ಕನ್ನಡಪ್ರಭ ವಾರ್ತೆ ಮೈಸೂರು
ಎನ್.ಆರ್. ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯಿಂದ ಅಂತಾರಾಷ್ಟ್ರೀಯ ಯೋಗ ದಿವಸ್ ಅಂಗವಾಗಿ ನರಸಿಂಹರಾಜ ಕ್ಷೇತ್ರದಲ್ಲಿ ಎಲ್ಲ ಕಾರ್ಯಕರ್ತರನ್ನು ಒಗ್ಗೂಡಿಸಿ ಯೋಗ ಕಾರ್ಯಕ್ರಮ ಆಯೋಜಿಸಲಾಯಿತು.
ಮಾಜಿ ಮೇಯರ್ ಸಂದೇಶ್ ಸ್ವಾಮಿ, ಮೈಸೂರು ನಗರ ಪ್ರಧಾನ ಕಾರ್ಯದರ್ಶಿ ಗಿರಿಧರ್, ಕ್ಷೇತ್ರದ ಅಧ್ಯಕ್ಷ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಪದ್ಮನಾಭ, ಸಿ. ಮಂಜು, ಶಿವಕುಮಾರ್, ಮಾಲಿನಿ ಪಾಲಾಕ್ಷ,ಕವಿತಾ ಸಿಂಗ್, ಉಮಾ, ಸ್ವಾಮಿ, ಕಾರ್ತಿಕ್ , ಸಿಂಗ್, ಯಶ್ವಂತ್ ಸಿಂಗ್, ಶಿವಾನಂದ್ ರಾವ್, ನವೀನ್, ಪ್ರಕಾಶ್, ಸತೀಶ್, ಕೃಷ್ಣಮೂರ್ತಿ ಭಾಗವಹಿಸಿದ್ದರು.ರಾಮಕೃಷ್ಣ ವಿದ್ಯಾಕೇಂದ್ರ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಕನ್ನಡಪ್ರಭ ವಾರ್ತೆ ಮೈಸೂರು
ಮುಖ್ಯಅತಿಥಿಗಳಾಗಿ ತೆರಿಗೆ ಸಲಹೆಗಾರರು ಹಾಗೂ ಯೋಗಪಟು ಸಿ.ಎನ್. ಪ್ರಕಾಶ್ ಮಾತನಾಡಿ, ಯೋಗ ಎಂದರೆ ಜೋಡಿಸು, ಹೊಂದಿಸು, ಯುಕ್ತವಾಗುವುದು ಎಂಬ ಅರ್ಥವಿದೆ ಎಂದು ತಿಳಿಸಿದರು. ಅಂದರೆ ಜೀವಾತ್ಮನನ್ನು ಪರಮಾತ್ಮನಲ್ಲಿ ಸೇರಿಸುವುದೇ ಯೋಗ ಎಂದು ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಎಂ. ಪಾಪೇಗೌಡ ಮಾತನಾಡಿ, ಯೋಗದಿಂದ ಜೀವನ ವಿಕಾಸವಾಗುತ್ತದೆ. ಯೋಗ ಬಲ್ಲವನಿಗೆ ರೋಗವಿಲ್ಲ ಎಂದು ಯೋಗದ ಮಹತ್ವ ತಿಳಿಸಿದರು.ರಾಮಕೃಷ್ಣ ಸೇವಾ ಸಂಘದ ಖಜಾಂಚಿ ಎಚ್.ಜಿ. ರಮೇಶ್, ಕಾರ್ಯನಿರ್ವಾಹಕ ಅಧಿಕಾರಿ ಪ್ರೊ.ಜಿ. ಚಂದ್ರಶೇಖರ್, ಆರ್.ಕೆವಿಕೆ ಕಾಲೇಜಿನ ಪ್ರಾಂಶುಪಾಲ ಸಿ. ಶಿವಪ್ಪ, ರಾಮಕೃಷ್ಣ ವಿದ್ಯಾಕೇಂದ್ರದ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಜಿ.ಎನ್. ವಿಶ್ವನಾಥ್ ಮತ್ತು ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ವೀಣಾ ಕೆ. ಹೆಗಡೆ, ಪ್ರಣಮ್ಯ ಎಜುಕೇಷನ್ ಮತ್ತು ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಸವಿತಾ ಹಾಗೂ ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕ, ಶಿಕ್ಷಕೇತರರು ಭಾಗವಹಿಸಿದ್ದರು.
ಸಹ ಶಿಕ್ಷಕರಾದ ಗಣೇಶ್ ಹೆಗಡೆ ನಿರೂಪಿಸಿದರು. ಕಾರ್ಯನಿರ್ವಾಹಕ ಅಧಿಕಾರಿ ಪ್ರೊ.ಜಿ. ಚಂದ್ರಶೇಖರ್ ಸ್ವಾಗತಿಸಿದರು. ಸಹ ಶಿಕ್ಷಕಿ ಬಿ.ಸಿ. ದೀಪಿಕಾ ವಂದಿಸಿದರು. ಶಾಲಾ ಕಾಲೇಜು ವಿದ್ಯಾರ್ಥಿಗಳು ವಿವಿಧ ಯೋಗದ ಭಂಗಿಗಳನ್ನು ಪ್ರದರ್ಶಿಸಿದರು.