ಮುದ್ದೇಬಿಹಾಳದಲ್ಲಿ ನಾಳೆ ಯಡಿಯೂರಪ್ಪ ರೋಡ್‌ ಶೋ

KannadaprabhaNewsNetwork |  
Published : Apr 26, 2024, 12:49 AM IST
ತಾಳಿಕೋಟೆ 2 | Kannada Prabha

ಸಾರಾಂಶ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಏ.27 ರಂದು ಮುದ್ದೇಬಿಹಾಳಕ್ಕೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ(ಕೂಚಬಾಳ) ತಿಳಿಸಿದರು.

ತಾಳಿಕೋಟೆ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಏ.27 ರಂದು ಮುದ್ದೇಬಿಹಾಳಕ್ಕೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ(ಕೂಚಬಾಳ) ತಿಳಿಸಿದರು.

ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಪರ ಮತಯಾಚನೆ ಮಾಡಲು ಆಗಮಿಸುತ್ತಿದ್ದು ಅಂದು ಬೆಳಗ್ಗೆ 11 ಗಂಟೆಗೆ ಮುದ್ದೇಬಿಹಾಳದ ಶ್ರೀ ಬನಶಂಕರಿ ದೇವಸ್ಥಾನದ ಆವರಣದಲ್ಲಿ ನಡೆಯಲಿರುವ ಕಾರ್ಯಕರ್ತರ ಬೃಹತ್ ಸಭೆಯಲ್ಲಿ ಅವರು ಮಾತನಾಡಲಿದ್ದಾರೆ ಎಂದು ಹೇಳಿದರು.

ಸಭೆಯಲ್ಲಿ ಮುದ್ದೇಬಿಹಾಳ ಕ್ಷೇತ್ರದಿಂದ ಕನಿಷ್ಠ ೨೦ ಸಾವಿರಕ್ಕೂ ಅಧಿಕ ಕಾರ್ಯಕರ್ತರು ಪಾಲ್ಗೊಳ್ಳಲಿದ್ದು, ಕಾರ್ಯಕ್ರಮಕ್ಕೂ ಮುಂಚೆ ಪಟ್ಟಣದ ಮುಖ್ಯ ರಸ್ತೆಯಲ್ಲಿ ರೋಡ್‌ ಶೋ ಮೂಲಕ ಮತಯಾಚನೆ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಎನ್‌ಡಿಎ ಅಭ್ಯರ್ಥಿ ರಮೇಶ ಜಿಗಜಿಣಗಿ, ದೇವರ ಹಿಪ್ಪರಗಿ ಮತಕ್ಷೇತ್ರದ ಶಾಸಕ ರಾಜುಗೌಡ ಪಾಟೀಲ (ಕು.ಸಾಲವಾಡಗಿ), ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಎ.ಎಸ್.ಪಾಟೀಲ(ನಡಹಳ್ಳಿ), ಎಸ್.ಕೆ.ಬೆಳ್ಳುಬ್ಬಿ, ಅರುಣ ಶಹಾಪೂರ, ಸೋಮನಗೌಡ ಪಾಟೀಲ(ಸಾಸನೂರ) ಒಳಗೊಂಡಂತೆ ಜಿಲ್ಲೆಯ ಮಾಜಿ ಶಾಸಕರು, ಮುಖಂಡರು ಭಾಗಿಯಾಗಲಿದ್ದಾರೆಂದು ಆರ್.ಎಸ್.ಪಾಟೀಲ(ಕೂಚಬಾಳ) ತಿಳಿಸಿದರು. ಕಾರಣ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಎಲ್ಲ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು