ಮೈಸೂರು ವಿಮಾನ ನಿಲ್ದಾಣಕ್ಕೆ ಯದುವೀರ್ ಭೇಟಿ

KannadaprabhaNewsNetwork |  
Published : Jul 11, 2024, 01:34 AM IST
34 | Kannada Prabha

ಸಾರಾಂಶ

ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ನಿಲ್ದಾಣ ವಿಸ್ತರಣೆ ಕಾಮಗಾರಿ ಸಂಬಂಧ ಅಧಿಕಾರಿಗಳೊಡನೆ ಚರ್ಚಿಸಿದರು

ಕನ್ನಡಪ್ರಭ ವಾರ್ತೆ ಮೈಸೂರು

ಸಂಸದ ಯದುವೀರ್ ಅವರು ಬುಧವಾರ ಮೈಸೂರು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ನಿಲ್ದಾಣ ವಿಸ್ತರಣೆ ಕಾಮಗಾರಿ ಸಂಬಂಧ ಅಧಿಕಾರಿಗಳೊಡನೆ ಚರ್ಚಿಸಿದರು.

ವಿಮಾನ ನಿಲ್ದಾಣದ ನಿರ್ದೇಶಕ ಅನೂಪ್ ಮತ್ತು ಇತರ ಅಧಿಕಾರಿಗಳ ಜತೆ ಸುಧೀರ್ಘ ಚರ್ಚೆ ನಡೆಸಿದರು. ಮೈಸೂರು ವಿಮಾನ ನಿಲ್ದಾಣದಲ್ಲಿ ದೊರೆಯುವ ಸೌಲಭ್ಯಗಳ ಸಂಪೂರ್ಣ ಮಾಹಿತಿ ಸಂಗ್ರಹಿಸಿದರು.

ಮೈಸೂರು ವಿಮಾನದ ಮೊದಲ ಹಂತ ಮತ್ತು ಎರಡನೇ ಹಂತದ ಅಭಿವೃದ್ಧಿಗೆ ಕೈಗೊಂಡಿರುವ ಕ್ರಮಗಳ ಕುರಿತು ಅಧಿಕಾರಿಗಳಿಂದ ವಿವರವಾದ ಮಾಹಿತಿ ಕಲೆ ಹಾಕಿದರು.

ಮೈಸೂರು ವಿಮಾನ ನಿಲ್ದಾಣವನ್ನು ಸಂಪೂರ್ಣವಾಗಿ ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ನಾಗರಿಕ ವಿಮಾನಯಾನ ಸಚಿವಾಲಯವು ಸಂಪೂರ್ಣ ಬೆಂಬಲ ನೀಡುತ್ತದೆ ಮತ್ತು ನಮ್ಮ ನಗರದ ವಿಮಾನ ನಿಲ್ದಾಣವು ಅತ್ಯುನ್ನತ ಗುಣಮಟ್ಟವನ್ನು ಹೊಂದಿದೆ ಎಂದರು.

ಮೈಸೂರು- ಕೊಡಗು ಸಂಪರ್ಕಕ್ಕೆ ಮೈಸೂರು ವಿಮಾನ ನಿಲ್ದಾಣವನ್ನು ಕೇಂದ್ರವಾಗಿಸುವುದು ನಮ್ಮ ಗುರಿಯಾಗಿದೆ. ಈ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲಾ ಪ್ರಯತ್ನ ನಡೆಸುವುದಾಗಿ ಅವರು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!