ವಿದ್ಯಾರ್ಥಿನಿ ಸಾನ್ವಿತಳಿಗೆ ಮನೆ ಹಸ್ತಾಂತರ

KannadaprabhaNewsNetwork |  
Published : May 30, 2026, 02:30 AM IST
29ಮನೆ | Kannada Prabha

ಸಾರಾಂಶ

ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ಯೋಜನೆ ವತಿಯಿಂದ ಇಲ್ಲಿನ ಅಮಾಸೆಬೈಲಿನ ಸರಕಾರಿ ಪ್ರೌಢಶಾಲೆಯ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸಾನ್ವಿತಳಿಗೆ (ಶೋಭಾ-ಸುರೇಶ್ ಕೊಠಾರಿ ದಂಪತಿ ಪುತ್ರಿ) ಅಮಾಸೆಬೈಲಿನಲ್ಲಿ ಉಡುಪಿ ಅಂಬಲಪಾಡಿಯ ದಿವಂಗತ ರಾಮಮೂರ್ತಿ ಭಟ್ಟರ ನೆನಪಿನಲ್ಲಿ ಮೀರಾ ರಾಮಮೂರ್ತಿ ಭಟ್ಟ ಮತ್ತು ಮಕ್ಕಳು ನಿರ್ಮಿಸಿದ ನೂತನ ಮನೆ ‘ರಾಮಮೂರ್ತಿ’ ಗುರುವಾರ ಉದ್ಘಾಟನೆಗೊಂಡಿತು.

ಕುಂದಾಪುರ: ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ಯೋಜನೆ ವತಿಯಿಂದ ಇಲ್ಲಿನ ಅಮಾಸೆಬೈಲಿನ ಸರಕಾರಿ ಪ್ರೌಢಶಾಲೆಯ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸಾನ್ವಿತಳಿಗೆ (ಶೋಭಾ-ಸುರೇಶ್ ಕೊಠಾರಿ ದಂಪತಿ ಪುತ್ರಿ) ಅಮಾಸೆಬೈಲಿನಲ್ಲಿ ಉಡುಪಿ ಅಂಬಲಪಾಡಿಯ ದಿವಂಗತ ರಾಮಮೂರ್ತಿ ಭಟ್ಟರ ನೆನಪಿನಲ್ಲಿ ಮೀರಾ ರಾಮಮೂರ್ತಿ ಭಟ್ಟ ಮತ್ತು ಮಕ್ಕಳು ನಿರ್ಮಿಸಿದ ನೂತನ ಮನೆ ‘ರಾಮಮೂರ್ತಿ’ ಗುರುವಾರ ಉದ್ಘಾಟನೆಗೊಂಡಿತು.

ಜ್ಯೋತಿ ಬೆಳಗಿಸಿದ ಮೀರಾ ರಾಮಮೂರ್ತಿ ಭಟ್ಟರು ಮಾತನಾಡಿ, ಕೆರೆಯ ನೀರನು ಕೆರೆಗೆ ಚೆಲ್ಲಿ ಎಂಬ ದಾಸರ ಕೀರ್ತನೆಯನ್ನು ಉದ್ಧರಿಸಿ, ನಾನು ಕೊಟ್ಟಿದ್ದಲ್ಲ, ಭಗವಂತ ನನಗೆ ನೀಡಿದ್ದರಲ್ಲಿ ಒಂದಶವನ್ನು ದಾನ ಮಾಡಿದ್ದೇನೆ. ಸಾನ್ವಿತಾಳಿಗೆ ಶುಭವಾಗಲಿ ಎಂದರು. ಅಧ್ಯಕ್ಷತೆ ವಹಿಸಿದ್ದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಕಲಾರಂಗದವರು ಯಾವ ಆಡಂಬರ, ದುಂದು ವೆಚ್ಚ ಮಾಡದೆ, ಪ್ರಚಾರ ಅಪೇಕ್ಷಿಸದೆ ಮಾಡುತ್ತಿರುವ ಸಮಾಜಪರ ಕೆಲಸಗಳು ನನಗೆ ಬಹಳ ಇಷ್ಟವಾಗಿವೆ. ಅವರ ಅಭಿಮಾನಿಯಾಗಿ ಬಂದು ಆನಂದ ಅನುಭವಿಸುತ್ತಿದ್ದೇನೆ ಎಂದರು. ರಾಮ ಮೂರ್ತಿಯವರ ಮಕ್ಕಳಾದ ಮನು ಭಾರದ್ವಾಜ್, ಡಾ. ಪೂರ್ಣಶ್ರೀ ಮಾತನಾಡಿ, ಈ ಕಾರ್ಯಕ್ರಮಕ್ಕೆ ಬಂದಿದ್ದರಿಂದ ಕಲಾ ರಂಗದರ ಸಮಾಜಪರ ಕಳಕಳಿಯ ದರ್ಶನವಾಯಿತು. ಈ ಸಂಸ್ಥೆಯೊಂದಿಗೆ ನಾವು ಸದಾ ಇರುತ್ತೇವೆ ಎಂದು ಹೇಳಿದರು.

ಕೋಟೇಶ್ವರ ಗೀತಾ ಎಚ್.ಎಸ್.ಎನ್. ಫೌಂಡೇಶನ್ ಅಧ್ಯಕ್ಷ ಎ. ಶಂಕರ ಐತಾಳ್, ಶಿಕ್ಷಣ ಪ್ರೇಮಿ ಸಖಾರಾಮ್ ಸೋಮಯಾಜಿ, ಸಹನಾ ಭಾರದ್ವಾಜ್, ಮೂಕಾಂಬಿಕಾ ವಾರಂಬಳ್ಳಿ ಅಭ್ಯಾಗತರಾಗಿ ಭಾಗವಹಿಸಿದ್ದರು. ನಿರಂಜನ ಬಲ್ಲಾಳ್, ಲಲಿತಾ ಬಲ್ಲಾಳ್, ಯಶೋದಾ ನಾಗೇಶನ್, ಶ್ಯಾಮಲಾ ಪ್ರಸಾದ್, ದೇವಕಿ ಉಪಸ್ಥಿತರಿದ್ದರು. ಯಕ್ಷಗಾನ ಕಲಾರಂಗದ ಪ್ರೊ. ಕೆ. ಸದಾಶಿವ ರಾವ್, ವಿದ್ಯಾಪ್ರಸಾದ್, ಯು. ವಿಶ್ವನಾಥ ಶೆಣೈ, ವಿಜಯಕುಮಾರ್ ಮುದ್ರಾಡಿ, ಭುವನಪ್ರಸಾದ್ ಹೆಗ್ಡೆ, ಅನಂತರಾಜ್ ಉಪಾಧ್ಯ, ಡಾ. ರಾಜೇಶ್ ನಾವುಡ, ಹಿರಿಯಣ್ಣ ಕಿದಿಯೂರು, ಕೆ. ಅಜಿತ್ ಕುಮಾರ್, ಡಾ. ಪ್ರತಿಮಾ ಜೆ. ಆಚಾರ್ಯ, ಜಯರಾಮ ಪಡಿಯಾರ್, ವಿನೋದಾ ಎಂ. ಹಾಗೂ ಡಾ. ಶ್ರೀಕಾಂತ್ ಸಿದ್ಧಾಪುರ, ವಿಶ್ವನಾಥ ಶೆಟ್ಟಿ, ಕೃಷ್ಣ ಪೂಜಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿ, ನಾರಾಯಣ ಎಂ. ಹೆಗಡೆ ವಂದಿಸಿದರು. ಮುರಲಿ ಕಡೆಕಾರ್ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪುರಸಭೆ ನಿರ್ಲಕ್ಷ್ಯ ಧೋರಣೆ ಆರೋಪ: ಮಾಜಿ ಸದಸ್ಯ ಪ್ರತಿಭಟನೆ
ಕೊಡಗು ಜಿಲ್ಲೆಗೆ ಸಚಿವ ಸ್ಥಾನ ನಿರೀಕ್ಷೆ!