ಮಾನಸಿಕ ಸದೃಢತೆಗೆ ಯೋಗ ಸಹಕಾರಿ: ಬಸವರಾಜು ಎಚ್.ಎಂ.

KannadaprabhaNewsNetwork |  
Published : Jun 22, 2024, 12:49 AM IST
ಫೋಟೋ: 21ಜಿಎಲ್ಡಿ2- ಗುಳೇದೆಗುಡ್ಡದ ನೆಹರು ಅಂತರಾಷ್ಟ್ರೀಯ ಶಾಲೆಯಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ  ಅಂಗವಾಗಿ ಯೋಗಾಭ್ಯಾಸ ಮಾಡಿದರು.   | Kannada Prabha

ಸಾರಾಂಶ

ವಿದ್ಯಾರ್ಥಿಗಳ ಮಾನಸಿಕ ಹಾಗೂ ದೈಹಿಕ ಸದೃಢತೆಗೆ ಯೋಗ ಅವಶ್ಯಕವಾಗಿದೆ ಎಂದು ನೆಹರು ಅಂತಾರಾಷ್ಟ್ರೀಯ ಶಾಲೆ ಪ್ರಾಚಾರ್ಯ ಬಸವರಾಜು ಎಚ್.ಎಂ. ಹೇಳಿದರು.

ಕನ್ನಡಪ್ರಭ ವಾರ್ತೆ ಗುಳೇದಗುಡ್ಡ

ವಿದ್ಯಾರ್ಥಿಗಳ ಮಾನಸಿಕ ಹಾಗೂ ದೈಹಿಕ ಸದೃಢತೆಗೆ ಯೋಗ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ಜ್ಞಾನಾಭಿವೃದ್ಧಿ ಮತ್ತು ಏಕಾಗ್ರತೆ ಹೆಚ್ಚಿಸಿಕೊಳ್ಳಲು ಪ್ರತಿದಿನ ಯೋಗ ರೂಢಿಸಿಕೊಳ್ಳಬೇಕೆಂದು ಪ್ರಾಚಾರ್ಯ ಬಸವರಾಜು ಎಚ್.ಎಂ. ಹೇಳಿದರು.

ಶುಕ್ರವಾರ ನೆಹರು ಅಂತಾರಾಷ್ಟ್ರೀಯ ಶಾಲೆಯಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನ ಹಾಗೂ ಅಂತಾರಾಷ್ಟ್ರೀಯ ಸಂಗೀತ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ಯೋಗದಿಂದ ವ್ಯಕ್ತಿ ಏನೆಲ್ಲ ಸಾಧಿಸಬಹುದಾಗಿದೆ. ಇಡೀ ವಿಶ್ವ ಯೋಗ ಈಗ ಅವಲಂಭಿಸಿದೆ. ಆರೋಗ್ಯಕರ ಜೀವನಕ್ಕೆ ಮತ್ತು ದೇಹದ ಸಮತೋಲನ ಕಾಯ್ದುಕೊಳ್ಳಲು ಯೋಗ ಬಹಳಷ್ಟು ಸಹಕಾರಿಯಾಗಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಯೋಗಭ್ಯಾಸ ರೂಢಿಸಿಕೊಂಡು ಏಕಾಗ್ರತೆ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳ ಓದು ಬರಹಕ್ಕೆ ಹಾಗೂ ಆರೋಗ್ಯವೃದ್ಧಿಗೆ ಯೋಗ ಒಂದು ದೊಡ್ಡ ಔಷಧವಾಗಿದೆ ಎಂದರು.

ಯೋಗ ಪಟುಗಳಾದ ಸಹನಾ ಮಾನುಟಗಿ ಮತ್ತು ಸುಪ್ರೀತಾ ಅರಕಾಲಚಿಟ್ಟಿ ಆರೋಗ್ಯಕರ ಜೀವನಕ್ಕೆ ಯೋಗಾಭ್ಯಾಸದ ಕೊಡುಗೆಗಳನ್ನು ವಿವರಿಸಿ ಮತ್ತು ಪ್ರಾತ್ಯಕ್ಷಿಕೆ ನೀಡಿದರು. ಶಾಲೆಯ ದೈಹಿಕ ಶಿಕ್ಷಕರು, ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸಾಮೂಹಿಕವಾಗಿ ಯೋಗದ ವಿವಿಧ ಭಂಗಿಗಳನ್ನು ಪ್ರದರ್ಶಿಸಿದರು. ನಂತರ ವಿದ್ಯಾರ್ಥಿಗಳು ಸಂಗೀತವನ್ನು ಪ್ರಸ್ತುತ ಪಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಣಸೆ, ಹಲಸು, ನೇರಳೆಗೆ ಮಂಡಳಿ ರಚಿಸಿ: ದೇವೇಗೌಡ
ಗುಮ್ಮ ಬಂದ ಗುಮ್ಮ, ಮಕ್ಕಳಿಗೆ ಹೊಡೆಯೋ ಗುಮ್ಮ!