ಹೆಚ್ಚಿನ ಲಾಭದಾಸೆಗೆ 71 ಲಕ್ಷ ರು. ಕಳಕೊಂಡ ಅಕೌಂಟೆಂಟ್‌ !

KannadaprabhaNewsNetwork |  
Published : Jan 23, 2026, 02:45 AM IST
ದೊಡ್ಡಬಳ್ಳಾಪುರದ ನಾಟ್ಯ ಮಯೂರಿ ಕಲಾ ಕೇಂದ್ರ ಟ್ರಸ್ಟ್‌ನಿಂದ ನಡೆದ ಕರುನಾಡ ಸಾಂಸ್ಕೃತಿ ಉತ್ಸವಕ್ಕೆ ಗಣ್ಯರು ಚಾಲನೆ ನೀಡಿದರು.  | Kannada Prabha

ಸಾರಾಂಶ

ಷೇರ್ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಅಧಿಕ ಲಾಭಾಂಶ ನೀಡುವುದಾಗಿ ಆಮಿಷವೊಡ್ಡಿ, ಅಕೌಂಟೆಂಟ್ ಒಬ್ಬರಿಗೆ ಬರೋಬ್ಬರಿ 71.74 ರು. ಲಕ್ಷ ವಂಚಿಸಿರುವ

ಉಡುಪಿ: ಷೇರ್ ಮಾರ್ಕೆಟ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಅಧಿಕ ಲಾಭಾಂಶ ನೀಡುವುದಾಗಿ ಆಮಿಷವೊಡ್ಡಿ, ಅಕೌಂಟೆಂಟ್ ಒಬ್ಬರಿಗೆ ಬರೋಬ್ಬರಿ 71.74 ರು. ಲಕ್ಷ ವಂಚಿಸಿರುವ ಬಗ್ಗೆ ಉಡುಪಿ ಸೈಬರ್ ಅಪರಾಧ ಠಾಣೆಯಲ್ಲಿ ದಾಖಲಾಗಿದೆ. ಸಿಂಗಾಪುರದಲ್ಲಿ ಅಕೌಂಟೆಂಟ್ ಆಗಿರುವ ಉಡುಪಿ ಮೂಲದ ಮಹೇಶ್ ಶೆಟ್ಟಿಗಾರ್‌ಗೆ ಜ.3ರಂದು ಒಮ್ಮಿಫಿಕ್ಸ್ ಎಂಬ ಹೆಸರಿನಿಂದ ವಾಟ್ಸಪ್ ಮೂಲಕ ಸಂದೇಶ ಬಂದಿದ್ದು ಷೇರ್ ಮಾರ್ಕೆಟ್ ಹೂಡಿಕೆಯಲ್ಲಿ ಹೆಚ್ಚಿನ ಲಾಭಾಂಶ ಕೊಡಿಸುವುದಾಗಿ ನಂಬಿಸಲಾಗಿದೆ. ಅದರಂತೆ ಮಹೇಶ್ ಅವರು ಜ.4ರಿಂದ 18ರವರೆಗೆ ವಿವಿಧ ಬ್ಯಾಂಕ್ ಖಾತೆಗಳಿಗೆ ಬ್ಯಾಂಕ್ ಆಫ್ ಇಂಡಿಯಾದ ಉಡುಪಿ ಶಾಖೆಯ ಖಾತೆ ಮೂಲಕ ಒಟ್ಟು 71.74 ಲಕ್ಷ ರು. ಹಣ ವರ್ಗಾಯಿಸಿದ್ದಾರೆ.

ಆದರೆ ಇದುವರೆಗೆ ಹೂಡಿಕೆ ಮಾಡಿದ ಹಣವಾಗಲೀ, ಲಾಭಾಂಶವಾಗಲೀ ವಾಪಸ್ ನೀಡದೇ ವಂಚನೆ ಮಾಡಲಾಗಿದೆ ಎಂದು ಮಹೇಶ್ ಅವರ ಪತ್ನಿ ಯಶೋದಾ ಅವರು ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಉಡುಪಿ ಸೈಬ‌ರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗುಬ್ಬಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ಡಿಸಿ ದಿಢೀರ್ ಭೇಟಿ
ಉತ್ತರಾಯಣ ಕಲಾ ಮತ್ತು ಸಾಂಸ್ಕೃತಿಕ ಹಬ್ಬಕ್ಕೆ ಚಾಲನೆ