಪರ್ಧೆಗಳನ್ನು ಆಯೋಜಿಸಬೇಕು. ಮೆರವಣಿಗೆ ಸಾಗುವ ಸಂದರ್ಭದಲ್ಲಿ ಎಲ್ಲ ರೀತಿಯ ಸಹಕಾರ ಬೆಂಬಲವನ್ನು ನಾಗರಿಕರು, ಸರ್ಕಾರೇತರ ಸಂಸ್ಥೆಗಳಿಂದ ಪಡೆಯಬೇಕು. ಭಾರತ ಸಂವಿಧಾನ ಮತ್ತು ಅದರ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶ ಎಂದು ಹೇಳಿದರು.

ಗಣರಾಜ್ಯೋತ್ಸವ ಆಚರಣೆಗೆ ಪೂರ್ವಭಾವಿಯಾಗಿ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು. ಗಣರಾಜ್ಯೋತ್ಸವ ಸಂದರ್ಭದಲ್ಲಿ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಫಲ-ಪುಷ್ಪ ಪ್ರದರ್ಶನ ಸಹ ಆಯೋಜಿನೆ ಮಾಡಲಾಗುತ್ತಿದೆ. ಈ ಕಾರ್ಯಕ್ರಮಕ್ಕೂ ವ್ಯವಸ್ಥಿತವಾಗಿ ಎಲ್ಲ ಕಾರ್ಯಗಳನ್ನು ಕೈಗೊಳ್ಳಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಸರೋಜಾ ಜಿ.ಟಿ. ಸೇರಿ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ