ಗೊಬ್ಬರದ ಮೂಟೆ ಬಿದ್ದು ಯುವಕ ಸಾವು

KannadaprabhaNewsNetwork |  
Published : Sep 06, 2025, 01:00 AM IST
೦೫ಬಿಹೆಚ್‌ಆರ್ ೩: ಪೂರ್ಣೇಶ್ | Kannada Prabha

ಸಾರಾಂಶ

ಬಾಳೆಹೊನ್ನೂರು: ಗೊಬ್ಬರದ ಮೂಟೆ ಮೈ ಮೇಲೆ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ಗುರುವಾರ ಸಮೀಪದ ಗೇರುಬೈಲು ಗ್ರಾಮದಲ್ಲಿ ನಡೆದಿದೆ.

ಬಾಳೆಹೊನ್ನೂರು: ಗೊಬ್ಬರದ ಮೂಟೆ ಮೈ ಮೇಲೆ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ಗುರುವಾರ ಸಮೀಪದ ಗೇರುಬೈಲು ಗ್ರಾಮದಲ್ಲಿ ನಡೆದಿದೆ.ಕರ್ಕೇಶ್ವರ ಗ್ರಾಮದ ಮೇಲ್ಪಾಲ್‌ನ ಪೂರ್ಣೇಶ್ (27) ಮೃತಪಟ್ಟ ಯುವಕ. ಈತ ಮೇಲ್ಪಾಲ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕಾರ್ಯನಿರ್ವಹಿಸಿಕೊಂಡಿದ್ದು, ಗುರುವಾರ ಕೃಷಿ ಸಂಘದಿಂದ ಗೇರುಬೈಲಿನ ಖಾಸಗಿ ಎಸ್ಟೇಟ್‌ಗೆ ನೀಡಲು ಗೊಬ್ಬರದ ಮೂಟೆಗಳನ್ನು ಪಿಕ್‌ಅಪ್ ವಾಹನದಲ್ಲಿ ತುಂಬಿಕೊಂಡು ಹೋಗಿದ್ದಾನೆ. ಬಳಿಕ ಗೊಬ್ಬರದ ಮೂಟೆಗಳನ್ನು ಪಿಕ್‌ಅಪ್‌ನಿಂದ ಅನ್‌ಲೋಡ್ ಮಾಡುವಾಗ ಆಕಸ್ಮಿಕ ಕಾಲು ಜಾರಿ ಕುಸಿದು ಬಿದ್ದಿದ್ದು, ಈ ವೇಳೆ ಆತ ಹೊತ್ತಿದ್ದ ಗೊಬ್ಬರದ ಮೂಟೆ ಆತನ ಕುತ್ತಿಗೆಯ ಮೇಲೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಘಟನೆ ಕುರಿತು ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತನ ಸಹೋದರಿ ಪೂರ್ಣಿಮಾ ದೂರು ನೀಡಿದ್ದಾರೆ. ಪಿಎಸ್‌ಐ ರವೀಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.೦೫ಬಿಹೆಚ್‌ಆರ್ ೩: ಪೂರ್ಣೇಶ್

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿವೈಆರ್‌
ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಎಲ್ಲರ ಸಹಕಾರ ಅಗತ್ಯ: ಡಾ.ನೂರಲ್ ಹುದಾ ಕರೆ