ಕನ್ನಡಪರ ಕಾರ್ಯಕ್ರಮಗಳಲ್ಲಿ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ಅಗತ್ಯ: ಪ್ರದೀಪ ಕುಮಾರ ಕಲ್ಕೂರ

KannadaprabhaNewsNetwork |  
Published : Apr 22, 2025, 01:49 AM IST
ಕೇರಳ ರಾಜ್ಯಕನ್ನಡ  ಚುಟುಕು ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ | Kannada Prabha

ಸಾರಾಂಶ

ಯುಗ ಪುರುಷ ಕಿನ್ನಿಗೋಳಿ ಆಶ್ರಯದಲ್ಲಿ ಕೇರಳ ರಾಜ್ಯ-ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ, ಕನ್ನಡ ಭವನ ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಸಹಭಾಗಿತ್ವದಲ್ಲಿ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಿತು.

ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಘಟಕ ಉದ್ಘಾಟನೆ

ಕನ್ನಡಪ್ರಭ ವಾರ್ತೆ ಮೂಲ್ಕಿ

ಯುವ ತಲೆಮಾರನ್ನು ಕನ್ನಡಪರ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವ ಜೊತೆಗೆ ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸಿ, ಸೂಕ್ತ ಅವಕಾಶ ಕಲ್ಪಿಸುವ ವೇದಿಕೆಯಾಗಿ, ನೂತನ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕಾರ್ಯವೆಸಗಬೇಕು ಎಂದು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ ಹೇಳಿದರು.

ಯುಗ ಪುರುಷ ಕಿನ್ನಿಗೋಳಿ ಆಶ್ರಯದಲ್ಲಿ ಕೇರಳ ರಾಜ್ಯ-ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ, ಕನ್ನಡ ಭವನ ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಸಹಭಾಗಿತ್ವದಲ್ಲಿ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಆಯೋಜಿಸಲಾದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಮಾತನಾಡಿ, ಸರ್ಕಾರ ಕನ್ನಡ ಶಾಲೆಗಳನ್ನು ಕಡೆಗಣಿಸಿದ್ದು, ಸರ್ಕಾರಿ ಶಾಲೆಗಳಿಗೆ ಶಿಕ್ಷಕರನ್ನು ನೀಡುತ್ತಿಲ್ಲ. ಪ್ರತಿವರ್ಷ ಸಾವಿರಾರು ಶಾಲೆಗಳು ಮುಚ್ಚುತ್ತಿದ್ದು ಬರೆಯುವವರು ಹೆಚ್ಚಾಗಿದ್ದರೂ ಓದುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಪುಸ್ತಕವನ್ನು ಕೊಂಡು ಓದುವ ಪ್ರವೃತ್ತಿ ಬೆಳೆಯಬೇಕೆಂದು ಹೇಳಿದರು.

ಹೊರನಾಡಿನಲ್ಲಿ ತುಳುವರು ಪುಸ್ತಕ ಬಿಡುಗಡೆ:

ಮುಂಬೈಯ ವಿಶ್ವನಾಥ ದೊಡ್ಮನೆ ಸಂಪಾದಕತ್ವದ ಹೊರನಾಡಿನಲ್ಲಿ ತುಳುವರು ಪುಸ್ತಕವನ್ನು ರಾಷ್ತ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಜಯಾನಂದ ಪೆರಾಜೆ ಬಿಡುಗಡೆಗೊಳಿಸಿದರು.

ಡಾ.ಸುಮತಿ ಪಿ. ಕಾರ್ಕಳ ಪುಸ್ತಕದ ಬಗ್ಗೆ ಮಾತನಾಡಿ, ಲೇಖಕರಾದ ಆಗುಂಬೆ ನಟರಾಜ ಸೇರಿದಂತೆ ೩೯ ಲೇಖಕರು ಬರೆದಿರುವ ತುಳುವರ ಸಂಸ್ಕೃತಿ, ಭಾಷಾ ಪ್ರೇಮ, ನಂಬಿಕೆಗಳು ಮೊದಲಾದ ಮೌಲ್ಯಯುತ ಲೇಖನಗಳು ಪುಸ್ತಕದಲ್ಲಿ ಅಡಕವಾಗಿವೆ ಎಂದರು.

ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿ ಪ್ರದಾನ:ಡಾ.ಹರಿಕೃಷ್ಣ ಪುನರೂರು, ಪ್ರದೀಪಕುಮಾರ ಕಲ್ಕೂರ, ಶ್ರೀಪತಿ ಭಟ್ ಮೂಡುಬಿದಿರೆ, ಯುಗಪುರುಷದ ಭುವನಾಭಿರಾಮ ಉಡುಪ ಅವರಿಗೆ ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನಿಸಲಾಯಿತು.

ದ.ಕ. ಜಿಲ್ಲಾಧ್ಯಕ್ಷ ಡಾ.ಕೊಳ್ಚಪ್ಪೆ ಗೋವಿಂದ ಭಟ್‌ ಅಧ್ಯಕ್ಷತೆ ವಹಿಸಿದ್ದರು. ಸತ್ಯವತಿ ಭಟ್ ಕಾರ್ಯಕ್ರಮ ಉದ್ಘಾಟಿಸಿದರು. ಬೆಂಗಳೂರು ಘಟಕದ ಅಧ್ಯಕ್ಷರಾಗಿ ಹಿರಿಯ ಚುಟುಕು ಕವಿ ಹಾ.ಮ.ಸತೀಶ ಅವರಿಗೆ ಧ್ವಜ ಪ್ರದಾನ ಮಾಡಲಾಯಿತು. ಕಥಾ ಬಿಂದು ಪ್ರಕಾಶನದ ಪ್ರದೀಪ ಕುಮಾರ್, ಪ್ರಾಂಶುಪಾಲ ರಾಜೇಶ್‌ ಚಂದ್ರ, ಕರ್ನಾಟಕ ಜಾನಪದ ಪರಿಷತ್‌ ಜಿಲ್ಲಾಧ್ಯಕ್ಷ ಪಮ್ಮಿ ಕೊಡಿಯಾಲಬೈಲ್ ಉಪಸ್ಥಿತರಿದ್ದರು.ಚುಟುಕು ಕವಿಗೋಷ್ಠಿ: ಹಿರಿಯ ಕವಯಿತ್ರಿ ಸತ್ಯವತಿ ಭಟ್ ಕೊಳ್ಚಪ್ಪು ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಿತು. ಚುಟುಕು ಸಾಹಿತ್ಯ ಸ್ಪರ್ಧೆಯಲ್ಲಿ ವಿಜೇತರಾದ ಗೀತಾ ನರಿಕೊಂಬು, ನಿರ್ಮಲಾ ಸುರತ್ಕಲ್, ಡಾ.ಸುಮತಿ ಪಿ., ಅಬ್ದುಲ್ ಸಮದ್ ಬಾವ ಅವರಿಗೆ ದ.ಕ. ಜಿಲ್ಲಾ ಚುಟುಕು ಕಾವ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಕರ್ನಾಟಕ ರಾಜ್ಯ ಸಂಚಾಲಕ ಜಯಾನಂದ ಪೆರಾಜೆ ಸ್ವಾಗತಿಸಿದರು. ರಾಜ್ಯ ಸಂಚಾಲಕಿ ಡಾ.ಶಾಂತಾ ಪುತ್ತೂರು ಪ್ರಸ್ತಾವನೆಗೈದರು. ವಸಂತಕೆರೆಮನೆ, ಅನಿತಾ ಶೆಣೈ ಉಪಸ್ಥಿತರಿದ್ದರು. ರೇಖಾ ಸುದೇಶರಾವ್, ಅಪೂರ್ವಕಾರಂತ್ ನಿರೂಪಿಸಿದರು. ಉಷಾ ಶಶಿಧರ್ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗುಬ್ಬಿ ಪಟ್ಟಣ ಪಂಚಾಯಿತಿ ಆದಾಯ 2.30 ಕೋಟಿ ರು.
ರೈಲ್ವೆ ಪ್ರವೇಶ ಪರೀಕ್ಷೆ: ಕನ್ನಡಕ್ಕೆ ಅವಕಾಶ ನೀಡಿ