ಯಾರನ್ನೋ ನೋಡಿ ಮತ ಕೊಡಿಯೆನ್ನುವರನ್ನು ನಂಬಲು ಸಾಧ್ಯವಿಲ್ಲ

KannadaprabhaNewsNetwork |  
Published : Apr 27, 2024, 01:21 AM IST
ಆಆಆ | Kannada Prabha

ಸಾರಾಂಶ

ಚುನಾವಣೆಯ ಸಮಯದಲ್ಲಿ ಎಲ್ಲಿಂದಲೋ ಬಂದು ಕರ್ಮಭೂಮಿ ಎನ್ನುವವರನ್ನು, ಯಾರನ್ನೋ ನೋಡಿ ಮತ ಕೊಡಿ ಎನ್ನುವರನ್ನು ಜನರು ನಂಬಲು ಸಾಧ್ಯವಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಗುಡುಗಿದರು.

ಕನ್ನಡಪ್ರಭ ವಾರ್ತೆ ರಾಮದುರ್ಗ

ಚುನಾವಣೆಯ ಸಮಯದಲ್ಲಿ ಎಲ್ಲಿಂದಲೋ ಬಂದು ಕರ್ಮಭೂಮಿ ಎನ್ನುವವರನ್ನು, ಯಾರನ್ನೋ ನೋಡಿ ಮತ ಕೊಡಿ ಎನ್ನುವರನ್ನು ಜನರು ನಂಬಲು ಸಾಧ್ಯವಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಗುಡುಗಿದರು.

ತಾಲೂಕಿನ ವಿಧಾನಸಭಾ ಕ್ಷೇತ್ರದ ಬನ್ನೂರ್ ತಾಂಡಾ ಸಮುದಾಯ ಭವನ ಹತ್ತಿರ ನಡೆದ ತಾಲೂಕು ಬಂಜಾರ ಸಮುದಾಯದ (ತಾಂಡಾಗಳ) ಸಭೆಯಲ್ಲಿ ಬೆಳಗಾವಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಪರ ಮತಯಾಚಿಸಿ ಮಾತನಾಡಿದ ಅವರು, ಜನರ ಸ್ವಾಭಿಮಾನಕ್ಕಿಂತ ದೊಡ್ಡದು ಯಾವುದೂ ಇಲ್ಲ. ಹಾಗಾಗಿ ಎಲ್ಲ ವರ್ಗದ ಜನರು, ಮಹಿಳೆಯರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಲು ನಿರ್ಧರಿಸಿದ್ದಾರೆ ಎಂದರು.

ನರೇಗಾ ಯೋಜನೆ ತಂದಿದ್ದು ಕಾಂಗ್ರೆಸ್ ಪಕ್ಷ. ಅನ್ನ ಭಾಗ್ಯ ತಂದಿದ್ದು ಕಾಂಗ್ರೆಸ್ ಪಕ್ಷ. ಬಡವರಿಗಾಗಿನ ಎಲ್ಲ ಯೋಜನೆಗಳನ್ನು ರೂಪಿಸಿದ್ದು ಕಾಂಗ್ರೆಸ್ ಪಕ್ಷ. ಕೇವಲ ಯೋಜನೆ ಘೋಷಣೆಯಷ್ಟೇ ಅಲ್ಲ, ಅವುಗಳನ್ನು ಸಮರ್ಪಕವಾಗಿ ಜಾರಿಗೊಳಿಸುವ ಬದ್ಧತೆಯನ್ನೂ ಕಾಂಗ್ರೆಸ್ ಹೊಂದಿದೆ. ಕೊಟ್ಟ ವಚನದಿಂದ ಎಂದಿಗೂ ಹಿಂದೆ ಸರಿಯುವುದಿಲ್ಲ. ಹಾಗಾಗಿ ಪಕ್ಷ ಬೇಧ, ಜಾತಿ ಬೇಧ ಮರೆತು ಎಲ್ಲರೂ ಈ ಬಾರಿ ಮೃಣಾಲ ಹೆಬ್ಬಾಳಕರ್ ಅವರನ್ನು ಬೆಂಬಲಿಸಬೇಕು ಎಂದು ಕೋರಿದರು.

ರಾಜ್ಯ ಸರ್ಕಾರದಿಂದ ಅನುಷ್ಠಾನಗೊಂಡಿರುವ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಬಂಜಾರಾ ಸಮಾಜದವರು ಸಂತಸಗೊಂಡಿದ್ದಾರೆ. ಜತೆಗೆ ನೆಮ್ಮದಿಯ ಜೀವನವನ್ನು ನಡೆಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಬಡವರ, ಶ್ರಮಿಕರ, ರೈತರ ಪಕ್ಷವಾಗಿ ಗುರುತಿಸಿಕೊಂಡಿದೆ. ಮಹಿಳೆಯರ ಸ್ವಾವಲಂಬನೆಗೆ ಆದ್ಯತೆ ನೀಡಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

ಬಂಜಾರಾ ಸಮಾಜದವರ ವೇಷಭೂಷಣ, ಸಂಸ್ಕ್ರತಿ, ಉಡುಪುಗಳನ್ನು ತೊಟ್ಟು ಸಂಭ್ರಮಿಸಿದ ಸಚಿವರು ಬಂಜಾರಾ ಸಮಾಜದ ಕುಲ ಗುರುಗಳಿಗೆ ಗೌರವ ನಮನ ಸಲ್ಲಿಸಿದರು.

ಈ ಸಮಯದಲ್ಲಿ ಮುಖಂಡರಾದ ಪ್ರದೀಪ ಪಟ್ಟಣ, ಪರ್ವತಗೌಡ, ಗ್ರಾಮ ಪಂಚಾಯತಿ ಅಧ್ಯಕ್ಷೆ ಈರವ್ವ ಲಮಾಣಿ, ಶೇಖರ್ ಸಿದ್ದಲಿಂಗಪ್ಪನವರ, ಜಿ.ಬಿ.ರಂಗನ್ನಗೌಡ, ಜಹುರ್ ಹಾಜಿ, ಪರುಶರಾಮ ಪಮ್ಮಾರ, ತಾರಾಸಿಂಗ್ ರಾಥೋಡ್, ಲಕ್ಷ್ಮಣ ರಾಥೋಡ್, ಕುಮಾರ ರಾಥೋಡ್, ಸೋಮು‌ ಲಮಾಣಿ, ಸುಭಾಷ್ ಪಮ್ಮಾರ್, ಫಕೀರಪ್ಪ ಜಂಗವಾಡ್, ಜೀವಲಪ್ಪ ಲಮಾಣಿ, ಶಿವಪ್ಪ ಪೂಜೇರಿ, ನೀಲಪ್ಪ ದಾಡಿಬಾಂವಿ, ಕೃಷ್ಣ ಲಮಾಣಿ, ರಮೇಶ್ ಲಮಾಣಿ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.ಕಾಂಗ್ರೆಸ್ ಪಕ್ಷ ಹಿಂದಿನಿಂದಲೂ ಕೊಟ್ಟ ಮಾತು ಉಳಿಸಿಕೊಂಡು ರಾಷ್ಟ್ರ ಮತ್ತು ಜನ ಸೇವೆ ಮಾಡುತ್ತ ಬಂದಿದೆ. ಹಾಗಾಗಿ ಜನರು ಕಾಂಗ್ರೆಸ್ ಮೇಲೆ ವಿಶ್ವಾಸವಿಟ್ಟಿದ್ದಾರೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕು.-ಲಕ್ಷ್ಮೀ ಹೆಬ್ಬಾಳಕರ್, ಸಚಿವೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಾರತೀಯರ ಕರೆತರಲು ವಿಶೇಷ ವಿಮಾನ ಮಾಡಿ: ಮೋದಿಗೆ ಸಿಎಂ ಸಿದ್ದು ಪತ್ರ
100ಕ್ಕೂ ಕನ್ನಡಿಗರ ಹೊತ್ತು ಬಂತು ಮೊದಲ ವಿಮಾನ