ಎಂಡಿಎಯಲ್ಲಿ ನಡೆದಿರುವ ಹಗರಣದ ತನಿಖೆ ಸಿಬಿಐಗೆ ವಹಿಸಲು ಯದುವೀರ್ ಒತ್ತಾಯ

KannadaprabhaNewsNetwork |  
Published : Jul 10, 2024, 12:40 AM IST
32 | Kannada Prabha

ಸಾರಾಂಶ

, ಈಗಾಗಲೇ ಈ ಪ್ರಕರಣವನ್ನು ಸಿಬಿಐಗೆ ವಹಿಸಲು ತಿಳಿಸಿದ್ದೇನೆ. ಈ ಪ್ರಕರಣ ತುಂಬಾ ಗಂಭೀರವಾಗಿದೆ.

ಕನ್ನಡಪ್ರಭ ವಾರ್ತೆ ಮೈಸೂರು

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಎಂಡಿಎ) ನಡೆದಿರುವ ಹಗರಣದ ತನಿಖೆಯನ್ನು ರಾಜ್ಯ ಸರ್ಕಾರವು ಸಿಬಿಐಗೆ ವಹಿಸಲಿ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಒತ್ತಾಯಿಸಿದರು.

ಮೈಸೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಈ ಪ್ರಕರಣವನ್ನು ಸಿಬಿಐಗೆ ವಹಿಸಲು ತಿಳಿಸಿದ್ದೇನೆ. ಈ ಪ್ರಕರಣ ತುಂಬಾ ಗಂಭೀರವಾಗಿದೆ. ಇದರ ಜೊತೆಗೆ ಅನೇಕ ಪ್ರಭಾವಿಗಳ ಹೆಸರು ಕೂಡ ಕೇಳಿ ಬಂದಿದೆ. ಹೀಗಾಗಿ, ಈ ಪ್ರಕರಣವನ್ನು ನಿಸ್ಪಕ್ಷಪಪಾತವಾಗಿ ತನಿಖೆ ಮಾಡಬೇಕು ಎಂದರು.

ನಾವು ಕೂಡ ಇದರ ಬಗ್ಗೆ ಧ್ವನಿ ಎತ್ತುತ್ತೇವೆ. ಎಂಡಿಎ ಇರೋದು ಸಾರ್ವಜನಿಕರ ಒಳಿತಿಗಾಗಿ. ನಿವೇಶನ ವಂಚಿತ ಜನರಿಗೆ ನಿವೇಶನ ಕೊಡುವುದಕ್ಕೆ. ನಾನು ಎಂಡಿಎ ಸಭೆಯಲ್ಲಿ ಭಾಗಿಯಾದಾಗ ಇದರ ಬಗ್ಗೆ ಮಾತನಾಡುತ್ತೇನೆ ಎಂದು ಅವರು ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲಿವ್‌-ಇನ್‌ ಸಂಬಂಧಕ್ಕೆ ಜನಿಸಿದ ಮಗುವಿಗೆ ತಾಯಿ ಸರ್‌ನೇಮ್‌!
ಪಿಎಂ ಹೇಳ್ತಿರೋ ಆರೆಂಜ್‌ ಆರ್ಥಿಕತೆ ರಾಜ್ಯದಲ್ಲಿ 2016ಲ್ಲೇ ನೀತಿ ಜಾರಿ: ಡಿಕೆ