ಕನ್ನಡಪ್ರಭ ವಾರ್ತೆ ಗುಬ್ಬಿ
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಶಾಲೆ ಆರಂಭವಾದ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ಬಲವರ್ಧನೆ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸರ್ಕಾರಿ ಶಾಲೆಗಳು ಅಭಿವೃದ್ಧಿಯತ್ತ ಸಾಗಿದಾಗ ಮಾತ್ರ ದೇಶದ ಪ್ರಗತಿ ಸಾಧ್ಯವಾಗುತ್ತದೆ ಎಂದರು.ಸರ್ಕಾರಿ ಶಾಲೆಗಳಲ್ಲಿ ಉತ್ತಮ ಪ್ರತಿಭೆಗಳಿದ್ದು, ಅವುಗಳನ್ನು ಹುಡುಕುವ ಕೆಲಸ ಮಾಡಿದಾಗ ಖಂಡಿತವಾಗಿ ಸಾಧನೆ ಮಾಡುತ್ತಾರೆ. ಆರ್ಥಿಕವಾಗಿ ಹಿಂದುಳಿದಿರುವಂತಹ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಹೆಚ್ಚು ಸೇರುವುದರಿಂದ ಗುಣಮಟ್ಟದ ಶಿಕ್ಷಣವನ್ನು ಸರ್ಕಾರಿ ಶಾಲೆಗಳು ನೀಡುವಂತಾಗಲಿ ಎಂದು ಆರೈಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಲೇಪಾಕ್ಷಪ್ಪ ಮಾತನಾಡಿ, ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿಶೇಷವಾಗಿ ಅಭಿಯಾನ ಮಾಡುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಮುಂದಾಗಿದ್ದೇವೆ. ಸರ್ಕಾರಿ ಶಾಲೆಯನ್ನು ಉಳಿಸಿ ಎನ್ನುವುದಕ್ಕಿಂತ ಸರ್ಕಾರಿ ಶಾಲೆಯನ್ನ ಹೆಚ್ಚಿನ ರೀತಿಯಲ್ಲಿ ಬಲವರ್ಧನೆ ಮಾಡಿದಾಗ ಖಂಡಿತವಾಗಿಯೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗುತ್ತದೆ ಎಂದರು.ಸರ್ಕಾರಿ ಶಾಲೆಯಲ್ಲಿ ಸರ್ಕಾರ ಹತ್ತಾರು ಯೋಜನೆ ಮಾಡುವ ಮೂಲಕ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡುತ್ತಿದೆ. ಅದರ ಸದುಪಯೋಗವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಲು ಅವಕಾಶ ಇದೆ. ಪೋಷಕರು ಸಹಕಾರ ನೀಡಬೇಕು. ಸರ್ಕಾರ ಗುಣಮಟ್ಟದ ಶಿಕ್ಷಣವನ್ನು ನೀಡುವಂತಹ ಶಿಕ್ಷಕರನ್ನು ಆಯ್ಕೆ ಮಾಡಿಕೊಂಡಿದೆ. ನಿಮ್ಮೂರಿನ ಸರ್ಕಾರಿ ಶಾಲೆಗಳನ್ನ ಉಳಿಸುವಂತಹ ಕೆಲಸಕ್ಕೆ ತಾವೆಲ್ಲರೂ ಕೂಡ ಮುಂದಾಗಬೇಕು ಎಂದು ಮನವಿ ಮಾಡಿದರು.