ಯಲ್ಲಮ್ಮದೇವಿ ಜಾತ್ರೆ: ಭಂಡಾರದಲ್ಲಿ ಮಿಂದೆದ ಭಕ್ತರು

KannadaprabhaNewsNetwork |  
Published : Apr 28, 2024, 01:15 AM IST
ನಂದಗಾಂವ ಗ್ರಾಮದ ಶಕ್ತಿ ದೇವತೆ ಯಲ್ಲಮ್ಮ ದೇವಿ ಜಾತ್ರೆಯಲ್ಲಿ ಬಂಡಾರದಲ್ಲಿ ಮಿಂದೆದ್ದ ಭಕ್ತರು. | Kannada Prabha

ಸಾರಾಂಶ

ಮಹಾಲಿಂಗಪುರ ಸಮೀಪದ ನಂದಗಾಂವ ಗ್ರಾಮದ ಶಕ್ತಿ ದೇವತೆ ಯಲ್ಲಮ್ಮ ದೇವಿ ಜಾತ್ರಾ ಮಹೋತ್ಸವ ಅತ್ಯಂತ ಅದ್ದೂರಿಯಾಗಿ ಜರುಗಿತು.

ಕನ್ನಡಪ್ರಭ ವಾರ್ತೆ ಮಹಾಲಿಂಗಪುರ

ಸಮೀಪದ ನಂದಗಾಂವ ಗ್ರಾಮದ ಶಕ್ತಿ ದೇವತೆ ಯಲ್ಲಮ್ಮ ದೇವಿ ಜಾತ್ರಾ ಮಹೋತ್ಸವ ಅತ್ಯಂತ ಅದ್ದೂರಿಯಾಗಿ ಜರುಗಿತು.

ಊರಿನ ಭಕ್ತರು ಮೊದಲ ದಿನ ಸೋಮವಾರ ಘಟಪ್ರಭಾ ನದಿಯಲ್ಲಿ ಪವಿತ್ರ ಸ್ಥಾನ ಮಾಡಿ ತಾಯಿಯ ಗುಡಿಯವರೆಗೆ ದೀಡ್‌ ನಮಸ್ಕಾರ ಹಾಕಿ ಹರಕೆ ತೀರಿಸಿದರು. ಮಂಗಳವಾರ ದೇವಿ ವಿಶೇಷ ಹೂವಿನ ಅಲಂಕಾರ ಮಾಡಿ ದೇವಿಯನ್ನು ಪೂಜಿಸಿ, ನೈವೇದ್ಯ ಅರ್ಪಿಸಿದರು.

ಬುಧವಾರ ಕುಂಭಮೇಳ, ದೇವಿ (ಜಗ )ಪಲ್ಲಕ್ಕಿಯನ್ನು ಸಕಲ ಮಂಗಳವಾದ್ಯಗಳೊಂದಿಗೆ ನದಿವರೆಗೆ ಭವ್ಯ ಮೆರವಣಿಗೆ ಮೂಲಕ ಒಯ್ಯಲಾಯಿತು. ಮೆರವಣಿಯುದ್ದಕ್ಕೂ ಭಕ್ತರು ಭಂಡಾರದ ಮಳೆಗರೆದರು. ನದಿ ತಲುಪಿದ ಬಳಿಕ ಮುತ್ತೈದೆಯರಿಗೆ ಉಡಿ ತುಂಬಿ ಮರಳಿ ದೇವಿಯನ್ನು ದೇವಸ್ಥಾನಕ್ಕೆ ಕರೆತರಲಾಯಿತು. ಮಹಾಮಂಗಳಾರತಿ, ಬಳಿಕ ಮಹಾಪ್ರಸಾದದೊಂದಿಗೆ ಜಾತ್ರೆ ಸಂಪನ್ನಗೊಂಡಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!