ಚಿತ್ರದುರ್ಗ: ಯುವಜನರನ್ನು ಮತದಾನದ ಕಡೆಗೆ ಸೆಳೆಯುವ ಅಗತ್ಯವಿದೆ ಎಂದು ಆರ್ಥಿಕ ಚಿಂತಕ ಜಿ.ಎನ್.ಮಲ್ಲಿಕಾರ್ಜುನ ಹೇಳಿದರು.
ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ತಾಪಂ ಇಓ ಪಿ.ಎಸ್.ಅನಂತರಾಜು ಮಾತನಾಡಿ, ಪ್ರಜಾಪ್ರಭುತ್ವಕ್ಕೆ ಸಂವಿಧಾನ ತಳಹದಿಯಾಗಿದೆ. ಮತದಾನ ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಸ್ವೀಪ್ಸಮಿತಿಯಿಂದ ರಂಗೋಲಿ ಸ್ಪರ್ಧೆ, ಕವಿಗೋಷ್ಠಿ, ಜಾಥಾ ಸೇರಿದಂತೆ ನಾನಾ ಕಾಯಾಕ್ರಮಗಳನ್ನು ಆಯೋಜಿಸಲಾಗಿದೆ. 18 ತುಂಬಿದ ಎಲ್ಲರು ಕಡ್ಡಾಯವಾಗಿ ಮತ ಚಲಾಯಿಸಬೇಕು. ವೃದ್ಧರಿಗೆ, ವಿಕಲಚೇತನರಿಗೆ ಮತದಾನಕ್ಕೆ ವಿಶೇಷ ಸವಲತ್ತುಗಳನ್ನು ನೀಡಲಾಗಿದೆ ಎಂದರು.
ಅಧ್ಯಕ್ಷತೆವಹಿಸಿದ್ದ ಪ್ರೊ.ಜಿ.ಪರಮೇಶ್ವರಪ್ಪ ಮಾತನಾಡಿ, ಸ್ವಂತ ಮನೆಯೂ ಇಲ್ಲದ, ವಾಹನವೂ ಇಲ್ಲದ ಆಟೋದಲ್ಲಿ ಮತ್ತು ಸೈಕಲ್ನಲ್ಲಿ ಓಡಾಡುವ ಕೇಂದ್ರ ಸರ್ಕಾರದ ಸಚಿವರನ್ನು ನೋಡಿದ್ದೇವೆ. ಇಂತಹ ಜನಪ್ರತಿನಿಧಿಗಳು ಸಾರ್ವಜನಿಕರಿಗೆ ಮಾದರಿಯಾಗಿರಬೇಕು. ಕೋಟಿಗಟ್ಟಲೆ ಆಸ್ತಿ ಹೊಂದಿರುವವರು ಮಾತ್ರ ನಾಮಪತ್ರ ಸಲ್ಲಿಸುತ್ತಿರುವುದು ನೋಡುತ್ತಿದ್ದೇವೆ. ಯುವಜನರು ಭ್ರಷ್ಟತೆಯನ್ನು ಪ್ರತಿರೋಧಿಸುವ ಹಾಗೂ ಪ್ರಶ್ನಿಸುವ ಮನೋಭಾವನೆಯನ್ನು ರೂಢಿಸಿಕೊಳ್ಳಬೇಕು ಎಂದರು.ಕಾರ್ಯಕ್ರಮದಲ್ಲಿ ವಿ.ಸುರೇಶ್ ಗುಪ್ತಾ, ಧನಂಜಯ ಮೆಂಗಸಂದ್ರ, ಶೈಲಜಾ ಬಾಬು, ಮೀರಾ ನಾಡಿಗ್, ನೇತ್ರಾವತಿ ನೆಲ್ಲಿಕಟ್ಟೆ, ಎ.ಅಂಬರೀಶ್, ಶಿವಪ್ಪ ಕ್ಯಾದಿಗುಂಟೆ, ರಜನಿ ಸೇರಿದಂತೆ ಜಿಲ್ಲೆಯ 30 ಕವಿಗಳು ಕವನ ವಾಚಿಸಿದರು. ರೋಟರಿ ಕ್ಲಬ್ ಕಾರ್ಯದರ್ಶಿ ಇ.ಲಕ್ಷ್ಮೀಕಾಂತ, ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ. ಶಿವಸ್ವಾಮಿ, ಸಾಹಿತಿ ಟೀಕಾ ಸುರೇಶ್ ಗುಪ್ತ, ಸಂಚಾಲಕ ಶ್ರೀನಿವಾಸ್ ಮಳಲಿ, ಕೋಶಾಧ್ಯಕ್ಷ ಸಿ.ಲೋಕೇಶ, ಸಂಘಟನಾ ಕಾರ್ಯದರ್ಶಿ ವಿ.ಧನಂಜಯ ಮತ್ತಿತರರಿದ್ದರು.