ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಶಾಲಾ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಂಕುರಂ ಹಿರಿಯ ವಿದ್ಯಾರ್ಥಿಗಳ ಟ್ರಸ್ಟ್ ಅಧ್ಯಕ್ಷ ಬೋಜೇಗೌಡ ಅವರಿಗೆ ಯಿಫಾ ಸಂಘಟನೆಯ ಅಧ್ಯಕ್ಷ ಶ್ರೀನಿಧಿ ಲಿಂಗಪ್ಪ ಅವರು ಚೆಕ್ ಹಸ್ತಾಂತರಿಸಿದರು.
ಈ ಸಂದರ್ಭ ಮಾತನಾಡಿದ ಟ್ರಸ್ಟ್ ಅಧ್ಯಕ್ಷ ಬೋಜೇಗೌಡ, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಕಡಿಮೆಯಾಗಿ ಮುಚ್ಚುವ ಹಂತದಲ್ಲಿರುವ ಹಿನ್ನೆಲೆ, ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳಲೇಬೇಕೆಂಬ ಚಿಂತನೆಯೊಂದಿಗೆ ನೇರುಗಳಲೆಯಲ್ಲಿ ಆಂಗ್ಲಮಾಧ್ಯಮ ಪೂರ್ವ ಪ್ರಾಥಮಿಕ ಶಾಲೆಯನ್ನು ಆರಂಭಿಸಲಾಗಿದೆ ಎಂದರು.ಈಗಾಗಲೇ 19 ಲಕ್ಷಕ್ಕೂ ಅಧಿಕ ಹಣವನ್ನು ಶಾಲೆಯ ಅಭಿವೃದ್ಧಿಗೆ ವ್ಯಯಿಸಲಾಗಿದೆ. ಗ್ರಾಮೀಣ ಭಾಗದ ಮಕ್ಕಳಿಗೂ ಪಟ್ಟಣದ ಶಾಲೆಗಳಂತೆಯೇ ಶಿಕ್ಷಣ ಸಿಗಬೇಕೆಂಬ ಉದ್ದೇಶದಿಂದ ಸಮಿತಿ ಕೆಲಸ ಮಾಡುತ್ತಿದೆ. ಜಿಲ್ಲೆಯಲ್ಲಿಯೇ ಪ್ರಥಮ ಎಂಬಂತೆ ಸರ್ಕಾರಿ ಶಾಲೆಗೆ ವಾಹನವನ್ನು ವ್ಯವಸ್ಥೆಗೊಳಿಸಲಾಗಿದೆ. ಆರಂಭಿಕ ವರ್ಷದಲ್ಲಿ ಎಲ್ಕೆಜಿಯಲ್ಲಿ 19 ವಿದ್ಯಾರ್ಥಿಗಳಿದ್ದಾರೆ. ಶಿಕ್ಷಣ ವ್ಯಾಪಾರೀಕರಣಗೊಂಡಿರುವ ಪ್ರಸ್ತುತತೆಯಲ್ಲಿ ಶೈಕ್ಷಣಿಕ ಸೇವೆ ಸಲ್ಲಿಸಲು ಅಂಕುರಂ ಟ್ರಸ್ಟ್ ಕೆಲಸ ಮಾಡುತ್ತಿದೆ ಎಂದು ಮಾಹಿತಿಯಿತ್ತರು.
ಗ್ರಾಮೀಣ ಭಾಗದಲ್ಲಿರುವ ಸರ್ಕಾರಿ ಶಾಲೆಗಳು ಉಳಿಯಬೇಕು. ಈ ನಿಟ್ಟಿನಲ್ಲಿ ಸಂಘಟನೆಯ ವತಿಯಿಂದ ಮುಂದಿನ ದಿನಗಳಲ್ಲಿಯೂ ನೆರವು ಒದಗಿಸಲಾಗುವುದು ಎಂದರು. ಸಂಘಟನೆಯ ಉಪಾಧ್ಯಕ್ಷ ಹರ್ಷಿತ್ ಶಿವಪ್ಪ ಮಾತನಾಡಿ, ಮುಂದಿನ ದಿನಗಳಲ್ಲಿ ಶಿಕ್ಷಕರಿಗೆ ಅನುಕೂಲವಾಗುವಂತೆ ಚೇರ್ಗಳನ್ನು ವಿತರಿಸಲಾಗುವುದು ಎಂದರು.