ಯೋಗವು ಬದುಕಿನ ದಾರಿ: ಮಂಜುನಾಥ

KannadaprabhaNewsNetwork |  
Published : Jun 22, 2025, 01:18 AM IST
ಪೊಟೋ ಪೈಲ್ ನೇಮ್ ೨೧ಎಸ್‌ಜಿವಿ೩   ಪಟ್ಟಣದ ಶ್ರೀ ಚನ್ನಪ್ಪ ಕುನ್ನೂರ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಜರುಗಿದ ಯೋಗ ದಿನಾಚರಣೆಯ ಕಾರ್ಯಕ್ರಮವನ್ನು ಮಾಜಿ ಸಂಸದ ಮಂಜುನಾಥ ಕುನ್ನೂರ ಉದ್ಘಾಟಿಸಿದರು   . | Kannada Prabha

ಸಾರಾಂಶ

ಭಾರತದಲ್ಲಿ ಮಾತ್ರ ಪ್ರಾಚೀನವಾದ ಯೋಗಶಾಸ್ತ್ರ ಇನ್ನಷ್ಟು ಹೊಳಪನ್ನು ಪಡೆದುಕೊಂಡು ಪ್ರವರ್ಧಮಾನಕ್ಕೆ ಬರುತ್ತಿದೆ

ಶಿಗ್ಗಾಂವಿ: ಯೋಗವು ಆರೋಗ್ಯ ಪೂರ್ಣ ಬದುಕನ್ನು ಕಲ್ಪಿಸಿಕೊಳ್ಳುವ ದಾರಿಯಾಗಿದೆ. ಯೋಗದ ಮೂಲಕ ಸುಂದರ ಬದುಕನ್ನು ರೂಪಿಸಿಕೊಳ್ಳಬಹುದಾಗಿದೆ ಎಂದು ಮಾಜಿ ಸಂಸದ ಮಂಜುನಾಥ ಕುನ್ನೂರ ಹೇಳಿದರು.

ಪಟ್ಟಣದ ಶ್ರೀಚನ್ನಪ್ಪ ಕುನ್ನೂರ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಜರುಗಿದ ಯೋಗ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜಗತ್ತಿನ ಪ್ರಾಚೀನ ನಾಗರಿಕತೆಗಳು ಭೌತಿಕ ಹಾಗೂ ಸಾಂಸ್ಕೃತಿಕ ದಾಳಿಗಳಿಂದ ನಶಿಸಿ ಹೋಗಿವೆ. ಆದರೆ ಭಾರತದಲ್ಲಿ ಮಾತ್ರ ಪ್ರಾಚೀನವಾದ ಯೋಗಶಾಸ್ತ್ರ ಇನ್ನಷ್ಟು ಹೊಳಪನ್ನು ಪಡೆದುಕೊಂಡು ಪ್ರವರ್ಧಮಾನಕ್ಕೆ ಬರುತ್ತಿದೆ ಎಂದು ಅಭಿಪ್ರಾಯಪಟ್ಟರು.

ಮುಖ್ಯ ಅತಿಥಿಯಾಗಿ ಮಾತನಾಡಿದ ಯೋಗಗುರು ಶೋಭಾ ಅಳಗವಾಡಿ, ಯೋಗ ಮನಸ್ಸು ಮತ್ತು ಭೂಮಿ ಸಂಪರ್ಕಿಸುತ್ತದೆ. ಒಂದು ಭೂಮಿಗಾಗಿ ಒಂದು ಯೋಗ ಆರೋಗ್ಯ ಎಂಬ ಧ್ಯೇಯ ವಾಕ್ಯದೊಂದಿಗೆ ಈ ವರ್ಷದ ಯೋಗ ಕಾರ್ಯಕ್ರಮಗಳು ಜರುಗುತ್ತಿರುವುದು ಔಚಿತ್ಯಪೂರ್ಣವಾಗಿದೆ ಎಂದರು.

ಪ್ರಾಚಾರ್ಯ ಡಾ. ನಾಗರಾಜ ಜಿ. ದ್ಯಾಮನಕೊಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿ.ಎಂ. ಅರಗೋಳ, ಎಂ. ಗಾಣಿಗೇರ ಹಾಗೂ ಎಂ.ಬಿ. ನೀರಲಗಿ, ಗೂಳಪ್ಪ ಅರಳಿಕಟ್ಟಿ ಮತ್ತಿತರರು ಇದ್ದರು.

ಪ್ರಾರಂಭದಲ್ಲಿ ಪ್ರಕಾಶ ಎಂ.ಎನ್.ಸ್ವಾಗತಿಸಿದರು. ಎಂ.ಜಿ. ಲಕ್ಷ್ಮೇಶ್ವರ ವಂದಿಸಿದರು. ಕೆ.ಜಿ. ಮಲ್ಲೂರ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ