ಕನ್ನಡಪ್ರಭ ವಾರ್ತೆ ಬ್ರಹ್ಮಾವರ
ಬಾಲ್ಯದ ತನ್ನ ಕಷ್ಟದ ದಿನಗಳನ್ನು ಸ್ಮರಿಸಿಕೊಂಡು ತನ್ನ ತಾಯಿಯ ತ್ಯಾಗ ಮತ್ತು ತನಗೆ ವಿದ್ಯೆ ನೀಡಿದ ಗುರುಗಳ ಸಹಾಯ, ಮಾರ್ಗದರ್ಶನ ನನ್ನ ಸಾಧನೆಗೆ ಮೂಲ ಪ್ರೇರಣೆ, ದಾನ ಮಾಡುತ್ತಾ ನಾನು ಸಂತೋಷ ಅನುಭವಿಸುತ್ತೇನೆ ಎಂದು ಹೇಳಿದರು.
ಅಧ್ಯಕ್ಷ ಸ್ಥಾನದಿಂದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಯಕ್ಷಗಾನ ಕಲಾರಂಗದ ಕೆಲಸ ಅಗಾಧ. ಸಮಾಜದ ಕಷ್ಟಕ್ಕೆ ಶೀಘ್ರವಾಗಿ ಸ್ಪಂದಿಸುವ ಪರಿ ಅನನ್ಯ ಎಂದು ಅಭಿಪ್ರಾಯ ಪಟ್ಟರು.ಕೋಟ ವಿವೇಕ ಪ. ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ. ಜಗದೀಶ ನಾವುಡರು ತಮ್ಮ ಸಂಸ್ಥೆಯಲ್ಲಿ ಸುಶ್ಮಿತಾಳಿಗೆ ಯಾವುದೇ ಆರ್ಥಿಕ ಹೊರೆ ಬೀಳದಂತೆ ಶಿಕ್ಷಣ ನೀಡಲಾಗುವುದು ಎಂದು ನುಡಿದರು.
ಯಕ್ಷಗಾನ ಕಲಾರಂಗದ ಎಸ್. ವಿ. ಭಟ್, ಕೆ. ಸದಾಶಿವ ರಾವ್, ಯು. ವಿಶ್ವನಾಥ ಶೆಣೈ, ಯು. ಎಸ್. ರಾಜಗೋಪಾಲ ಆಚಾರ್ಯ, ಭುವನಪ್ರಸಾದ ಹೆಗ್ಡೆ, ವಿಜಯ ಕುಮಾರ ಮುದ್ರಾಡಿ, ಅನಂತರಾಜ ಉಪಾಧ್ಯಾಯ, ರಾಜೇಶ್ ನಾವುಡ, ಎಚ್. ಎನ್. ವೆಂಕಟೇಶ್, ಕೆ. ಅಜಿತ್ ಕುಮಾರ್, ನಿರಂಜನ್ ಭಟ್, ಗಣಪತಿ ಭಟ್ ಹಾಗೂ ಕಿಶೋರ್ ಪಾಲ್ಗೊಂಡರು.
ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ನಾರಾಯಣ ಎಂ. ಹೆಗಡೆ ವಂದಿಸಿದರು. ಪ್ರಾಸ್ತಾವಿಕ ಮಾತುಗಳೊಂದಿಗೆ ಕಾರ್ಯದರ್ಶಿ ಮುರಲಿ ಕಡೆಕಾರ್ ನಿರೂಪಿಸಿದರು.