ಯುವಕರು ಧಾರ್ಮಿಕ ಆಚರಣೆಗಳನ್ನು ಮುಂದುವರಿಸಿ

KannadaprabhaNewsNetwork |  
Published : Jul 22, 2025, 12:15 AM IST
ಫೋಟೋ: 20 ಹೆಚ್‌ಎಸ್‌ಕೆ 1ಹೊಸಕೋಟೆ ನಗರದ ಪಟಾಲಮ್ಮ ದೇವಾಲಯದಲ್ಲಿ ಆರನೇ ವರ್ಷದ ವಾರ್ಷಿಕೋತ್ಸವ ಪೂಜಾ ಕಾರ್ಯಕ್ರಮದಲ್ಲಿ ಪಟಾಲಮ್ಮ ದೇವಿ ಅಸಂಘಟಿತ ಕಾರ್ಮಿಕರ ಸಂಘದ ಅಧ್ಯಕ್ಷ ರಾಮಾಂಜಿನಿ ಹಾಗೂ ಪಧಾಧಿಕಾರಿಗಳು ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. | Kannada Prabha

ಸಾರಾಂಶ

ಹೊಸಕೋಟೆ: ಪೂರ್ವಿಕರು ಆಚರಿಸಿಕೊಂಡು ಬಂದಿರುವ ಧಾರ್ಮಿಕ ಆಚರಣೆಗಳು ಮುಂದುವರೆಸಿಕೊಂಡು ಹೋಗಬೇಕಾದ ಜವಾಬ್ದಾರಿ ಯುವ ಸಮುದಾಯದ ಮೇಲಿದೆ ಎಂದು ಪಟಾಲಮ್ಮ ದೇವಿ ಅಸಂಘಟಿತ ಕಾರ್ಮಿಕರ ಸಂಘದ ಅಧ್ಯಕ್ಷ ರಾಮಾಂಜಿನಿ ತಿಳಿಸಿದರು.

ಹೊಸಕೋಟೆ: ಪೂರ್ವಿಕರು ಆಚರಿಸಿಕೊಂಡು ಬಂದಿರುವ ಧಾರ್ಮಿಕ ಆಚರಣೆಗಳು ಮುಂದುವರೆಸಿಕೊಂಡು ಹೋಗಬೇಕಾದ ಜವಾಬ್ದಾರಿ ಯುವ ಸಮುದಾಯದ ಮೇಲಿದೆ ಎಂದು ಪಟಾಲಮ್ಮ ದೇವಿ ಅಸಂಘಟಿತ ಕಾರ್ಮಿಕರ ಸಂಘದ ಅಧ್ಯಕ್ಷ ರಾಮಾಂಜಿನಿ ತಿಳಿಸಿದರು. ನಗರದ ಎಂವಿ ಬಡಾವಣೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಪಟಾಲಮ್ಮ ದೇವಿ ದೇವಾಲಯದ 6ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಸಕಾಲಕ್ಕೆ ಮಳೆ ಬೆಳೆ ಆಗಲಿ ಎಂದು ದೇವಿಗೆ ಬೆಲ್ಲದಚ್ಚಿನ ದೀಪಾರತಿ ಮಾಡಿ ಪೂಜೆ ಸಲ್ಲಿಸಿ ದೇವಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದೇವೆ ಎಂದರು. ದೇವಾಲಯದ ಪ್ರಧಾನ ಅರ್ಚಕ ನಂದೀಶ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ದೇವರಾಜ್, ಸದಸ್ಯರಾದ ಶೋಭಾ ಶಿವಾನಂದ್, ಟೌನ್ ಬಿಜೆಪಿ ಅದ್ಯಕ್ಷ ಬಾಲಚಂದ್ರ, ಅಸಂಘಟಿತ ಪಿಒಪಿ ಕಾರ್ಮಿಕರ ಸಂಘದ ಅಧ್ಯಕ್ಷ ಜೆ.ಎಂ.ಹಸೇನ್, ಪಟಾಲಮ್ಮ ದೇವಿ ಅಸಂಘಟಿತ ಕಾರ್ಮಿಕರ ಸಂಘದ ಉಪಾಧ್ಯಕ್ಷ ಮುನಿಯಪ್ಪ, ಕಾರ್ಯದರ್ಶಿ ಮುತ್ತು, ಮೇಲುಕೋಟೆ ಕೃಷ್ಣ, ಸದಸ್ಯರಾದ ಚಂದ್ರು, ನಾರಾಯಣಸ್ವಾಮಿ, ಪೈಂಟರ್ ನಾರಾಯಣಸ್ವಾಮಿ, ಪ್ಲಂಬರ್ ರಘು, ಸುರೇಶ್, ಬಾಕ್ಸರ್ ರವಿ ಇತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಂದೆಗೆ ಕಿರುಕುಳ ನೀಡದಂತೆ ಚೈತ್ರಾ ಕುಂದಾಪುರಗೆ ಆದೇಶ
ಕಸಕ್ಕೆ ಬೆಂಕಿ: ಹೊಗೆಯಿಂದ ಮನೆಯಲ್ಲಿ ಉಸಿರಾಡಲು ಆಗುತ್ತಿಲ್ಲ:ನಟಿ ಐಂದ್ರಿತಾ