ಯಕ್ಷಧ್ರುವ ಪಟ್ಲ ಫೌಂಡೇಶನ್: ಮಂಗಳೂರು ಘಟಕದ ಅಷ್ಟಮ ಸಂಭ್ರಮ

KannadaprabhaNewsNetwork |  
Published : Apr 04, 2026, 02:30 AM IST
ಯಕ್ಷಧ್ರುವ ಪಟ್ಲ ಫೌಂಡೇಷನ್‌ ಮಂಗಳೂರು ಘಟಕದಿಂದ ಸಾಧಕರಿಗೆ ಸನ್ಮಾನ  | Kannada Prabha

ಸಾರಾಂಶ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮ ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ನಡೆಯಿತು.

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮ ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ನಡೆಯಿತು. ಶ್ರೀ ಮಂಗಳಾದೇವಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಎಂ.ಅರುಣ್ ಐತಾಳ್ ಮಾತನಾಡಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಯಕ್ಷಗಾನ ಕಲಾವಿದರಿಗೆ ಗಣನೀಯ ಕೊಡುಗೆ ನೀಡುತ್ತಿರುವುದು ಶ್ಲಾಘನೀಯ ಎಂದರು. ಯಕ್ಷಧ್ರುವ ಪಟ್ಲ ಫೌಂಡೇಶನ್ ಇದರ ಸ್ಥಾಪಕ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಮಾತನಾಡಿ, ಫೌಂಡೇಶನ್ ಆಶ್ರಯದಲ್ಲಿ ವಿವಿಧ ದಾನಿಗಳ ನೆರವಿನಿಂದ ಯಕ್ಷಗಾನ ಕಲಾವಿದರಿಗಾಗಿ ವೈವಿಧ್ಯಮಯ ಸೇವಾಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಕದ್ರಿಯ ಮೊಕ್ತೇಸರ ದಿಲ್ ರಾಜ್ ಆಳ್ವ ಅವರಿಗೆ ಯಕ್ಷಧ್ರುವ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶ್ರೀ ಪಾವಂಜೆ ಮೇಳದ ಯುವ ಭಾಗವತ ಭರತ್ ರಾಜ್ ಶೆಟ್ಟಿ ಹಾಗೂ ಹಾಸ್ಯಗಾರ ಸಂದೇಶ್ ಮಂದಾರ ಅವರಿಗೆ ಯಕ್ಷ ಗೌರವ ನೀಡಿ ಸನ್ಮಾನಿಸಲಾಯಿತು.

ಅತಿಥಿಗಳಾಗಿ ಉದ್ಯಮಿಗಳಾದ ರಮೇಶ್ ಶೆಟ್ಟಿ ಕಲ್ಕಾರ್, ಸಂತೋಷ್ ಪೂಂಜ, ಶ್ರೀನಿವಾಸ ಪೂಜಾರಿ ಮೆಲ್ಕಾರ್, ಸಂತೋಷ್ ಶೆಟ್ಟಿ ಬೋಳಾರ್, ಜಯಶೀಲ ಅಡ್ಯಂತಾಯ, ಟ್ರಸ್ಟಿಗಳಾದ ಆರತಿ ಆಳ್ವ, ಅನಿತಾ ಪಿಂಟೋ ಮತ್ತಿತರರು ಇದ್ದರು.

ಮಂಗಳೂರು ಘಟಕದ ಕೋಶಾಧಿಕಾರಿ ಗೋಪಿನಾಥ್ ಶೆಟ್ಟಿ ಮತ್ತು ಸುಬ್ರಹ್ಮಣ್ಯ ಭಟ್ ಇವರು ಸಂಮಾನ‌ ಪತ್ರ ವಾಚಿಸಿದರು. ಪ್ರಧಾನ ಕಾರ್ಯದರ್ಶಿ ಎ. ಕೃಷ್ಣ ಶೆಟ್ಟಿ ತಾರೆಮಾರ್ ಸ್ವಾಗತಿಸಿದರು. ಸತೀಶ್ ಶೆಟ್ಟಿ ಕೊಡಿಯಾಲಬೈಲ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಶ್ರೀ ಪಾವಂಜೆ ಮೇಳದವರಿಂದ ‘ಶ್ರೀ ತುಳಸಿ’ ಯಕ್ಷಗಾನ ಬಯಲಾಟ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತ ಚಿಕಿತ್ಸಾ ಶಿಬಿರ
ಹಾನಗಲ್ಲ ಆನಿಕೆರೆ ಕಾಲುವೆ ಕಾಮಗಾರಿ ಅವೈಜ್ಞಾನಿಕ?