ಕನ್ನಡಪ್ರಭ ವಾರ್ತೆ, ಉಡುಪಿ
ಈ ಬಗ್ಗೆ ಗುರುವಾರ ಟ್ರಸ್ಟ್ನ ಉಡುಪಿ ಘಟಕದ ಅಧ್ಯಕ್ಷ ಇಂದ್ರಾಳಿ ಜಯಕರ್ ಶೆಟ್ಟಿ ಅವರು ಸುದ್ದಿಗೋಷ್ಠಿಯಲ್ಲಿ ವಿವರಗಳನ್ನು ನೀಡಿದರು.
ಅಂದು ಬೆಳಗ್ಗೆ 9 ರಿಂದ ತೆಂಕು-ಬಡಗು ‘ನಾದವೈಕುಂಠ’ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಸ್ಥಳದಾನಿ ಪ್ರೋ.ಎಮ್ಎಲ್ ಸಾಮಗ ದಂಪತಿ, ಟ್ರಸ್ಟ್ನ ಗೌರವಾಧ್ಯಕ್ಷ ಡಾ.ಸದಾಶಿವ ಶೆಟ್ಟಿ ಕನ್ಯಾನ, ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಮೊದಲಾದವರು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.ಪೌಂಡೇಶನ್ ನ ಯಕ್ಷದ್ರುವ ಪಟ್ಲಾಶ್ರಯ ಯೋಜನೆಯಡಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 100 ಮನೆಗಳನ್ನು ನಿರ್ಮಿಸುವ ಗುರಿ ಇದೆ. ಅವುಗಳಲ್ಲಿ ಈಗಾಗಲೇ 54 ಮನೆಗಳನ್ನು ನಿರ್ಮಿಸಿ ಬಡ ಕಲಾವಿದರಿಗೆ ಹಸ್ತಾಂತರಿಸಲಾಗಿದೆ. ಉಡುಪಿಯಲ್ಲೀಗ 20 ಮನೆಗಳನ್ನು ನಿರ್ಮಿಸಲಾಗುತ್ತಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಟ್ರಸ್ಟ್ನ ಉಪಾಧ್ಯಕ್ಷ ಹರಿಪ್ರಸಾದ್ ರೈ, ಮಹಿಳಾ ವಿಭಾಗದ ಅಧ್ಯಕ್ಷೆ ನಿರುಪಮಾ ಪ್ರಸಾದ್ ಶೆಟ್ಟಿ, ಕಾರ್ಯದರ್ಶಿ ಡಾ. ವಿಟ್ಲ ಹರೀಶ್ ಜೋಷಿ, ಸಂಚಾಲಕ ಸುಧಾಕರ್ ಆಚಾರ್ಯ, ಸದಸ್ಯ ಅರುಣ್ಕುಮಾರ್ ಹೆಗ್ಡೆ ಉಪಸ್ಥಿತರಿದ್ದರು.