ಕನ್ನಡಪ್ರಭ ವಾರ್ತೆ ಉಡುಪಿ
ಅವರು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಯಕ್ಷಗಾನ ಕಲಾರಂಗ ಆಯೋಜಿಸಿದ ೨೫ನೇ ವರ್ಷದ ಕಲಾವಿದರ ಸಮಾರಂಭದಲ್ಲಿ ಅನುಗ್ರಹ ಸಂದೇಶ ನೀಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಮಾಜಿ ಅಧ್ಯಕ್ಷರೂ, ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿ ನಿಯುಕ್ತಿಗೊಂಡ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರನ್ನು ಸ್ವಾಮೀಜಿಯವರು ಸ್ಮರಣಿಕೆ, ಶಾಲು, ಅಭಿನಂದನಾ ಪತ್ರ ನೀಡಿ ಹರಸಿದರು.ಸುಬ್ರಹ್ಮಣ್ಯ ಬೈಪಡಿತ್ತಾಯರು ಬರೆದ ಆಗಸದ ಬೆಳಕು ಪುಸ್ತಕವನ್ನು ಶ್ರೀಪಾದರು ಲೋಕಾರ್ಪಣೆಗೊಳಿಸಿದರು.
ಇದೇ ಸಂದರ್ಭದಲ್ಲಿ ವೃತ್ತಿಮೇಳದ ಕಲಾವಿದರಿಗೆ ತಮ್ಮ ಹೋಟೆಲ್ನಲ್ಲಿ ಉಚಿತವಾಗಿ ಉಪಹಾರ ನೀಡಿ ಪ್ರೋತ್ಸಾಹಿಸುತ್ತಾ ಬಂದ ಆಗುಂಬೆಯ ಗುರುರಾಜ ಅಡಿಗ ಮತ್ತು ಕೊಕ್ಕರ್ಣೆಯ ಕೆ.ಎಸ್. ಶ್ರೀನಿವಾಸ ನಾಯಕ್ ಅವರನ್ನು ಶ್ರೀಪಾದರು ಗೌರವಿಸಿದರು.
ವೇದಿಕೆಯಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಡಾ. ಎಂ. ಪ್ರಭಾಕರ ಜೋಶಿ, ಆನಂದ ಸಿ. ಕುಂದರ್, ಪಿ. ಪುರುಷೋತ್ತಮ ಶೆಟ್ಟಿ, ಬೆಳ್ವೆ ಗಣೇಶ್ ಕಿಣಿ, ಸುರೇಶ್ ನಾಯಕ್ ಕುಯಿಲಾಡಿ, ಸಿಎ ಗಣೇಶ್ ಕಾಂಚನ್, ಹರಿಯಪ್ಪ ಕೋಟ್ಯಾನ್ ಅಭ್ಯಾಗತರಾಗಿ ಭಾಗವಹಿಸಿದ್ದರು.ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ನಾರಾಯಣ ಎಂ. ಹೆಗಡೆ ವಂದಿಸಿದರು. ಎಚ್.ಎನ್. ಶೃಂಗೇಶ್ವರ ಸಹಕರಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು.