ಗಿಳಿ ರಕ್ಷಿಸಲು ಹೋಗಿ ಕರೆಂಟ್‌ ಶಾಕ್‌ ಹೊಡೆದು ಪ್ರಾಣತೆತ್ತ ಯುವಕ

KannadaprabhaNewsNetwork |  
Published : Dec 13, 2025, 02:15 AM IST
Arun | Kannada Prabha

ಸಾರಾಂಶ

ಹೈಟೆನ್ಷನ್ ವೈಯರ್​ ಕಂಬದ ಮೇಲೆ ಕುಳಿತಿದ್ದ ಸಾಕಿದ​ ಗಿಳಿಯನ್ನು ರಕ್ಷಿಸಲು ಹೋಗಿ ವಿದ್ಯುತ್ ಶಾಕ್ ಹೊಡೆದು ಯುವಕನೊಬ್ಬ ಮೃತಪಟ್ಟಿರುವ ಘಟನೆ ಶುಕ್ರವಾರ ಬೆಳಗ್ಗೆ ಗಿರಿನಗರದ ಖಾಸಗಿ ಅಪಾರ್ಟ್‌ಮೆಂಟ್​ನಲ್ಲಿ ನಡೆದಿದೆ. ಮಂಡ್ಯದ ನಾಗಮಂಗಲ ಮೂಲದ ಅರುಣ್ ಕುಮಾರ್ (32) ಮೃತ ದುರ್ದೈವಿ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಹೈಟೆನ್ಷನ್ ವೈಯರ್​ ಕಂಬದ ಮೇಲೆ ಕುಳಿತಿದ್ದ ಸಾಕಿದ​ ಗಿಳಿಯನ್ನು ರಕ್ಷಿಸಲು ಹೋಗಿ ವಿದ್ಯುತ್ ಶಾಕ್ ಹೊಡೆದು ಯುವಕನೊಬ್ಬ ಮೃತಪಟ್ಟಿರುವ ಘಟನೆ ಶುಕ್ರವಾರ ಬೆಳಗ್ಗೆ ಗಿರಿನಗರದ ಖಾಸಗಿ ಅಪಾರ್ಟ್‌ಮೆಂಟ್​ನಲ್ಲಿ ನಡೆದಿದೆ. ಮಂಡ್ಯದ ನಾಗಮಂಗಲ ಮೂಲದ ಅರುಣ್ ಕುಮಾರ್ (32) ಮೃತ ದುರ್ದೈವಿ.

ಅರುಣ್ ಕುಮಾರ್‌ ತಮ್ಮ ಚಿಕ್ಕಮ್ಮ ಲಿಖಿತ ಅವರ ಜತೆ ಗಿರಿನಗರದ ಅಪಾರ್ಟ್‌ಮೆಂಟ್​ನಲ್ಲಿ ವಾಸವಿದ್ದ. ಇವರ ಚಿಕ್ಕಮ್ಮ ಗಿಳಿಯನ್ನು ಸಾಕಿದ್ದು, ಆ ಗಿಳಿ ಮನೆಯಿಂದ ಹಾರಿಹೋಗಿ ಅಪಾರ್ಟ್‌ಮೆಂಟ್​ನ ಆವರಣದಲ್ಲಿರುವ ಹೈಟೆನ್ಷನ್ ವೈಯರ್​ ಕಂಬದ ಮೇಲೆ ಕುಳಿತುಕೊಂಡಿತ್ತು. ಇದನ್ನು ನೋಡಿದ ಅರುಣ್‌ ಕುಮಾರ್‌ ಬೆಳಗ್ಗೆ 10.30 ರ ಸುಮಾರಿಗೆ ಗಿಳಿ ರಕ್ಷಣೆಗೆ ಮುಂದಾಗಿದ್ದಾರೆ. ಅಪಾರ್ಟ್‌ಮೆಂಟ್​ ಕಾಂಪೌಂಡ್ ಮೇಲೆ ನಿಂತು ಸ್ಟೀಲ್ ಪೈಪ್​​ಗೆ ಕಟ್ಟಿಗೆ ಸೇರಿಸಿ ಓಡಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಹೈಟೆನ್ಷನ್ ವೈಯರ್​ನಿಂದ ವಿದ್ಯುತ್‌ ಶಾಕ್‌ ಹೊಡೆದು ಅರುಣ್ ಕಾಂಪೌಂಡ್​​ ಮೇಲಿಂದ ಕೆಳಗೆ ಬಿದ್ದಿದ್ದಾರೆ. ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ದಾರಿ ಮಧ್ಯದಲ್ಲಿಯೇ ಅವರು ಮೃತಪಟ್ಟಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಗಿರಿನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

2 ಲಕ್ಷ ಬೆಲೆಯ ಫಾರಿನ್ ಗಿಳಿ?

ಅರುಣ್‌ ಚಿಕ್ಕಮ್ಮನ ಮನೆಗೆ ಆಗಾಗ ಬಂದು ಉಳಿದುಕೊಳ್ಳುತ್ತಿದ್ದರು. ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಗಿರಿನಗರ ಠಾಣೆಯಲ್ಲಿ ಯುಡಿಆರ್​ ಪ್ರಕರಣ ದಾಖಲಾಗಿದೆ. ಅರುಣ್‌ ರಕ್ಷಣೆಗೆ ಮುಂದಾಗಿದ್ದು 2 ಲಕ್ಷ ರು. ಬೆಲೆ ಬಾಳುವ ಫಾರಿನ್ ಗಿಳಿ ಎನ್ನಲಾಗಿದೆ.​

ನಿವಾಸಿಗಳ ಆಕ್ರೋಶ: ಇನ್ನು ಸ್ಥಳಕ್ಕೆ ಬೆಸ್ಕಾಂ ಅಧಿಕಾರಿಗಳು ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಅಪಾರ್ಟ್‌ಮೆಂಟ್ ಒಳಗೆ 60 ಸಾವಿರ ಕೆ.ವಿ ಸಾಮರ್ಥ್ಯದ ವೈಯರ್​ಗಳು ಇರುವುದಕ್ಕೆ ಅಲ್ಲಿನ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ