ಯುವಜನತೆ ರಕ್ತದಾನಕ್ಕೆ ಮುಂದೆ ಬರಬೇಕು: ದಿನೇಶ ಶೆಟ್ಟಿ

KannadaprabhaNewsNetwork |  
Published : Jun 18, 2024, 12:48 AM IST
ಕ್ಯಾಪ್ಷನಃ14ಕೆಡಿವಿಜಿ41ಃದಾವಣಗೆರೆಯ ಹರ್ಷಿತಾ ಕಂಪ್ಯೂಟರ್ಸ್‌ ನಿಂದ ನಡೆದ ರಕ್ತದಾನ ಶಿಬಿರವನ್ನು ದಿನೇಶ ಕೆ.ಶೆಟ್ಟಿ ಉದ್ಘಾಟಿಸಿದರು. | Kannada Prabha

ಸಾರಾಂಶ

ರಕ್ತದಾನ ಶ್ರೇಷ್ಠದಾನ. ರಕ್ತದಾನವನ್ನು ಮಾಡುವುದರಿಂದ ನಮ್ಮ ಆರೋಗ್ಯ ಸ್ವಚ್ಛವಾಗುತ್ತದೆ ಹಾಗೂ ಸಮಾಜದ ಅನೇಕರ ಬಾಳಿಗೆ ಬೆಳಕಾಗುತ್ತದೆ ಎಂದು ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ, ದಾವಣಗೆರೆ, ಜೂ. 14, ರಕ್ತದಾನ ಶ್ರೇಷ್ಠದಾನ. ರಕ್ತದಾನವನ್ನು ಮಾಡುವುದರಿಂದ ನಮ್ಮ ಆರೋಗ್ಯ ಸ್ವಚ್ಛವಾಗುತ್ತದೆ ಹಾಗೂ ಸಮಾಜದ ಅನೇಕರ ಬಾಳಿಗೆ ಬೆಳಕಾಗುತ್ತದೆ ಎಂದು ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ತಿಳಿಸಿದರು. ನಗರದ ಪಿ.ಜೆ.ಬಡಾವಣೆಯ ಹರ್ಷಿತ ಕಂಪ್ಯೂಟರ್ಸ್‌ ಆವರಣದಲ್ಲಿ ಶುಕ್ರವಾರ ಸಂಕಲ್ಪ ಸೇವಾ ಫೌಂಡೇಶನ್, ಕ್ರೀಡಾ ಭಾರತಿ, ಚಿಗಟೇರಿ ಜಿಲ್ಲಾ ಆಸ್ಪತ್ರೆ ಇವರ ಸಹಯೋಗದಲ್ಲಿ ನಡೆದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಾನೂ ಸಹಾ ಸುಮಾರು 30 ಬಾರಿ ರಕ್ತದಾನ ಮಾಡಿದ್ದು, ಕಳೆದ 30 ವರ್ಷಗಳಿಂದ ತಮ್ಮ ಸ್ನೇಹಿತರೊಂದಿಗೆ ಸೇರಿ ಅನೇಕ ರಕ್ತದಾನ ಶಿಬಿರಗಳನ್ನು ಆಯೋಜಿಸುತ್ತಾ ಬಂದಿದ್ದೇನೆ ಎಂದ ಅವರು, ಯುವ ಜನತೆ ರಕ್ತದಾನ ಮಾಡಲು ಮುಂದೆ ಬರಬೇಕು. ಎಲ್ಲರೂ ಇಂತಹ ಕಾರ್ಯಕ್ರಮಕ್ಕೆ ಕೈಜೋಡಿಸಬೇಕೆಂದರು.ಚಿಗಟೇರಿ ಜಿಲ್ಲಾ ಆಸ್ಪತ್ರೆ ರಕ್ತ ಕೇಂದ್ರದ ವೈದ್ಯಾಧಿಕಾರಿ ಡಿ.ಎಚ್. ಗೀತಾ ಮಾತನಾಡಿ, ರಕ್ತಕ್ಕೆ ಪರ‍್ಯಾಯ ವಸ್ತುವಿಲ್ಲ. ರಕ್ತವನ್ನು ಇನ್ನೊಬ್ಬರಿಂದ ಪಡೆದು ರೋಗಿಗಳಿಗೆ, ಅಪಘಾತವಾದವರಿಗೆ, ಹಾಗೂ ಗರ್ಭಿಣಿಯರಿಗೆ ನೀಡಬೇಕು. ರಕ್ತವನ್ನು ದಾನ ಮಾಡುವುದರಿಂದ ಆರೋಗ್ಯದ ಮೇಲೆ ಆಗುವ ಅನುಕೂಲತೆಯನ್ನು ಎಲ್ಲರೂ ತಿಳಿದುಕೊಳ್ಳುವ ಅವಶ್ಯಕತೆ ಎಂದುರು.

ಈ ಕಾರ್ಯಕ್ರಮದಲ್ಲಿ ಲತಿಕಾ ದಿನೇಶ್ ಕೆ. ಶೆಟ್ಟಿ, ವೈದ್ಯಾಧಿಕಾರಿ ಡಾ.ಅಕ್ಷಯ, ಸಂಕಲ್ಪ ಸೇವಾ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಜಿ.ಮಹಾಂತೇಶ, ಆರ್‌ಎಸ್‌ಎಸ್ ಕಾರ್ಯಕರ್ತ ಎಸ್.ಎನ್. ಮಲ್ಲಿಕಾರ್ಜುನ, ಯೋಗ ಶಿಕ್ಷಕ ಕೆ.ಕರಿಬಸಪ್ಪ, ಆಪ್ತ ಸಮಾಲೋಚನೆ ಅಧಿಕಾರಿ ದುರ್ಗೇಶ್ ಪೂಜಾರ್, ನಾಗರಾಜ ಕುರ್ಡೇಕರ್, ಪ್ರಕಾಶ್ ಪಿ.ಕುರಡೇಕರ್, ಬಿ.ಕೆ.ನಾಗರಾಜ, ಕೆ.ಜೆ.ನಾಗರಾಜ, ಬದರಿ ಪ್ರಸಾದ್, ಆನಂದ ಬಿ.ಜೈನ್, ಎ.ಎಂ.ಪ್ರಶಾಂತ್ ಕುಮಾರ, ವಿನಯ್ ಕುಮಾರ, ಎಸ್‌.ಜೆ.ಎಂ ಪ್ರಕಾಶ, ಎಂ. ಮಾಲಾ, ಕುಸ್ಮಿದಾ ಬಾನು, ಶಿವಪ್ಪ ಹಾಗೂ ಜಿಲ್ಲಾ ಆಸ್ಪತ್ರೆಯ ಎಲ್ಲಾ ಸಿಬ್ಬಂದಿ ಇತರರು ಇದ್ದರು.

30ಕ್ಕೂ ಹೆಚ್ಚು ಜನರು ರಕ್ತದಾನ ಮಾಡುವ ಮೂಲಕ ಇತರರಿಗೆ ಮಾದರಿಯಾದರು.........

- 14ಕೆಡಿವಿಜಿ41ಃ

ದಾವಣಗೆರೆಯ ಹರ್ಷಿತಾ ಕಂಪ್ಯೂಟರ್ಸ್‌ನಿಂದ ನಡೆದ ರಕ್ತದಾನ ಶಿಬಿರವನ್ನು ದಿನೇಶ ಕೆ. ಶೆಟ್ಟಿ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!