ಯಕ್ಷಗಾನ ಪ್ರದರ್ಶನ, ಅಭ್ಯಾಸಕ್ಕೆ ಪ್ರಾದೇಶಿಕ ಚೌಕಟ್ಟಿನ ಭಯವಿಲ್ಲ: ಡಾ.ತಲ್ಲೂರು

KannadaprabhaNewsNetwork |  
Published : Mar 13, 2025, 12:50 AM IST
12ತಲ್ಲೂರು | Kannada Prabha

ಸಾರಾಂಶ

ಭಾನುವಾರ ಗೋವಾ ಪಣಜಿಯ ಕನ್ನಡ ಸಮಾಜದ ಆಶ್ರಯದಲ್ಲಿ ಮೆನೆಜಸ್ ಭ್ರಗಾಂಜ ಸಭಾಂಗಣದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ಸಹಕಾರದಲ್ಲಿ ಯಕ್ಷ ಶರಧಿ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ, ಉಡುಪಿ

ಯಕ್ಷಗಾನ ಕಲೆ ಕಲಿಯಲು, ಅಭ್ಯಾಸಿಸಲು ಯಾವುದೇ ಪ್ರಾದೇಶಿಕ ಸರಹದ್ದಿನ ಭಯವಿಲ್ಲ. ಈ ನಿಟ್ಟಿನಲ್ಲಿ ಗೋವಾದ ಕನ್ನಡ ಸಮಾಜ ಯಕ್ಷಗಾನ ಪ್ರೇಮ ಮೆರೆದಿರುವುದು ಅಭಿನಂದನೀಯ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದ್ದಾರೆ.

ಭಾನುವಾರ ಗೋವಾ ಪಣಜಿಯ ಕನ್ನಡ ಸಮಾಜದ ಆಶ್ರಯದಲ್ಲಿ ಮೆನೆಜಸ್ ಭ್ರಗಾಂಜ ಸಭಾಂಗಣದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ಸಹಕಾರದಲ್ಲಿ ಹಮ್ಮಿಕೊಂಡ ಯಕ್ಷ ಶರಧಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಡಿದರು.

ಇಂದು ಯಕ್ಷಗಾನ ಸೀಮೋಲ್ಲಂಘನೆ ನಡೆಸಿದೆ. ಬೆಂಗಳೂರು, ಮುಂಬಾಯಿ, ದೆಹಲಿ ಅಲ್ಲದೆ ಅಮೇರಿಕಾದಲ್ಲಿಯೂ ತನ್ನ ಕಂಪನ್ನು ಬೀರುತ್ತಿದೆ. ಅಪಾರ ಯಕ್ಷಗಾನ ಪ್ರೇಮಿಗಳನ್ನು ಹುಟ್ಟುಹಾಕಿದೆ. ಅಕಾಡೆಮಿ ಇಂತಹ ಯಕ್ಷಗಾನ ಕಾರ್ಯಕ್ರಮಗಳಿಗೆ ನಿರಂತರ ಪ್ರೋತಾಹ ನೀಡಲಿದೆ. ಯಕ್ಷಗಾನ ಕಲೆ ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು. ದೇಶ ವಿದೇಶದಿಂದಲೂ ಇನ್ನೂ ಹೆಚ್ಚಿನ ಪ್ರೋತ್ಸಾಹ ಸಿಗಬೇಕು. ಈ ನಿಟ್ಟಿನಲ್ಲಿ ಗೋವಾ ಕನ್ನಡ ಸಮಾಜದ ಕಲಾಸೇವೆ ಅನುಕರಣೀಯ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಗೋವಾ ಬಂಟ್ಸ್ ಸಂಘ ಮತ್ತು ಮಡಗಾಂವ್ ವಿಮಾ ಸರ್ವೇಯರ್ ಸಂಸ್ಥೆಯ ಕಾರ್ಯದರ್ಶಿ ಸುನೀಲ್ ಶೆಟ್ಟಿ, ಪತ್ರಕರ್ತ ಹಾಗೂ ಭಾಗವತ ಎ.ಜಿ.ಶಿವಾನಂದ ಭಟ್, ಗೋವಾ ವಿಶ್ವವಿದ್ಯಾಲಯದ ಸಮಾಜ ಶಾಸ್ತ್ರದ ಹಿರಿಯ ಪ್ರಾಧ್ಯಾಪಕ ಡಾ.ಗಣೇಶ್ ಸೋಮಯಾಜಿ ಯಕ್ಷಗಾನ ಕಲೆಯ ಮಹತ್ವ ಸಾರಿದರು.

ಅರ್ಥಧಾರಿ ಅಜಿತ್ ಕಾರಂತ ಬೆಂಗಳೂರು ಇವರು ಯಕ್ಷಸಾಹಿತ್ಯ ಸಾಂಗತ್ಯ ಎಂಬ ವಿಷಯದ ಬಗ್ಗೆ ಮಾತನಾಡಿದರು. ಹೊನ್ನವಳ್ಳಿಯ ಶ್ರೀ ವೆಂಕಟೇಶ್ವರ ಯಕ್ಷಗಾನ ಕಲಾ ಸಂಘದ ವತಿಯಿಂದ ಶರಸೇತು ಬಂಧನ ತಾಳಮದ್ದಲೆ ಹಾಗೂ ಶ್ರೀ ಸುಬ್ರಹ್ಮಣ್ಯೇಶ್ವರ ಯಕ್ಷಗಾನ ಮಂಡಳಿ ಹಳುವಳ್ಳಿ ಕಳಸ ಇವರಿಂದ ಸುಧನ್ವಾರ್ಜುನ ಯಕ್ಷಗಾನ ಪ್ರದರ್ಶನ ನಡೆಯಿತು.

ಯಕ್ಷಗಾನ ಅಕಾಡೆಮಿಯ ರಿಜಿಸ್ಟ್ರಾರ್ ನಮ್ರತಾ ಎನ್., ಗೋವಾ ಕನ್ನಡ ಸಮಾಜದ ಅಧ್ಯಕ್ಷ ಅರುಣ್ ಕುಮಾರ್, ಕಾರ್ಯದರ್ಶಿ ಶ್ರೀಕಾಂತ್ ಲೋಣಿ, ಯಕ್ಷಗಾನ ಅಕಾಡೆಮಿ ಸದಸ್ಯ ಸಂಚಾಲಕ ಕೊಪ್ಪಲ ಮೋಹನ ಕದ್ರಿ, ಸದಸ್ಯರಾದ ಜಿ.ಎಸ್.ಉಲ್ಲಾಳ್, ಗುರುರಾಜ ಭಟ್, ರಾಜೇಶ್, ರಾಘವ, ಪುಟ್ಟಸ್ವಾಮಿ, ದಯಾನಂದ ಬೆಳ್ಳಾಲ, ಪ್ರಥ್ವಿ ರಾಜೇಶ್ ಕುಮಾರ್ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾವೂರು ಶ್ರೀ ಗೋಪಾಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ ಸಂಪನ್ನ
ಸಚಿವ ತಿಮ್ಮಾಪುರ ಬೆಂಬಲಿಸಿ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ