ಕನ್ನಡಪ್ರಭ ವಾರ್ತೆ ಶಹಾಪುರ
ನಗರದ ಮನಗುಳಿ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ತಾಲೂಕು ವಕೀಲರ ಸಂಘ, ಪೊಲೀಸ್ ಇಲಾಖೆ ಹಾಗೂ ಮನಗುಳಿ ಕಾಲೇಜು ಸಹಯೋಗದಲ್ಲಿ ರಾಷ್ಟ್ರೀಯ ಯುವದಿನ ಅಂಗವಾಗಿ ನಡೆದ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರಾಷ್ಟ್ರದ ಸಂವಿಧಾನದ ಕಾನೂನುಗಳು ಹಾಗೂ ಮೂಲಭೂತ ಕರ್ತವ್ಯಗಳ ಬಗ್ಗೆ ಅರಿವು ಇದ್ದಾಗ ಉತ್ತಮ ಜೀವನ ಕಟ್ಟಿಕೊಳ್ಳಬಹುದು. ದೌರ್ಜನ್ಯ, ದಬ್ಬಾಳಿಕೆಯಿಂದ ದೂರವಿರಬಹುದು. ಬಡಜನರಿಗೆ, ದುರ್ಬಲರಿಗೆ, ವಂಚಿತರಾದವರಿಗೆ ನ್ಯಾಯ ಕಲ್ಪಿಸಲು ಉಚಿತ ಕಾನೂನು ಅರಿವು ನೆರವು ಮೂಡಿಸಲಾಗುತ್ತದೆ. ಆ ನಿಟ್ಟಿನಲ್ಲಿ ಅರ್ಹರು ಅದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಹಿರಿಯ ನ್ಯಾ.ಭಾಸ್ಕರರಾವ್ ಮುಡಬೂಳ ಮಾತನಾಡಿ, ವಿದ್ಯಾರ್ಥಿಗಳು ವಿವೇಕಾನಂದರ ಆದರ್ಶ ಮೈಗೂಡಿಸಿಕೊಂಡು ದೇಶದ ಪ್ರಗತಿಗೆ ಶ್ರಮಿಸಬೇಕು ಎಂದು ಹೇಳಿದರು.
ಎಸ್.ಎಸ್. ಮನಗುಳಿ ಟ್ರಸ್ಟ್ ಅಧ್ಯಕ್ಷ ಶಿವಪ್ಪ ಮನಗುಳಿ, ತಾಲೂಕು ವಕೀಲರ ಸಂಘದ ಉಪಾಧ್ಯಕ್ಷ ಶರಣು ಪ್ಯಾಟಿ, ಪಿಎಸ್ಐ ಅಯುರ್ ಖಾನ್, ಕಾಲೇಜು ಪ್ರಾಂಶುಪಾಲ ಪ್ರಭುರಾಜ್ ದೇಶಮುಖ್, ಪ್ಯಾನಲ್ ವಕೀಲ ಮಲ್ಲಪ್ಪ ಕುರಿ ಸೇರಿದಂತೆ ಇತರರಿದ್ದರು.