ಮನೆಮನೆಗೆ ತೆರಳಿ ಯೋಗೇಶ್ವರ್‌ ಮತಯಾಚನೆ

KannadaprabhaNewsNetwork |  
Published : Nov 13, 2024, 12:01 AM IST
ಪೊಟೋ೧೨ಸಿಪಿಟಿ೧: ತಾಲೂಕಿನ ಸಂತೆ ಮೊಗೇನಹಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಮತಯಾಚನೆ ಮಾಡಿದರು. | Kannada Prabha

ಸಾರಾಂಶ

ಚನ್ನಪಟ್ಟಣ: ತೀವ್ರ ಜಿದ್ದಾಜಿದ್ದಿನಿಂದ ಕೂಡಿದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿಲು ಇನ್ನಿಲ್ಲದ ಕಸರತ್ತು ನಡೆಸಿದ ಅಭ್ಯರ್ಥಿಗಳು, ಸೋಮವಾರ ಸಂಜೆಗೆ ಬಹಿರಂಗ ಚುನಾವಣೆ ಅಂತ್ಯಗೊಂಡಿರುವ ಹಿನ್ನೆಲೆಯಲ್ಲಿ ಮಂಗಳವಾರ ಮನೆ ಮನೆಗೆ ತರಳಿ ಮತಯಾಚನೆ ಮಾಡಿದರು.

ಚನ್ನಪಟ್ಟಣ: ತೀವ್ರ ಜಿದ್ದಾಜಿದ್ದಿನಿಂದ ಕೂಡಿದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿಲು ಇನ್ನಿಲ್ಲದ ಕಸರತ್ತು ನಡೆಸಿದ ಅಭ್ಯರ್ಥಿಗಳು, ಸೋಮವಾರ ಸಂಜೆಗೆ ಬಹಿರಂಗ ಚುನಾವಣೆ ಅಂತ್ಯಗೊಂಡಿರುವ ಹಿನ್ನೆಲೆಯಲ್ಲಿ ಮಂಗಳವಾರ ಮನೆ ಮನೆಗೆ ತರಳಿ ಮತಯಾಚನೆ ಮಾಡಿದರು.

ಮಂಗಳವಾರ ಮನೆಮನೆಗೆ ತೆರಳಿದ ಎನ್‌ಡಿಎ, ಕಾಂಗ್ರೆಸ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಹಾಗೂ ಪಕ್ಷೇತರ ಅಭ್ಯರ್ಥಿಗಳು ಮತಯಾಚಿಸಿ ಮತದಾರರ ಮನವೊಲಿಕೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್, ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಬೆಂಬಲಿಗರು ಮತಯಾಚನೆ ನಡೆಸಿದರು.

ನಗರದ ರೈಲ್ವೆ ನಿಲ್ದಾಣ, ದೊಡ್ಡ ಮಳೂರು ಗ್ರಾಮ, ರಾಘವೇಂದ್ರ ಮಠ, ಕೋಟೆ, ಸಂತೆ ಮೊಗೇನಹಳ್ಳಿ, ಮಳೂರು ಪಟ್ಟಣ, ಹೊಡಿಕೆ ಹೊಸಹಳ್ಳಿ ಸೇರಿದಂತೆ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಮತಯಾಚನೆ ಮಾಡಿದರು.

ಇನ್ನು ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ತಮ್ಮ ಗ್ರಾಮಗಳ ವ್ಯಾಪ್ತಿ ಹಾಗೂ ನಗರ ಪ್ರದೇಶದಲ್ಲಿ ಮತಯಾಚನೆ ಮಾಡಿದರು.

ಪೊಟೋ೧೨ಸಿಪಿಟಿ೧:

ಚನ್ನಪಟ್ಟಣ ತಾಲೂಕಿನ ಸಂತೆ ಮೊಗೇನಹಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಮತಯಾಚನೆ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಲವಿನ ಊಟ ಬಡಿಸಲು ಸಿದ್ಧವಾದ ಅಕ್ಕ ಕೆಫೆ
ಚನ್ನಮ್ಮ ಮೂರ್ತಿ ಉದ್ಘಾಟನಾ ಸಮಾರಂಭಕ್ಕೆ ಬಹಿಷ್ಕಾರ