ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದಲ್ಲಿ ಮಂಗಳವಾರ ದಾಸೋಹ ದಿನಾಚರಣೆ ಸಮಾರಂಭಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಇತಿಹಾಸದಲ್ಲೇ ಲಿಂಗಾಯತರ ಮೇಲೆ ಯಾರೂ ಹೀಗೆ ಹಲ್ಲೆ ಮಾಡಿರಲಿಲ್ಲ. ಲಿಂಗಾಯತರ ಮೇಲೆ ಮಾರಣಾಂತಿಕ ಹಲ್ಲೆಗೆ ಈಗಿನ ರಾಜ್ಯ ಸರ್ಕಾರ ಕಾರಣವಾಗಿದೆ ಎಂದರು.
ನಮ್ಮ ಸಮುದಾಯದ ಹೋರಾಟವನ್ನು ಹತ್ತಿಕ್ಕಲು ಉದ್ದೇಶ ಪೂರ್ವಕವಾಗಿಯೇ ಪೊಲೀಸರಿಂದ ಹಲ್ಲೆ ಮಾಡಿಸಲಾಗಿದೆ. ಕೆಲವರ ಮೇಲಂತೂ ಮಾರಣಾಂತಿಕ ಹಲ್ಲೆಯಾಗಿದೆ. ಈವರೆಗೆ ಸರ್ಕಾರವು ನಮಗಾಗಲೀ, ಸಮಾಜಕ್ಕಾಗಲೀ ಕ್ಷಮಾಪಣೆ ಕೇಳಿಲ್ಲ. ಹೋರಾಟ ನಿರತ ಲಿಂಗಾಯತರ ಮೇಲೆ ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿಗಳ ಮೇಲೂ ಕ್ರಮ ಕೈಗೊಂಡಿಲ್ಲ ಎಂದು ಸ್ವಾಮೀಜಿ ಕಿಡಿ ಕಾರಿದರು.ಬೆಳಗಾವಿಯಲ್ಲಿ ಲಿಂಗಾಯತ ಸಮಾಜದವರ ಮೇಲೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ನಡೆಸಿದ ದೌರ್ಜನ್ಯದ ಬಗ್ಗೆ ಮಾನವ ಹಕ್ಕುಗಳ ಆಯೋಕ್ಕೆ ನಮ್ಮ ಸಮಾಜದ ವಕೀಲರು ದೂರು ನೀಡಿದ್ದಾರೆ. ಲಿಂಗಾಯತ ಮೀಸಲಾತಿ ಹೋರಾಟವನ್ನು ಅಸಂವಿಧಾನಿಕ ಹೋರಾಟವೆಂದು ಸಿಎಂ ಸಿದ್ದರಾಮಯ್ಯ ಸದನದಲ್ಲೇ ಹೇಳಿದ್ದಾರೆ. ಹೊಡಿದಿದ್ದೇ ಅಲ್ಲದೇ, ಗಾಯದ ಮೇಲೆ ಬರೆ ಎಳೆಯುವಂತೆ ಸಿದ್ದರಾಮಯ್ಯ ಮಾತನಾಡಿದ್ದಾರೆ ಎಂದು ಅವರು ಆಕ್ರೋಶ ಹೊರ ಹಾಕಿದರು.
ಅದೇ ರೀತಿ ನಮ್ಮ ಸಮುದಾಯಕ್ಕೆ ಮೀಸಲಾತಿ ಕೊಡುತ್ತೇವೆ ಎನ್ನುವವರಿಗೆ ಏನು ಉತ್ತರ ಕೊಡುತ್ತೀರಿ ಎಂಬ ವಿಚಾರವನ್ನು ಜನರ ಮುಂದಿಡುತ್ತೇವೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ಹಳ್ಳಿ ಹಳ್ಳಿಗೂ ಹೋಗಿ, ಪ್ರತಿಜ್ಞಾ ಕ್ರಾಂತಿ ಅಭಿಯಾನ ಕೈಗೊಳ್ಳುತ್ತೇವೆ. ಇದೇ ಸಿದ್ದರಾಮಯ್ಯನವರು 20 ವರ್ಷ ಕಾಲವೇನೂ ಮುಖ್ಯಮಂತ್ರಿ ಆಗಿಯೇ ಇರುವುದಿಲ್ಲ ಎಂದು ಅವರು, ಲಿಂಗಾಯತರ ಮೇಲೆ ಲಾಠಿ ಚಾರ್ಜ್ ಮಾಡಿ, ಬೂಟಿನೇಟು ಬೀಳಲು ಕಾರಣವಾದ ಸರ್ಕಾರದ ಚುಕ್ಕಾಣಿ ಹಿಡಿದ ಸಿದ್ದರಾಮಯ್ಯಗೆ ಸೂಚ್ಯವಾಗಿ ಎಚ್ಚರಿಸಿದರು.