ಕಾಫಿ ಬೆಳೆಗಾರರ ಸಹಕಾರ ಸಂಘದ ಬಡ್ಡಿ ಮನ್ನಾ: ಸಚಿವೆ ನಿರ್ಮಲಾರಿಗೆ ಯದುವೀರ್‌ ಮನವಿ

KannadaprabhaNewsNetwork |  
Published : Mar 08, 2026, 02:45 AM IST
ನಿರ್ಮಲಾ ಸೀತಾರಾಮ ಅವರನ್ನು ಭೇಟಿಯಾದ ಸಂಸದ ಯದುವೀರ್ ಒಡೆಯರ್. | Kannada Prabha

ಸಾರಾಂಶ

ಮಡಿಕೇರಿ: ಸಂಸದ ಯದುವೀರ್ ಒಡೆಯರ್ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘ ಲಿಮಿಟೆಡ್‌ನಿಂದ ಭಾರತೀಯ ಕಾಫಿ ಮಂಡಳಿಗೆ ಪಾವತಿಸಬೇಕಾದ ಬಡ್ಡಿಯನ್ನು ಮನ್ನಾ ಮಾಡುವಂತೆ ಕೋರಿ ಮನವಿ ಸಲ್ಲಿಸಿದರು.

ಮಡಿಕೇರಿ: ಸಂಸದ ಯದುವೀರ್ ಒಡೆಯರ್ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘ ಲಿಮಿಟೆಡ್‌ನಿಂದ ಭಾರತೀಯ ಕಾಫಿ ಮಂಡಳಿಗೆ ಪಾವತಿಸಬೇಕಾದ ಬಡ್ಡಿಯನ್ನು ಮನ್ನಾ ಮಾಡುವಂತೆ ಕೋರಿ ಮನವಿ ಸಲ್ಲಿಸಿದರು.

ಸಣ್ಣ ಕಾಫಿ ಬೆಳೆಗಾರರನ್ನು ರಕ್ಷಿಸುವ ಮತ್ತು ಈ ಪ್ರಮುಖ ಸಹಕಾರಿ ಸಂಸ್ಥೆಯನ್ನು ರಕ್ಷಿಸುವ ದೃಷ್ಟಿಯಿಂದ 2015ರಲ್ಲಿ ನೀಡಿದ ಭರವಸೆಗೆ ಅನುಗುಣವಾಗಿ ಸಚಿವರು ಮಧ್ಯಪ್ರವೇಶಿಸಿ ಕಾಫಿ ಮಂಡಳಿಗೆ ಸಹಕಾರ ಸಂಘವು ಪಾವತಿಸಬೇಕಾದ ಬಡ್ಡಿ ಮನ್ನಾಕ್ಕೆ ಶಿಫಾರಸು ಮಾಡುವಂತೆ ಒತ್ತಾಯಿಸಿದ್ದಾರೆ.

ಸಚಿವರ ಸಕಾಲಿಕ ಹಸ್ತಕ್ಷೇಪವು ಕೊಡಗಿನ ಸಾವಿರಾರು ಕಾಫಿ ಬೆಳೆಗಾರರು ಮತ್ತು ಕಾರ್ಮಿಕರ ಜೀವನೋಪಾಯವನ್ನು ಕಾಪಾಡುತ್ತದೆ ಮತ್ತು ಸುಮಾರು ಏಳು ದಶಕಗಳಿಂದ ಸಮುದಾಯಕ್ಕೆ ಸೇವೆ ಸಲ್ಲಿಸುತ್ತಿರುವ ಸಹಕಾರಿ ಸಂಸ್ಥೆಯನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೈಕ್‌ಗೆ ನಕಲಿ ನಂಬರ್‌ ಪ್ಲೇಟ್‌ ಅಳವಡಿಸಿ ಸಂಚಾರ: ಪ್ರಕರಣ ದಾಖಲು
ಸಾಲದ ಹೊರೆ ಹೆಚ್ಚಿಸಿ, ಕರಾವಳಿ ಕಡೆಗಣಿಸಿದ ಬಜೆಟ್: ಕಾಮತ್‌