ವೆಂಕಟೇಗೌಡರ ಅಂತಿಮ ದರ್ಶನ ಪಡೆದ ಯೋಗೇಶ್ವರ್‌

KannadaprabhaNewsNetwork |  
Published : Nov 25, 2024, 01:00 AM IST
ಪೊಟೋ೨೪ಸಿಪಿಟಿ೨: ಶಾಸಕ ಸಿ.ಪಿ.ಯೋಗೇಶ್ವರ್ ವೆಂಕಟೇಗೌಡರ ಅಂತಿಮ ದರ್ಶನ ಪಡೆದರು. | Kannada Prabha

ಸಾರಾಂಶ

ಚನ್ನಪಟ್ಟಣ: ಶುಕ್ರವಾರ ಕಜಕಿಸ್ತಾನದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದ ತಾಲೂಕಿನ ನೀರಾವರಿ ಯೋಜನೆಗೆ ನೀಲನಕ್ಷೆ ರೂಪಿಸಿ, ಅದರ ಸಾಕಾರಕ್ಕೆ ಶ್ರಮಿಸಿದ್ದ ನಿವೃತ್ತ ಎಂಜಿನಿಯರ್ ವೆಂಕಟೇಗೌಡ ಅವರ ಅಂತ್ಯಕ್ರಿಯೆ ಭಾನುವಾರ ಸ್ವಗ್ರಾಮ ಅಗ್ರಹಾರ ವಳಗೆರಹಳ್ಳಿಯಲ್ಲಿ ನೆರವೇರಿತು.

ಚನ್ನಪಟ್ಟಣ: ಶುಕ್ರವಾರ ಕಜಕಿಸ್ತಾನದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದ ತಾಲೂಕಿನ ನೀರಾವರಿ ಯೋಜನೆಗೆ ನೀಲನಕ್ಷೆ ರೂಪಿಸಿ, ಅದರ ಸಾಕಾರಕ್ಕೆ ಶ್ರಮಿಸಿದ್ದ ನಿವೃತ್ತ ಎಂಜಿನಿಯರ್ ವೆಂಕಟೇಗೌಡ ಅವರ ಅಂತ್ಯಕ್ರಿಯೆ ಭಾನುವಾರ ಸ್ವಗ್ರಾಮ ಅಗ್ರಹಾರ ವಳಗೆರಹಳ್ಳಿಯಲ್ಲಿ ನೆರವೇರಿತು.

ಕಜಕಿಸ್ತಾನದಿಂದ ಅವರ ಪಾರ್ಥಿವ ಶರೀರವನ್ನು ಭಾನುವಾರ ಬೆಳಗ್ಗೆ ತಂದು ನಗರದ ಗಾಂಧಿ ಭವನದ ಬಳಿ ಇರಿಸಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಅವರ ಹಿತೈಷಿಗಳು, ಸ್ನೇಹಿತರು ಸೇರಿದಂತೆ ಅನೇಕರು ಅಂತಿಮ ದರ್ಶನ ಪಡೆದರು.

ನಂತರ ಅವರ ಸ್ವಗ್ರಾಮ ಅಗ್ರಹಾರ ವಳಗೆರಹಳ್ಳಿಗೆ ಅವರ ಪಾರ್ಥಿವ ಶರೀರವನ್ನು ತೆಗೆದುಕೊಂಡು ಹೋಗಿ ಸಂಜೆ ಅಂತ್ಯ ಸಂಸ್ಕಾರ ನಡೆಸಲಾಯಿತು.

ನೂತನ ಶಾಸಕ ಸಿ.ಪಿ.ಯೋಗೇಶ್ವರ್, ಕಾಂಗ್ರೆಸ್ ಮುಖಂಡ ದುಂತೂರು ವಿಶ್ವನಾಥ್, ರೈತ ಮುಖಂಡ ಸಿ.ಪುಟ್ಟಸ್ವಾಮಿ, ನೀರಾವರಿ ಇಲಾಖೆಯ ಅಧಿಕಾರಿಗಳು ಸೇರಿದಂತೆ ಸ್ನೇಹಬಳಗ ಮೃತರ ಅಂತಿಮ ದರ್ಶನ ಪಡೆದು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

ಪೊಟೋ೨೪ಸಿಪಿಟಿ೨: ಶಾಸಕ ಸಿ.ಪಿ.ಯೋಗೇಶ್ವರ್ ವೆಂಕಟೇಗೌಡರ ಅಂತಿಮ ದರ್ಶನ ಪಡೆದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

500 ನಾಯಿಗಳಿಗೆ ಚಿಕನ್‌ ರೈಸ್ ನೀಡಲು ವರ್ಷಕ್ಕೆ 1.83 ಕೋಟಿ
ಯಲಹಂಕದಲ್ಲಿ ‘ಚೀನಾದ ಹ್ಯಾಂಗ್‌ಝೌ’ ಮಾದರಿ ರೈಲು ನಿಲ್ದಾಣ