ವೈಎಂಸಿಎ ಸಂಸ್ಥಾಪಕರ ದಿನಾಚರಣೆ: ವಿದ್ಯಾರ್ಥಿಗಳಿಗೆ ಸನ್ಮಾನ

KannadaprabhaNewsNetwork |  
Published : Jun 17, 2025, 12:06 AM ISTUpdated : Jun 17, 2025, 12:07 AM IST
ಭದ್ರಾವತಿ ನಗರದ ನ್ಯೂಟೌನ್ ವೈಎಂಸಿಎ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ  ಅಭಿನಂದಿಸಲಾಯಿತು. | Kannada Prabha

ಸಾರಾಂಶ

ನಗರದ ನ್ಯೂಟೌನ್ ವೈಎಂಸಿಎ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಭದ್ರಾವತಿ : ನಗರದ ನ್ಯೂಟೌನ್ ವೈಎಂಸಿಎ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.ನ್ಯೂಟೌನ್ ವೇನ್ಸ್ ಚರ್ಚ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮ ಕ್ರೈಸ್ತ ಅಭಿವೃದ್ಧಿ ಮಂಡಳಿ ನಿರ್ದೇಶಕ, ಬಿಗ್ ಜೆಟಿವಿ ಮಾಲೀಕ ಪ್ರಶಾಂತ್ ಜತನ್ನ ಉದ್ಘಾಟಿಸಿದರು. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ಅಶ್ರಿತ ರೆಬೆಲ್ಲೊ, ರೈಯಾನ್ ಮಥಾಯ್ , ಎಸ್.ಜೆ ಶೈನಿ ಅಂಗೆಲ್, ಜೆ.ಎ ಎಸ್ತರ್ ಮತ್ತು ಎ. ಡಾಲ್ವಿನ್ ಹಾಗು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ದೀಕ್ಷಾ, ಜಾಸ್ವಾ ಥಾಮಸ್, ಸಾಮ್ಯುಯೆಲ್, ಸಂಧ್ಯಾ, ತೆರೇಸಾ ಡೆಲ್ಸಿ, ಜೆಮಿಮಾ ಜಾಸ್ಫರ್, ಕೃಪ ಶರೋನ್ ಮತ್ತು ಸಹನಾ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಸಂಘದ ಅಧ್ಯಕ್ಷ ಮೋಸಸ್ ರೋಸಯ್ಯ ಅಧ್ಯಕ್ಷತೆ ವಹಿಸಿದ್ದರು. ಕೆಪಿಸಿಸಿ ಕಾರ್ಯದರ್ಶಿ, ವೈದ್ಯರ ಘಟಕದ ರಾಜ್ಯಾಧ್ಯಕ್ಷ ಡಾ. ಪ್ರದೀಪ್ ಡಿ'''''''' ಮೆಲ್ಲೋ, ಜೋಸೆಫ್ ಶಿಕ್ಷಣ ಸಂಸ್ಥೆ ಸಂಸ್ಥಾಪಕಿ ಲತಾ ರಾಬರ್ಟ್ ಡಿ''''''''ಸೋಜಾ, ಯುವ ಮುಖಂಡ ಬಿ.ಎಸ್ ಗಣೇಶ್, ವೈಎಂಸಿಎ ಉಡುಪಿ ಯೋಜನಾ ವಿಭಾಗದ ಕಾರ್ಯದರ್ಶಿ ರೇವರೆಂಡ್ ಧನರಾಜ್, ವೆಸ್ಲಿ ಕಾರ್ಕಡ, ಯುಸಿಎ ಅಧ್ಯಕ್ಷ ಸೆಲ್ವರಾಜ್, ನಗರಸಭೆ ಸದಸ್ಯ ಐ.ವಿ ಸಂತೋಷ್, ಮಾಜಿ ಸದಸ್ಯ ಫ್ರಾನ್ಸಿಸ್, ಟಿಸಿಡಬ್ಲ್ಯುಎ ಭಾಸ್ಕರ್ ಬಾಬು, ಮುಖಂಡರಾದ ದಾಸ್, ಎಂ.ಜಿ ರಾಮಚಂದ್ರನ್ ಮತ್ತು ಅಭಿ ಮತ್ತು ವೈಎಂಸಿಎ ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''