ನಾಡಬಾಂಬ್‌ ಸಿಡಿದು ಯುವಕ ಸಾವು

KannadaprabhaNewsNetwork |  
Published : Aug 31, 2024, 01:39 AM IST
ಫೋಟೋ  30 ಹೆಚ್‌ಎಸ್‌ಕೆ 3 ಮತ್ತು 43 ಮೃತ ಪವನ್ ಭಾವಚಿತ್ರ | Kannada Prabha

ಸಾರಾಂಶ

ನಾಡಬಾಂಬ್‌ ಸಿಡಿದು ಯುವಕ ಸಾವು

ಕನ್ನಡಪ್ರಭ ವಾರ್ತೆ ಹೊಸಕೋಟೆ

ನಾಡ ಬಾಂಬ್ ತಯಾರು ಮಾಡುವಾಗ ಆಕಸ್ಮಿಕವಾಗಿ ಅದು ಸಿಡಿದು ಯುವಕನೊಬ್ಬ ಮೃತಪಟ್ಟು ಓರ್ವ ವ್ಯಕ್ತಿಗೆ ಗಾಯಗಳಾಗಿರುವ ಘಟನೆ ತಾಲೂಕಿನ ಜಡಿಗೇನಹಳ್ಳಿ ಹೋಬಳಿಯ ದೊಡ್ಡನಲ್ಲಾಳ ಗ್ರಾಮದಲ್ಲಿ ನಡೆದಿದೆ. ದೊಡ್ಡನಲ್ಲಾಳ ಗ್ರಾಮದ ಪವನ್ (20) ಮೃತ ಯುವಕ. ಪವನ್ ತಂದೆ ನಾಗೇಶ್ (45) ಕಾಲಿಗೆ ತೀವ್ರ ಪೆಟ್ಟಾಗಿದ್ದು ಹೊಸಕೋಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ಪವನ್ ಕಾಡು ಹಂದಿ ಬೇಟೆಯಾಡಿ ಮಾರಾಟ ಮಾಡುತ್ತಿದ್ದ ಎನ್ನಲಾಗಿದ್ದು ಮನೆಯಲ್ಲೇ ನಾಡ ಬಾಂಬ್ ತಯಾರಿಸುತ್ತಿದ್ದ. ಅದರಂತೆ ಶುಕ್ರವಾರ ಮಧ್ಯಾಹ್ನ ಹಂದಿಗಳ ಬೇಟೆಗೆಂದು ಮನೆಯಲ್ಲಿಯೇ ನಾಡಬಾಂಬ್ ತಯಾರು ಮಾಡುತ್ತಿದ್ದ ವೇಳೆ ಬಾಂಬ್ ಸ್ಫೋಟಗೊಂಡು ಸ್ಥಳದಲ್ಲೇ ಪವನ್ ಮೃತಪಟ್ಟಿದ್ದು, ಆತನ ತಂದೆ ನಾಗೇಶ್ ಕಾಲಿಗೆ ತೀವ್ರ ಪೆಟ್ಟಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದಾಗ ಮನೆಯಲ್ಲಿ ಮತ್ತಷ್ಟು ಜೀವಂತ ನಾಡ ಬಾಂಬ್ ಗಳು ಪತ್ತೆಯಾಗಿವೆ. ಸ್ಥಳಕ್ಕೆ ಎಫ್ ಎಸ್ ಎಲ್ ತಂಡ ಹಾಗೂ ಬಾಂಬ್ ನಿಷ್ಕ್ರಿಯದಳ ಆಗಮಿಸಿ ಪರಿಶೀಲನೆ ನಡೆಸಿದರು. ಘಟನಾ ಸ್ಥಳಕ್ಕೆ ಬೆಂಗಳುರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಘಟನೆಯ ಮಾಹಿತಿ ಸಂಗ್ರಹಿಸಿ ಮುಂದಿನ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸ್ತೆ ಅಪಘಾತ ಸೈಕಲ್‌ ಸವಾರ ಸಾವು
ವಿದ್ಯುತ್‌ ತೊಂದರೆ ಸರಿಪಡಿಸದಿದ್ದರೇ ಅಹೋರಾತ್ರಿ ಧರಣಿ