ನಾಗಮಂಗಲ ಕೃಷಿ ಸಹಕಾರ ಸಂಘದ ಅಧ್ಯಕ್ಷರಾಗಿ ಯತೀಶ್ ಆರ್. ಈಡಿಗ ಅವಿರೋಧ ಆಯ್ಕೆ

KannadaprabhaNewsNetwork |  
Published : Aug 13, 2025, 12:30 AM IST
12ಕೆಎಂಎನ್ ಡಿ17 | Kannada Prabha

ಸಾರಾಂಶ

ಈ ಸಂಸ್ಥೆಯ ಜವಾಬ್ದಾರಿ ವಹಿಸಿರುವ ಸಚಿವ ಎನ್.ಚಲುವರಾಯಸ್ವಾಮಿ ಸೇರಿ ಕಾಂಗ್ರೆಸ್ ಪಕ್ಷದ ಎಲ್ಲ ಮುಖಂಡರಿಗೆ ಅಭಿನಂದಿಸುವುದಾಗಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ನಾಗಮಂಗಲ

ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಮುದ್ದೇಗೌಡನಕೊಪ್ಪಲು ಗ್ರಾಮದ ಯತೀಶ್ ಆರ್ .ಈಡಿಗ ಅವಿರೋಧವಾಗಿ ಆಯ್ಕೆಯಾದರು.

ಹಿಂದಿನ ಅಧ್ಯಕ್ಷೆ ತುಪ್ಪದಮಡು ಚಿಕ್ಕಮ್ಮರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ಯತೀಶ್ ಆರ್.ಈಡಿಗ ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆ ಯತೀಶ್ ಆರ್.ಈಡಿಗ ಅವಿರೋಧ ಆಯ್ಕೆಯಾಗಿದ್ದಾರೆಂದು ಸಹಕಾರ ಇಲಾಖೆ ಸಿಡಿಒ ಹಾಗೂ ಚುನಾವಣಾಧಿಕಾರಿ ಆನಂದ ನಾಯಕ್ ಪ್ರಕಟಿಸಿದರು.

ನೂತನ ಅಧ್ಯಕ್ಷ ಯತೀಶ್ ಆರ್.ಈಡಿಗ ಅವರಿಗೆ ಪ್ರಭಾರ ಅಧ್ಯಕ್ಷೆ ಆರ್.ಎ.ಗೀತಾ ಅಧಿಕಾರ ಹಸ್ತಾಂತರಿಸಿದರು. ಸಂಘದ ಕಾರ್ಯದರ್ಶಿ ಎಂ.ಕೆ.ಮೋಹನ್‌ರಾಜ್ ಪ್ರಾಸ್ತಾವಿಕ ನುಡಿಯೊಂದಿಗೆ ಸ್ವಾಗತಿಸಿದರು. ಯತೀಶ್ ಅವಿರೋಧ ಆಯ್ಕೆಯಾಗುತ್ತಿದ್ದಂತೆ ಸಂಘದ ಮುಂಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಾರ್ವಜನಿಕರಿಗೆ ಸಿಹಿ ವಿತರಿಸುವ ಮೂಲಕ ವಿಜಯೋತ್ಸವ ಆಚರಿಸಿದರು.

ನೂತನ ಅಧ್ಯಕ್ಷ ಯತೀಶ್ ಆರ್.ಈಡಿಗ ಮಾತನಾಡಿ, ತಾಲೂಕಿನ ಹಿರಿಯ ಸಹಕಾರಿ ಟಿ.ಎನ್.ಮಾದಪ್ಪಗೌಡರು ಸ್ಥಾಪಿಸಿರುವ ಈ ಸಂಸ್ಥೆ ಕಾರ್ಯಚಟುವಟಿಕೆಗಳನ್ನು ಮತ್ತಷ್ಟು ಹೆಚ್ಚು ಮಾಡುವ ಜೊತೆಗೆ, ಆಡಳಿತ ಮಂಡಳಿ ಎಲ್ಲ ನಿರ್ದೇಶಕರ ಮತ್ತು ಹಿರಿಯ ಸಹಕಾರಿಗಳ ಸಲಹೆ, ಮಾರ್ಗದರ್ಶನ ಪಡೆದು ಅಭಿವೃದ್ಧಿಗೆ ಪೂರಕವಾಗಿ ಕ್ರಮವಹಿಸಲಾಗುವುದು. ಈ ಸಂಸ್ಥೆಯ ಜವಾಬ್ದಾರಿ ವಹಿಸಿರುವ ಸಚಿವ ಎನ್.ಚಲುವರಾಯಸ್ವಾಮಿ ಸೇರಿ ಕಾಂಗ್ರೆಸ್ ಪಕ್ಷದ ಎಲ್ಲ ಮುಖಂಡರಿಗೆ ಅಭಿನಂದಿಸುವುದಾಗಿ ತಿಳಿಸಿದರು.

ಈ ವೇಳೆ ಎಂಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಚ್.ಎಸ್.ನರಸಿಂಹಯ್ಯ, ಕೆ.ವಿ.ದಿನೇಶ್, ಯುವ ಮುಖಂಡ ಸುನಿಲ್‌ ಲಕ್ಷ್ಮೀಕಾಂತ್, ಬ್ರಹ್ಮದೇವರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಚ್ಚಿನ್ ಚಲುವರಾಯಸ್ವಾಮಿ, ಸಂಸ್ಥೆ ಮಾಜಿ ಅಧ್ಯಕ್ಷರಾದ ಎಚ್.ಎನ್.ಗಿರೀಶ್, ತಿಮ್ಮಪ್ಪ, ಎಸ್.ಸಿ.ಚೇತನ್‌ಕುಮಾರ್, ಚಿಕ್ಕಮ್ಮ, ಉಪಾಧ್ಯಕ್ಷೆ ಆರ್.ಎ.ಗೀತಾ, ನಿರ್ದೇಶಕರಾದ ಬಿ.ರಾಜೇಗೌಡ, ಡಿ.ಬಿ.ರಾಜಯ್ಯ, ಸವಿತಾ ರಾಮು, ಆಶಾ, ಸರ್ಕಾರಿ ನಾಮನಿರ್ದೇಶಿತ ಸದಸ್ಯ ಮೋಹನ್‌ಕುಮಾರ್, ಜೆ.ಪಿ.ಉಮೇಶ್, ಮುಖಂಡರಾದ ಪ್ರವೀಣ್, ಕಲ್ಲುಕೊಂಬರಿ ಗೋವಿಂದ, ಬಿ.ಆರ್.ಕುಮಾರ್ ಸೇರಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.

---------

12ಕೆಎಂಎನ್ ಡಿ17

ನಾಗಮಂಗಲ ಟಿಎಪಿಸಿಎಂಎಸ್‌ಗೆ ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ಯತೀಶ್ ಆರ್.ಈಡಿಗ ಅವರನ್ನು ಆಡಳಿತ ಮಂಡಳಿಯ ನಿರ್ದೇಶಕರು ಅಭಿನಂದಿಸಿದರು.

PREV

Recommended Stories

ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!