ಕನ್ನಡಪ್ರಭ ವಾರ್ತೆ ಬೆಂಗಳೂರು
ಬೆಂಗಳೂರಿನ ಒಕಳಿಪುರಂನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ರೇಷ್ಮೆ ಮತ್ತು ಖನಿಜ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ, ಇ-ರೇಷ್ಮೆ ಪೋರ್ಟಲ್ ಬಿಡುಗಡೆ ಮಾಡಿ ಮಾತನಾಡಿದರು.
ಕರ್ನಾಟಕವು ಕಚ್ಚಾ ರೇಷ್ಮೆ ಉತ್ಪಾದನೆ, ಕಾಫಿ ಬೆಳೆಯಲ್ಲಿ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದೆ. ಹಾಲು ಉತ್ಪಾದನೆಯಲ್ಲಿ ದೇಶದಲ್ಲಿ ಎರಡನೇ ಸ್ಥಾನದಲ್ಲಿದ್ದೇವೆ. ರಾಜ್ಯದ 1.22 ಲಕ್ಷ ಹೆಕ್ಟೇರ್ನಲ್ಲಿ ರೇಷ್ಮೆ ಉತ್ಪಾದಿಸುತ್ತಿದ್ದು 1.51 ಲಕ್ಷ ಕುಟುಂಬಗಳು ಜೀವನಕ್ಕೆ ರೇಷ್ಮೆಯನ್ನು ಅವಲಂಬಿಸಿವೆ. ಇದು ಲಾಭದಾಯಕ ಕಸುಬಾಗಿದ್ದು ವ್ಯವಸಾಯದ ಜೊತೆಗೆ ರೇಷ್ಮೆ ಕೃಷಿಯನ್ನೂ ಕೈಗೊಳ್ಳಿ. ರೇಷ್ಮೆ ಕೃಷಿ ಜೊತೆಗೆ ತೋಟಗಾರಿಕೆ, ಪಶುಸಂಗೋಪನೆಯಲ್ಲೂ ತೊಡಗಿದರೆ ಹೆಚ್ಚು ಆದಾಯ ಗಳಿಸಬಹುದು ಎಂದರು.ಅನುಪಯುಕ್ತ ಜಾಗ ಬಳಸಿಕೊಳ್ಳಿ:
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಖನಿಜ ನಿಗಮದ ಉಪಾಧ್ಯಕ್ಷ ಎಚ್.ಲಕ್ಷ್ಮಣ, ವಾಣಿಜ್ಯ ಇಲಾಖೆ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಉಪಸ್ಥಿತರಿದ್ದರು.ಸಿಬ್ಬಂದಿ ನೇಮಕಕ್ಕೆ ಮನವಿ:
ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು ಇಲಾಖೆಯಲ್ಲಿ ನೌಕರರು ಇಲ್ಲದಂತಾಗಿದೆ. 56 ಸಾವಿರ ಹುದ್ದೆ ನೇಮಕಾತಿ ಸಂದರ್ಭದಲ್ಲಿ ರೇಷ್ಮೆ ಇಲಾಖೆಗೆ ಸಿಬ್ಬಂದಿ ನೇಮಕ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು. ಖನಿಜ ನಿಗಮದ ಅಧ್ಯಕ್ಷ ಜಿ.ಎಸ್.ಪಾಟೀಲ್ ಮಾತನಾಡಿ, ನಿಗಮದಲ್ಲಿ 1800 ಸಿಬ್ಬಂದಿ ಇದ್ದರು. ಈಗ 350 ಸಿಬ್ಬಂದಿ ಮಾತ್ರ ಇದ್ದಾರೆ. ಸಿಬ್ಬಂದಿ ನೇಮಕಕ್ಕೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸಿದರು.ರಾಜಕೀಯ ಮಾತಾಡಲು ವೇದಿಕೆ ತಯಾರಿಸಿ:
ಇಲ್ಲಿ ರಾಜಕೀಯ ಮಾತನಾಡುವುದು ಬೇಡ. ದಿನೇಶ್ ಗುಂಡೂರಾವ್ ವೇದಿಕೆ ತಯಾರು ಮಾಡಲಿ. ಅಲ್ಲಿ ರಾಜಕೀಯದ ಬಗ್ಗೆ ಮಾತನಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದು ವಿಶೇಷವಾಗಿತ್ತು.