ಗ್ರಾಮೀಣ ಸಾಮಾನ್ಯ ವರ್ಗದ ಮಕ್ಕಳ ಲಾಲನೆ ಪಾಲನೆಗೆ ರಾಜ್ಯ ಸರ್ಕಾರದ ಕೂಸಿನ ಮನೆ ಯೋಜನೆ ಜಾರಿಗೆ ತಂದಿದೆ. ಯೋಜನೆಯ ಮೂಲಕ ನೀವು ಗ್ರಾಮದ ಮಕ್ಕಳ ಲಾಲನೆ, ಪಾಲನೆ ಮಾಡುವ ಮೂಲಕ ಗ್ರಾಮದ ಮಕ್ಕಳಿಗೆ ತಾಯಿಯಾಗಿ ಕೆಲಸ ಮಾಡೋ ಸೌಭಾಗ್ಯ ನಿಮಗೆ ಸಿಕ್ಕಿದೆ ದೊರಕಿದೆ ಎಂದು ರೋಣ ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ರವಿ ಎ.ಎನ್. ಹೇಳಿದರು.
ರೋಣ: ಕೂಸಿನ ಮನೆ ಕಾರ್ಯಕ್ರಮವು ನರೇಗಾ ಯೋಜನೆಯ ಒಂದು ಭಾಗವಾಗಿದ್ದು, ಗ್ರಾಮೀಣ ಪ್ರದೇಶದ ಸಾಮಾನ್ಯ ವರ್ಗದ ಮಕ್ಕಳ ಲಾಲನೆ-ಪಾಲನೆಗೆ ರಾಜ್ಯ ಸರ್ಕಾರದ ಕೂಸಿನ ಮನೆ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯ ಮೂಲಕ ನೀವು ಗ್ರಾಮದ ಮಕ್ಕಳ ಲಾಲನೆ, ಪಾಲನೆ ಮಾಡುವ ಮೂಲಕ ಗ್ರಾಮದ ಮಕ್ಕಳಿಗೆ ತಾಯಿಯಾಗಿ ಕೆಲಸ ಮಾಡೋ ಸೌಭಾಗ್ಯ ನಿಮಗೆ ಸಿಕ್ಕಿದೆ ದೊರಕಿದೆ ಎಂದು ರೋಣ ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ರವಿ ಎ.ಎನ್. ಹೇಳಿದರು.
ಪಟ್ಟಣದ ಗುರು ಭವನದಲ್ಲಿ ತಾಪಂ ವತಿಯಿಂದ ಆಯೋಜಿಸಿದ್ದ ಕೂಸಿನ ಮನೆ ಆರೈಕೆದಾರರ ಮೂರು ದಿನಗಳ ತರಬೇತಿ ಕಾರ್ಯಾಗಾರದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕೂಸಿನ ಮನೆ ಯೋಜನೆಯು ಸಹ ಮಹಿಳಾ ಸಬಲೀಕರಣ ಮಾಡುವ ದೃಷ್ಟಿಯಿಂದ ಆರಂಭವಾಗಿದ್ದು, ನಿಮ್ಮ ಗ್ರಾಮದ ಬಂಧುಗಳು, ನೆರೆ ಹೊರೆಯವರು, ಗ್ರಾಮಸ್ಥರು ಗ್ರಾಮದಲ್ಲಿ ದುಡಿಯಲಿಕ್ಕೆ ಹೋಗುತ್ತಾರೆ. ಆ ಸಂದರ್ಭದಲ್ಲಿ ತಾವು ಅವರ ಮಕ್ಕಳನ್ನು ಆರೈಕೆ ಮಾಡುವ ಕೆಲಸ ಮಾಡಬೇಕಾಗುತ್ತದೆ. ಅವರಿಗೂ ಸಹ ಅಷ್ಟೇ ಹಣ ನರೇಗಾ ಯೋಜನೆಯಡಿ ಬರುತ್ತದೆ ಎಂದರು.ತಾವು ಲಾಲನೆ-ಪಾಲನೆ ಮಾಡುವ ಜೊತೆಗೆ ಮಕ್ಕಳಿಗೆ ಪೌಷ್ಟಿಕಾಂಶವುಳ್ಳ ಆಹಾರವನ್ನು ಕೊಟ್ಟು ಅವರನ್ನು ಆರೈಕೆ ಮಾಡಬೇಕು ಇದರಿಂದಾಗಿ ಮಕ್ಕಳ ಪೌಷ್ಟಿಕಾಂಶದ ಕೊರತೆಯೂ ನೀಗುತ್ತದೆ ಎಂದರು.ಗ್ರಾಮೀಣ ಪ್ರದೇಶದ ಮಕ್ಕಳ ಹಾಗೂ ಮಹಿಳೆಯರ ಶ್ರೇಯೋಭಿವೃದ್ಧಿಯ ಉದ್ದೇಶದಿಂದ ರಾಜ್ಯ ಸರ್ಕಾರ ಕೂಸಿನ ಮನೆ ಕಾರ್ಯಕ್ರಮವನ್ನು ಜಾರಿಗೊಳಿಸಿದೆ. ಪ್ರಾರಂಭದಲ್ಲಿ ತಾಲೂಕಿನಲ್ಲಿ 10 ಗ್ರಾಪಂ ವ್ಯಾಪ್ತಿಯಲ್ಲಿ ಕೂಸಿನ ಮನೆ ಆರಂಭಿಸಿ ಅದರ ಕೇರ್ ಕೇರ್ಗಳಿಗೆ(ಆರೈಕೆದಾರರು) ಮೂರು ದಿನಗಳ ತರಬೇತಿಯನ್ನು ನೀಡುತ್ತಿರುವುದು ಸಂತೋಷದ ವಿಚಾರವೆಂದರು.
ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾ ಐಇಸಿ ಸಂಯೋಜಕ ವೀರಭದ್ರಪ್ಪ ಸಜ್ಜನ ಮಾತನಾಡಿ, ಗದಗ ಜಿಲ್ಲೆಯಲ್ಲಿ ಒಟ್ಟು ೧೦೯ ಕೂಸಿನ ಮನೆಗಳನ್ನು ಆರಂಭಿಸುವ ಗುರಿ ಹೊಂದಲಾಗಿದೆ. ಅದರಂತೆ ಮೊದಲ ಹಂತದಲ್ಲಿ ೬೯ ಕೂಸಿನ ಮನೆಗಳನ್ನು ಜಿಲ್ಲೆಯಾದ್ಯಂತ ಆರಂಭಿಸಲಾಗುತ್ತಿದ್ದು, ರೋಣ ತಾಲೂಕಿನಲ್ಲಿ ಒಟ್ಟು 10 ಕೂಸಿನ ಮನೆಗಳನ್ನು ಅರಂಭಿಸಲಾಗುತ್ತಿದೆ ಎಂದರು. ಸರ್ಕಾರ ಜಾರಿಗೆ ತಂದಿರುವ ಕೂಸಿನ ಮನೆ ಕಾರ್ಯಕ್ರಮದ ಉದ್ದೇಶ ಹಾಗೂ ಮಹತ್ವದ ಬಗ್ಗೆ ಆರೈಕೆದಾರರಿಗೆ ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕ ರಿಯಾಜ ಖತೀಬ್, ಶಿವಯೋಗಿ ರಿತ್ತಿ, ಮಹಿಳಾ ಮತ್ತು ಕಲ್ಯಾಣ ಇಲಾಖೆ ಮೇಲ್ವಿಚಾರಕಿ ಮಂಜುಳಾ ಗುರಾಣಿ, ಅಬ್ಬಿಗೇರಿ, ಹೊಸಳ್ಳಿ, ಕುರಹಟ್ಟಿ, ಕೌಜಗೇರಿ, ಬೆಳವಣಿಕಿ, ಹೊಳೆಆಲೂರು, ಹೊಳೆಮಣ್ಣೂರು ಗ್ರಾಪಂ ಕೂಸಿನ ಮನೆ ಆರೈಕೆದಾರರು ಭಾಗವಹಿದ್ದರು. ತಾಪಂ ಐಇಸಿ ಕೋ ಅರ್ಡಿನೇಟರ್ ಮಂಜುನಾಥ ನಿರೂಪಿಸಿ,ವಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.