- ಚಿಕ್ಕಮಗಳೂರು ನಗರಸಭೆಯಲ್ಲಿ ಪೌರ ಕಾರ್ಮಿಕರ ದಿನಾಚರಣ
ಕನ್ನಡಪ್ರಬ ವಾರ್ತೆ, ಚಿಕ್ಕಮಗಳೂರುಪೌರ ಕಾರ್ಮಿಕರ ಆರೋಗ್ಯ ಮಾನಸಿಕವಾಗಿ ಸದೃಢವಾಗಲು ದಿನದ ಒಂದು ಗಂಟೆ ಯೋಗಾಭ್ಯಾಸದ ತರಬೇತಿ ನೀಡುವ ಅಗತ್ಯ ಇದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಶನಿವಾರ ನಗರಸಭೆ ಸಭಾಂಗಣದಲ್ಲಿ ನಗರಸಭೆ, ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಪೌರ ಕಾರ್ಮಿಕರು ದುಶ್ಚಟಗಳಾದ ಮಾದಕ ವ್ಯಸನಗಳಿಂದ ದೂರವಾಗಿ ಆರೋಗ್ಯ ಕಾಪಾಡಿಕೊಳ್ಳಬೇಕು. ಪೌರ ಕಾರ್ಮಿಕರು ಆರೋಗ್ಯವಾಗಿದ್ದಾಗ ಮಾತ್ರ ಎಲ್ಲಾ ನಾಗರಿಕರು ಆರೋಗ್ಯವಾಗಿರಲು ಸಾಧ್ಯ ಎಂದು ಹೇಳಿದರು.ಕೆಲವು ಪೌರ ಕಾರ್ಮಿಕರನ್ನು ಸರ್ಕಾರ ಕಾಯಂಗೊಳಿಸಿರುವ ಮಾದರಿಯಲ್ಲಿ ನೀರುಗಂಟಿಗಳನ್ನು ಕಾಯಂಗೊಳಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿಗಳ ಬಳಿಗೆ ನಿಯೋಗ ತೆರಳಿ ಕಾಯಂಗೊಳಿಸುವಂತೆ ಮನವಿ ಮಾಡುವುದಾಗಿ ಭರವಸೆ ನೀಡಿದರು.
ಡಾ. ಬಿ.ಆರ್ ಅಂಬೇಡ್ಕರ್ ನೀಡಿದ ಸಂವಿಧಾನದ ಆಶಯದಂತೆ ಸಮ ಸಮಾಜ ನಿರ್ಮಾಣವಾಗಬೇಕೆಂಬ ಅವರ ಕನಸು ಇಂದು ಒಂದೇ ವೇದಿಕೆಯಲ್ಲಿ ಆಸೀನರಾಗಲು ಕಾರಣ. ಬುದ್ಧ, ಬಸವ ಸೇರಿದಂತೆ ಶರಣರ ಆಶಯ ಕಾರಣ ಎಂದು ಹೇಳಿದರು.ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಮಾತನಾಡಿ, ಕಾಯಕ ಸಂಸ್ಕೃತಿಗೆ ಗೌರವ ಕೋಡುವ ಉದ್ದೇಶವೇ ಪೌರ ಕಾರ್ಮಿಕ ದಿನಾಚರಣೆ. ಸ್ವಚ್ಛ ಕಾಯಕ ಮಾಡುವ ಪೌರ ಕಾರ್ಮಿಕರನ್ನು ಗೌರವದಿಂದ ಕಂಡಾಗ ಮಾತ್ರ ಸಮಾನತೆ, ಆರೋಗ್ಯ ಲಭಿಸುತ್ತದೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿಯವರು ಜಾತಿ ಬೇಧಕ್ಕೆ ಆಸ್ಪದವಿಲ್ಲದೆ ದುಡಿಯುವ ವರ್ಗಕ್ಕೆ ಗೌರವ ನೀಡಬೇಕೆಂಬ ಉದ್ದೇಶ ದೊಂದಿಗೆ ಪೌರ ಕಾರ್ಮಿಕರ ಪಾದಪೂಜೆ ಮಾಡಿ ಕಾಯಕ ಸಂಸ್ಕೃತಿ ಎತ್ತಿ ಹಿಡಿದಿದ್ದಾರೆಂದರು.74 ಮನೆಗಳಲ್ಲಿ 24 ಬಾಕಿ ಇದ್ದು, ಉಳಿದ ಕಾರ್ಮಿಕರಿಗೂ ಮನೆಗಳನ್ನು ನಿರ್ಮಿಸಿಕೊಡಬೇಕು. 35 ನೌಕರರು ಕಾಯಂ ಮಾಡಿದ್ದು, ಉಳಿದವರನ್ನು ಮಾಡಲು ತಾಂತ್ರಿಕ ಸಮಸ್ಯೆ ಎದುರಾಗಿದೆ. ಕೂಡಲೇ ಇದನ್ನು ನಿವಾರಿಸಿ ಕಾಯಂಗೊಳಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಪೌರಾಯುಕ್ತ ಬಿ.ಸಿ ಬಸವರಾಜ್ ಸ್ವಾಗತಿಸಿ ಮಾತನಾಡಿ, ಪೌರ ಕಾರ್ಮಿಕರ ಬೆಳಗಿನ ಉಪಹಾರಕ್ಕೆ ₹35 ಗೌರವಧನ, ಸಂಕಷ್ಟ ಭತ್ಯೆ, ವಿಮಾ ಸೌಲಭ್ಯ ಕಲ್ಪಿಸಲಾಗಿದೆ. ಇನ್ನೂ ಮುಂತಾದ ಸೌಲಭ್ಯವನ್ನು ಹಂತ ಹಂತವಾಗಿ ನೀಡುವುದಾಗಿ ಹೇಳಿದರು.ಅಧ್ಯಕ್ಷತೆ ವಹಿಸಿದ್ದ ನಗರಸಭಾಧ್ಯಕ್ಷೆ ಶೀಲಾ ದಿನೇಶ್, ಉಪಾಧ್ಯಕ್ಷೆ ಲಲಿತಾ ರವಿನಾಯ್ಕ್, ಮಾಜಿ ಅಧ್ಯಕ್ಷರಾದ ಕವಿತಾ ಶೇಖರ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯರಾದ ಎ.ಸಿ ಕುಮಾರ್ಗೌಡ, ಲಕ್ಷ್ಮಣ್, ಗುರುಮಲ್ಲಪ್ಪ, ಪರಮೇಶ್ವರ, ಸಿ.ಪಿ. ಲಕ್ಷ್ಮಣ, ಅರುಣ್ ಕುಮಾರ್, ಗೋಪಿ, ಹುಣಸೇಮಕ್ಕಿ ಲಕ್ಷ್ಮಣ, ಪ್ರಕಾಶ್ ರೈ, ರೂಪಾ ಕುಮಾರ್ ಉಪಸ್ಥಿತರಿದ್ದರು.-- ಬಾಕ್ಸ್--
ಡಾ. ಅಂಬೇಡ್ಕರ್ ಭಾವಚಿತ್ರದೊಂದಿಗೆ ಮೆರವಣಿಗೆಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮಕ್ಕೂ ಮುನ್ನ ತಾಲೂಕು ಕಚೇರಿ ಆವರಣದಿಂದ ಡಾ. ಅಂಬೇಡ್ಕರ್ ಹಾಗೂ ಸರ್ದಾರ್ ವಲ್ಲಭಬಾಯ್ ಪಟೇಲ್ ಭಾವಚಿತ್ರದೊಂದಿಗೆ ಜಾನಪದ ಕಲಾತಂಡಗಳ ಮೂಲಕ ಮೆರವಣಿಗೆ ಹೊರಟ ಪೌರ ಕಾರ್ಮಿಕರು ಹಾಗೂ ನಗರಸಭೆ ಸಿಬ್ಬಂದಿ ಎಂ.ಜಿ ರಸ್ತೆ ಮೂಲಕ ಸಾಗಿ ನಗರಸಭೆ ಆವರಣವನ್ನು ತಲುಪಿದರು. 18 ಕೆಸಿಕೆಎಂ 1ಚಿಕ್ಕಮಗಳೂರು ನಗರಸಭೆ ಸಭಾಂಗಣದಲ್ಲಿ ಶನಿವಾರ ನಡೆದ ಪೌರ ಕಾರ್ಮಿಕರ ದಿನಾಚರಣೆಯನ್ನು ಶಾಸಕ ಎಚ್.ಡಿ. ತಮ್ಮಯ್ಯ ಉದ್ಘಾಟಿಸಿದರು. ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ, ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್, ಪೌರಾಯುಕ್ತ ಬಸವರಾಜ್ ಹಾಗೂ ಸದಸ್ಯರು ಇದ್ದರು.