ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ಯೋಧ ಮಾತ್ರವಲ್ಲದೆ ಪ್ರತಿ ಒಬ್ಬ ಪ್ರಜೆಯೂ ಕೂಡಾ ದೇಶದ ಬಗ್ಗೆ ಯೋಚಿಸಿದಾಗ ದೇಶವು ಸುರಕ್ಷಿತವಾಗಿ ಇರಲು ಸಾಧ್ಯ. ನಮ್ಮ ಸೈನಿಕರು, ನಾಡಿಗಾಗಿ ಕೆಲಸ ಮಾಡುತ್ತಾರೆ. ಆದಾಯಕ್ಕಾಗಿ ಎಂದು ಅಲ್ಲ. ಪ್ರತಿ ಒಬ್ಬ ಸೈನಿಕನಲ್ಲೂ ಮಾತೃಭೂಮಿಯ ರಕ್ಷಣೆಯ ಜವಾಬ್ದಾರಿ ಇರುತ್ತದೆ ಎಂದರು. ಆಳ್ವಾಸ್ ಕಾಲೇಜಿನ ಕುಲಸಚಿವ- ಮೌಲ್ಯಮಾಪನ ಡಾ ನಾರಾಯಣ ಶೆಟ್ಟಿ ಎನ್ಪಿ ಮಾತನಾಡಿ, ಒಮ್ಮೆ ಸೈನಿಕ ಎಂದೆನಿಸಿಕೊಂಡರೆ ಆತ ಯಾವತ್ತಿಗೂ ಯೋಧನೆ. ನಾವು ನಡೆಯುವ ದಾರಿಯ ಬಗ್ಗೆ ನಮಗೆ ಸ್ಪಷ್ಟತೆ ಇದ್ದಾಗ ನಾವು ಸುಲಭವಾಗಿ ಗುರಿ ತಲುಪಬಲ್ಲೆವು ಎಂದು ತಿಳಿಸಿದರು. ಎನ್ಸಿಸಿ ನಮ್ಮಲ್ಲಿ ದೇಶ ಪ್ರೇಮವನ್ನು ತುಂಬುತ್ತದೆ. ಒಬ್ಬ ಸೈನಿಕನಲ್ಲಿ ಇರಬೇಕಾದಂತ ಧೈರ್ಯ ಎನ್ಸಿಸಿ ಕೆಡೆಟ್ಗಳಲ್ಲಿ ಇರುತ್ತದೆ. ಅವರಲ್ಲಿ ಯಾವುದೇ ಭಯ ಇಲ್ಲ. ಸವಾಲುಗಳನ್ನು ಎದುರಿಸಲು ಪ್ರಾಯೋಗಿಕ ತರಬೇತಿಗಳು ಸಹಾಯ ಮಾಡುತ್ತವೆ ಎಂದರು. ಆಳ್ವಾಸ್ ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು. ಅಂಕಿತಾ ಪರಾಡ್ಕರ್ ನಿರೂಪಿಸಿ, ಅನುಪಮ ಎಂ ಬಿ ವಂದಿಸಿದರು.