ಯೋಗ ಪ್ರಾಚೀನ ಋಷಿ ಮುನಿಗಳು ನೀಡಿರುವ ಕೊಡುಗೆ: ಹರಿಚರಣ್ ತಿಲಕ್

KannadaprabhaNewsNetwork |  
Published : Jun 21, 2026, 01:30 AM IST
20ಕೆಎಂಎನ್ ಡಿ12 | Kannada Prabha

ಸಾರಾಂಶ

ನಮ್ಮ ಹಿರಿಯರು ಜ್ಞಾನದ ಮಹತ್ವವನ್ನು ಅರಿತಿದ್ದರು. ಜ್ಞಾನದ ಬಲದಿಂದಲೇ ಮಾನವನ ಆರೋಗ್ಯಕ್ಕೆ ಬೇಕಾದ ಯೋಗ ವಿದ್ಯೆಯನ್ನು ನಮ್ಮ ಪ್ರಾಚೀನ ಋಷಿ ಮುನಿಗಳು ಆವಿಷ್ಕರಿಸಿ ಮನುಕುಲಕ್ಕೆ ನೀಡಿದ್ದಾರೆ. ಪತಂಜಲಿ ಮಹರ್ಷಿಗಳಿಂದ ಹಿಡಿದು ಸ್ವಾಮಿ ವಿವೇಕಾನಂದರವರೆಗೆ ಯೋಗ ಪರಂಪರೆ ನಿರಂತರವಾಗಿ ಹರಿದು ಬಂದಿದೆ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಯೋಗವು ಸಮಸ್ತ ಮನುಕುಲದ ಆರೋಗ್ಯಕ್ಕೆ ನಮ್ಮ ಪ್ರಾಚೀನ ಋಷಿ ಮುನಿಗಳು ನೀಡಿರುವ ಅಮೂಲ್ಯ ಕೊಡುಗೆ ಎಂದು ಕಸಾಪ ಮಾಜಿ ಅಧ್ಯಕ್ಷ ಹರಿಚರಣ್ ತಿಲಕ್ ತಿಳಿಸಿದರು.

ಪಟ್ಟಣದ ಜಯನಗರ ಬಡಾವಣೆಯ ಶ್ರೀಮಲ್ಲಿಕಾರ್ಜುನ ಚಾರಿಟಬಲ್ ಟ್ರಸ್ಟ್ ಕಚೇರಿ ಆವರಣದಲ್ಲಿ ಮಲ್ಲಿಕಾರ್ಜುನ ಚಾರಿಟಬಲ್ ಟ್ರಸ್ಟ್ ಹಾಗೂ ಪಟ್ಟಣದ ಬುದ್ಧ-ಬಸವ-ಅಂಬೇಡ್ಕರ್ ಯೋಗ ಕೇಂದ್ರಗಳ ಸಂಯುಕ್ತ ಆಶ್ರಯದಲ್ಲಿ 21 ದಿನಗಳ ಕಾಲ ನಡೆದ ಉಚಿತ ಯೋಗ ಶಿಬಿರದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ನಮ್ಮ ಹಿರಿಯರು ಜ್ಞಾನದ ಮಹತ್ವವನ್ನು ಅರಿತಿದ್ದರು. ಜ್ಞಾನದ ಬಲದಿಂದಲೇ ಮಾನವನ ಆರೋಗ್ಯಕ್ಕೆ ಬೇಕಾದ ಯೋಗ ವಿದ್ಯೆಯನ್ನು ನಮ್ಮ ಪ್ರಾಚೀನ ಋಷಿ ಮುನಿಗಳು ಆವಿಷ್ಕರಿಸಿ ಮನುಕುಲಕ್ಕೆ ನೀಡಿದ್ದಾರೆ. ಪತಂಜಲಿ ಮಹರ್ಷಿಗಳಿಂದ ಹಿಡಿದು ಸ್ವಾಮಿ ವಿವೇಕಾನಂದರವರೆಗೆ ಯೋಗ ಪರಂಪರೆ ನಿರಂತರವಾಗಿ ಹರಿದು ಬಂದಿದೆ ಎಂದರು.

ಇಂದಿನ ಯಾಂತ್ರಿಕ ಬದುಕಿಗೆ ಯೋಗವೇ ಮದ್ದು. ಆರ್‌ಟಿಒ ಮಲ್ಲಿಕಾರ್ಜುನ್ ಚಾರಿಟಬಲ್ ಟ್ರಸ್ಟ್ ತಾಲೂಕಿನ ನೊಂದವರಿಗೆ, ದೀನದಲಿತರಿಗೆ ಸಮಾಜ ಸೇವೆ ಮಾಡುವುದರ ಜೊತೆಗೆ ಸಾರ್ವಜನಿಕರ ಆರೋಗ್ಯದ ಕಾಳಜಿಯಿಂದ ಈ ಉಚಿತ ಯೋಗ ಶಿಬಿರ ಆಯೋಜಿಸಿದೆ. ಇಂದಿನ ಒತ್ತಡದ ಜೀವನದಲ್ಲಿ ಯೋಗದಿಂದ ದೇಹ-ಮನಸ್ಸು ಎರಡಕ್ಕೂ ಶಾಂತಿ ಸಿಗುತ್ತದೆ. ಯುವ ಜನತೆ ಯೋಗವನ್ನು ಜೀವನದ ಭಾಗ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಯೋಗ ಶಿಬಿರಾರ್ಥಿಗಳಾದ ಶಿಕ್ಷಕಿ ಕುಮಾರಿ, ಉಪನ್ಯಾಸಕಿ ರಾಧಾ, ಶಿಕ್ಷಕರಾದ ಮಂಜುನಾಥ್, ಭೈರೇಶ್ ಮತ್ತಿತರರು ಮಾತನಾಡಿ ಯೋಗಾಭ್ಯಾಸದಿಂದ ತಮ್ಮಲ್ಲಿ ಆಗಿರುವ ಬದಲಾವಣೆಗಳನ್ನು ತಿಳಿಸಿದರು. ಶಿಬಿರಾರ್ಥಿಗಳಗಿೆ ಉಚಿತ ಯೋಗ ಶಿಬಿರ ನಡೆಸಿಕೊಟ್ಟ ಅಂತಾರಾಷ್ಟ್ರೀಯ ಯೋಗ ಪಟು ಅಲ್ಲಮ ಪ್ರಭು ಅವರನ್ನು ಅಭಿನಂದಿಸಲಾಯಿತು.

ಸಮಾರಂಭದಲ್ಲಿ ಹಿರಿಯ ಪತ್ರಕರ್ತ ಬಳ್ಳೆಕೆರೆ ಮಂಜುನಾಥ್, ನಿವೃತ್ತ ಪ್ರಾಂಶುಪಾಲ ಕೆ. ಕಾಳೇಗೌಡ, ಲೇಖಕ ಬಲ್ಲೇನಹಳ್ಳಿ ಮಂಜುನಾಥ್, ಕಸಾಪ ಮಾಜಿ ಅಧ್ಯಕ್ಷ ಕೆ.ಆರ್.ನೀಲಕಂಠ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಅಧ್ಯಕ್ಷ ಸುಜೇಂದ್ರ ಕುಮಾರ್, ಸುಜನಾ ಪ್ರತಿಷ್ಠಾನದ ಕಾರ್ಯದರ್ಶಿ ಚಾ.ಶಿ. ಶಿವಕುಮಾರ್, ಶ್ರೀ ಮಲ್ಲಿಕಾರ್ಜುನ ಚಾರಿಟಬಲ್ ಟ್ರಸ್ಟಿ ಗಂಜಿಗೆರೆ ಮಹೇಶ್, ಶಿಕ್ಷಕ ವೀರಭದ್ರಪ್ಪ ಸೇರಿದಂತೆ ಯೋಗ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೂಲೆ ಮಂಟಪ ಧ್ವಂಸ: ಕಿಡಿಗೇಡಿಗಳನ್ನು ಬಂಧಿಸಿದ ಪೊಲೀಸರ ವಿರುದ್ಧ ಆಕ್ರೋಶ
ಮದ್ದೂರು ತಾಲೂಕಿಗೆ ಹೊಸದಾಗಿ 5 ಪಬ್ಲಿಕ್ ಶಾಲೆಗಳು ಮಂಜೂರು: ಕೆ.ಎಂ.ಉದಯ್