ಯುವಜನರೇ ಹಾನಿಕಾರಕ ವಸ್ತುಗಳ ಬಳಕೆ ಮಾಡದಿರಿ

KannadaprabhaNewsNetwork |  
Published : Jan 10, 2024, 01:46 AM IST
ಪೊಟೋ: 9ಎಸ್‌ಎಂಜಿಕೆಪಿ03ಶಿವಮೊಗ್ಗದ ದೇಶಿಯ ವಿದ್ಯಾಶಾಲಾ ‌ಸಮಿತಿಯ ಡಿವಿಎಸ್ ರಂಗಮಂದಿರದಲ್ಲಿ ಆಯೋಜಿಸಿದ್ದ ಅಂತರ ಕಾಲೇಜು ದೇಹದಾರ್ಢ್ಯ ಸ್ಪರ್ಧೆ ಹಾಗೂ ಆಯ್ಕೆ ಪ್ರಕ್ರಿಯೆ ‌2023-24 ಕಾರ್ಯಕ್ರಮವನ್ನು ಕುವೆಂಪು ವಿಶ್ವವಿದ್ಯಾಲಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಎನ್.ಡಿ.ವಿರೂಪಾಕ್ಷ ಉದ್ಘಾಟಿಸಿದರು.  | Kannada Prabha

ಸಾರಾಂಶ

ಪ್ರತಿಯೊಬ್ಬರಿಗೂ ಸದೃಢ ದೇಹ, ಸ್ವಚ್ಛ ಮನಸ್ಸು, ಉತ್ತಮ ಚಿಂತನೆಗಳು ಬಹುಮುಖ್ಯ. ಆದರೆ, ಕೆಲವರು ಅತಿ ಕಡಿಮೆ ಸಮಯದಲ್ಲಿ ದೇಹದ ಶಕ್ತಿ, ಸಾಮರ್ಥ್ಯ ಹಾಗೂ ಸೌಂದರ್ಯ ಹೆಚ್ಚಿಸಿಕೊಳ್ಳಲು ಹಾನಿಕಾರಕ ವಸ್ತುಗಳ ಬಳಕೆ ಮಾಡಬೇಡಿ ಎಂದು ಕುವೆಂಪು ವಿಶ್ವವಿದ್ಯಾಲಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಎನ್.ಡಿ. ವಿರೂಪಾಕ್ಷ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಅತಿ ಕಡಿಮೆ ಸಮಯದಲ್ಲಿ ದೇಹದ ಶಕ್ತಿ, ಸಾಮರ್ಥ್ಯ ಹಾಗೂ ಸೌಂದರ್ಯ ಹೆಚ್ಚಿಸಿಕೊಳ್ಳಲು ಹಾನಿಕಾರಕ ವಸ್ತುಗಳ ಬಳಕೆ ಮಾಡಬೇಡಿ. ಉತ್ತಮ ದೈಹಿಕ ಸಾಮರ್ಥ್ಯ ಕಾಪಾಡಿಕೊಳ್ಳಬೇಕಾದರೆ ನಿರಂತರ ಶ್ರಮ ವಹಿಸಿ ಅಭ್ಯಾಸವೊಂದೇ ಮಾರ್ಗ ಎಂದು ಕುವೆಂಪು ವಿಶ್ವವಿದ್ಯಾಲಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಎನ್.ಡಿ. ವಿರೂಪಾಕ್ಷ ಹೇಳಿದರು.

ನಗರದ ದೇಶಿಯ ವಿದ್ಯಾಶಾಲಾ ‌ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಐಕ್ಯೂಎಸಿ ಘಟಕ, ಕುವೆಂಪು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಡಿವಿಎಸ್ ರಂಗಮಂದಿರದಲ್ಲಿ ಆಯೋಜಿಸಿದ್ದ ಅಂತರ ಕಾಲೇಜು ದೇಹದಾರ್ಢ್ಯ ಸ್ಪರ್ಧೆ ಹಾಗೂ ಆಯ್ಕೆ ಪ್ರಕ್ರಿಯೆ ‌2023-24 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ದೇಹದಾರ್ಢ್ಯ ಸ್ಪರ್ಧೆ ದೃಷ್ಟಿಯಿಂದ ಗಮನಿಸಿದಾಗ ಯುವಜನರು ದೇಹಕ್ಕೆ ಹಾನಿ ಉಂಟು ಮಾಡಬಲ್ಲ ಪೌಡರ್‌ಗಳ ಬಳಕೆ ಮಾಡುತ್ತಿದ್ದಾರೆ. ಹಾನಿಕಾರಕ ವಸ್ತುಗಳ ಬಳಕೆ ಕಡಿಮೆ ಸಮಯದಲ್ಲಿ ಫಲಿತಾಂಶ ನೀಡಿದಂತೆ ಕಂಡರೂ, ಜೀವನಪೂರ್ತಿ‌ ನೋವು ನೀಡುವ ಕಾಯಿಲೆಗಳನ್ನು ನಿಮ್ಮ ದೇಹಕ್ಕೆ ಆವರಿಸುವಂತೆ ಮಾಡುತ್ತವೆ. ಆದ್ದರಿಂದ ಯಾವುದೇ ಹಾನಿಕಾರಕ ವಸ್ತುಗಳ ಬಳಕೆ ಮಾಡಬೇಡಿ ಎಂದು ತಿಳಿಸಿದರು.

ಸಮಿತಿ ಕಾರ್ಯದರ್ಶಿ ಎಸ್.ರಾಜಶೇಖರ್ ಮಾತನಾಡಿ, ಶಿಸ್ತಿನ ಜೀವನಶೈಲಿ ರೂಪಿಸಿಕೊಳ್ಳಲು ಕ್ರೀಡೆ ಸಹಕಾರಿಯಾಗಿದೆ. ಯುವಜನರು ಕ್ರೀಡಾ ಚಟುವಟಿಕೆ ಹಾಗೂ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಆಸಕ್ತಿ ವಹಿಸಬೇಕು. ನಮ್ಮ ಸಂಸ್ಥೆ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದು, ಪ್ರತಿಯೊಬ್ಬ ಕ್ರೀಡಾಪಟುವಿಗೂ ಅಭಿನಂದನೆ ಎಂದು ಹೇಳಿದರು.

ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್ ಮಾತನಾಡಿ, ಆರೋಗ್ಯ ಜಾಗೃತಿ ದೃಷ್ಟಿಯಿಂದ ಇಂತಹ ಸ್ಪರ್ಧೆ ಕಾರ್ಯಕ್ರಮಗಳು ಅತ್ಯಂತ ಸಹಕಾರಿ. ಪ್ರತಿಯೊಬ್ಬ ವ್ಯಕ್ತಿಯೂ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಪ್ರಾಮುಖ್ಯತೆ ನೀಡಬೇಕು. ಸ್ಪರ್ಧೆ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.

ಸಹ ಕಾರ್ಯದರ್ಶಿ ಡಾ. ಎ.ಸತೀಶ್‌ಕುಮಾರ್ ಶೆಟ್ಟಿ ಮಾತನಾಡಿ, ಯುವಜನತೆ ಸಮಾಜದ ಆಸ್ತಿ, ದೇಹ ಸದೃಢ ಆಗಿಟ್ಟುಕೊಂಡರೆ ಮನಸ್ಸು ಸಹ ಸದೃಢವಾಗಿರುತ್ತದೆ. ದೈಹಿಕ ಸಾಮರ್ಥ್ಯ ವೃದ್ಧಿಸಿಕೊಳ್ಳುವ ಕೇಂದ್ರಗಳು ಹೆಚ್ಚಾಗಬೇಕು. ಯುವ ವಿದ್ಯಾರ್ಥಿಗಳಲ್ಲಿ ಆರೋಗ್ಯ ಜಾಗೃತಿ ಮುಖ್ಯ ಎಂದು ಅಭಿಪ್ರಾಯಪಟ್ಟರು.

ಸಮಿತಿ ಖಜಾಂಚಿ ಬಿ.ಗೋಪಿನಾಥ್, ಐಕ್ಯೂಎಸಿ ಸಂಚಾಲಕ ಎನ್.ಕುಮಾರಸ್ವಾಮಿ, ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಕೆ.ಸಚಿನ್, ಕೇತನಾ ಆರ್ತಿ, ಡಾ.ರಾಜೇಶ್ವರಿ ಮತ್ತಿತರರು ಉಪಸ್ಥಿತರಿದ್ದರು.

- - - -9ಎಸ್‌ಎಂಜಿಕೆಪಿ03:

ಅಂತರ ಕಾಲೇಜು ದೇಹದಾರ್ಢ್ಯ ಸ್ಪರ್ಧೆ- ಆಯ್ಕೆ ಕಾರ್ಯಕ್ರಮವನ್ನು ಕುವೆಂಪು ವಿವಿ ದೈಹಿಕ ಶಿಕ್ಷಣ ವಿಭಾಗ ನಿರ್ದೇಶಕ ಡಾ. ಎನ್.ಡಿ.ವಿರೂಪಾಕ್ಷ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌
ಬ್ಯಾಲೆಟ್‌ ಪೇಪರಲ್ಲೇ ಪಂಚಾಯ್ತಿ ಚುನಾವಣೆಗೆ ಸರ್ಕಾರ ಮಸೂದೆ