ನಂತೂರಿನ ಶ್ರೀ ಭಾರತೀ ಕಾಲೇಜಿನಲ್ಲಿ ತೇಜಸ್ವಿನಿ ಆಸ್ಪತ್ರೆಯ ಸಹಕಾರದಲ್ಲಿ ಚೂಂತಾರು ಸರೋಜಿನಿ ಭಟ್ ಪ್ರತಿಷ್ಟಾನ ಮಂಗಳೂರು, ಹವ್ಯಕ ಸಭಾ ಮಂಗಳೂರು, ಶ್ರೀ ಭಾರತೀ ಕಾಲೇಜು ನಂತೂರು ಇದರ ಸಹಯೋಗದಲ್ಲಿ ರಕ್ತದಾನ ಶಿಬಿರ ನಡೆಯಿತು.
ಕನ್ನಡಪ್ರಭ ವಾರ್ತೆ ಮಂಗಳೂರು
ರಕ್ತದಾನದಷ್ಟು ಪವಿತ್ರವಾದ ಮತ್ತು ಶ್ರೇಷ್ಠವಾದ ದಾನ ಇನ್ನೊಂದಿಲ್ಲ. ಒಬ್ಬ ವ್ಯಕ್ತಿ ಮಾಡುವ ರಕ್ತದಾನದಿಂದ 4 ಜನರ ಜೀವ ಉಳಿಸುವ ಶಕ್ತಿ ಇದೆ. ಕೃತಕವಾಗಿ ರಕ್ತ ಉತ್ಪಾದಿಸಲು ಸಾಧ್ಯವಿಲ್ಲ. ರೋಗಿಯ ಜೀವ ಉಳಿಸಲು ಬೇಕಾದ ರಕ್ತವನ್ನು ದಾನಿಗಳಿಂದಲೇ ಪಡೆಯಬೇಕಾದ ಅನಿವಾರ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹೆಚ್ಚು ಹೆಚ್ಚು ಯುವ ಜನರು ರಕ್ತದಾನಕ್ಕೆ ಮುಂದಾಗಬೇಕು. ರಕ್ತದಾನ ಮಾಡುವುದರಿಂದ ತಮ್ಮ ಆರೋಗ್ಯ ವೃದ್ಧಿಸುತ್ತದೆ ಮತ್ತು ಇನ್ನೊಬ್ಬರ ಜೀವ ಉಳಿಸಿದ ಸಾರ್ಥಕತೆ ದೊರಕುತ್ತದೆ ಎಂದು ಮಂಗಳೂರು ಹವ್ಯಕ ಸಭಾ ಅಧ್ಯಕ್ಷೆ ಗೀತಾ ದೇವಿ ಚೂಂತಾರು ಹೇಳಿದರು.
ನಂತೂರಿನ ಶ್ರೀ ಭಾರತೀ ಕಾಲೇಜಿನಲ್ಲಿ ಭಾನುವಾರ ತೇಜಸ್ವಿನಿ ಆಸ್ಪತ್ರೆಯ ಸಹಕಾರದಲ್ಲಿ ಚೂಂತಾರು ಸರೋಜಿನಿ ಭಟ್ ಪ್ರತಿಷ್ಟಾನ ಮಂಗಳೂರು, ಹವ್ಯಕ ಸಭಾ ಮಂಗಳೂರು, ಶ್ರೀ ಭಾರತೀ ಕಾಲೇಜು ನಂತೂರು ಇದರ ಸಹಯೋಗದಲ್ಲಿ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಶ್ರೀ ಭಾರತೀ ಕಾಲೇಜು ಸಂಚಾಲಕ ಶ್ರೀಕೃಷ್ಣ ನೀರಮೂಲೆ, ಚೂಂತಾರು ಪ್ರತಿಷ್ಟಾನದ ಡಾ.ಮುರಲೀ ಮೋಹನ್ ಚೂಂತಾರು, ಶ್ರೀ ವೇದಮಾಯು ಆಯುರ್ವೇದ ಆಸ್ಪತ್ರೆಯ ಡಾ.ಕೇಶವರಾಜ್, ತೇಜಸ್ವಿನಿ ಆಸ್ಪತ್ರೆಯ ಡಾ. ರಶ್ಮಿ, ಪೋಲಿಸ್ ಇಲಾಖೆಯ ಬಾಲಕೃಷ್ಣ ಭಟ್ ಮತ್ತಿತರರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.