ಮೈಸೂರಿನಲ್ಲಿ ರಾಜಮನೆತಕ್ಕೆ ಹೆಚ್ಚಾಗಿ ಗೌರವವಿರುವ ಕಾರಣ ಹಾಗೂ ಜೆಡಿಎಸ್ ಜೊತೆಗಿನ ಮೈತ್ರಿಯಿಂದಾಗಿ ಯದುವೀರ್ ಮೊದಲ ಬಾರಿ ಚುನಾಚಣೆಯಲ್ಲೇ ಹೆಚ್ಚು ಮತಗಳ ಅಂತರದಿಂದ ಜಯಗಳಿಸಿದ್ದಾರೆ.
ಮೈಸೂರು: ಮೈಸೂರು- ಕೊಡಗು ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪ್ರತಾಪ್ ಸಿಂಹ ಅವರಿಗಿಂತಲೂ ಹೆಚ್ಚು ಮತಗಳ ಅಂತರದಿಂದ ಜಯಗಳಿಸಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ಪ್ರತಾಪ್ 6,88,974 ಮತ ಪಡೆದು, ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಿ.ಎಚ್. ವಿಜಯಶಂಕರ್ ವಿರುದ್ಧ 1,38,647 ಮತಗಳ ಅಂತರದಿಂದ ಜಯಗಳಿಸಿದ್ದರು. ಆಗ ವಿಜಯಶಂಕರ್ 5,50,327 ಮತ ಪಡೆದಿದ್ದರು.
ಈ ಬಾರಿ ಯದುವೀರ್ 795503 ಮತ ಪಡೆದಿದ್ದು, 1,39,262 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ.
ಕಾಂಗ್ರೆಸ್ ನ ಎಂ. ಲಕ್ಷ್ಮಣ್ 6,56,241 ಮತಗಳನ್ನು ಪಡೆದು ಸೋಲುಂಡಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.