ಯುವಕರು ಮತದಾನದ ಮಹತ್ವ ತಿಳಿಯಿರಿ: ಚಿದಾನಂದ್.ಎಂ.ಗೌಡ

KannadaprabhaNewsNetwork |  
Published : Jan 29, 2024, 01:31 AM IST
27ಶಿರಾ3:ಶಿರಾ ನಗರದಲ್ಲಿರುವ ಸಿರಿಗಂಧ ಪ್ಯಾಲೇಸ್ ನಲ್ಲಿ ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ನಮೋ ನವ-ಮತದಾನ ಅಭಿಯಾನವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹಾಗೂ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ ನಡ್ದ ಅವರು ಹಾಗೂ ಯುವ ಮೋರ್ಚ ರಾಷ್ಟ್ರೀಯ ಅಧ್ಯಕ್ಷರಾದ ತೇಜಸ್ವಿ ಸೂರ್ಯ ಅವರ ವರ್ಚುವಲ್ ಸಭೆಯಲ್ಲಿ ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಅವರು ಭಾಗವಹಿಸಿ ವೀಕ್ಷಣೆ ಮಾಡಿ ಮಾತನಾಡಿದರು. | Kannada Prabha

ಸಾರಾಂಶ

ಶಿರಾದಲ್ಲಿ ರಾಷ್ಟ್ರೀಯ ಮತದಾರರ ದಿನ ಆಚರಣೆಯಲ್ಲಿ ವಿಧಾನ ಪರಿಷತ್‌ ಸದಸ್ಯ ಚಿದಾನಂದ ಎಂ ಗೌಡ ಭಾಗವಹಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಶಿರಾ

ದೇಶ ಪ್ರಗತಿಪಥದಲ್ಲಿ ಸಾಗಬೇಕಾದರೆ ಯುವಕರ ಪಾತ್ರ ಬಹಳ ಮುಖ್ಯವಾಗಿದೆ. ಪ್ರಸ್ತುತ ದಿನಗಳಲ್ಲಿ ಯುವಕರು ಮತದಾನದ ಪ್ರಾಮುಖ್ಯತೆಯನ್ನು ತಿಳಿದುಕೊಳ್ಳಬೇಕು. ಆಗ ಮಾತ್ರ ಉತ್ತಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಲು ಸಾಧ್ಯವಾಗುತ್ತದೆ ಎಂದು ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು.

ನಗರದಲ್ಲಿರುವ ಸಿರಿಗಂಧ ಪ್ಯಾಲೇಸ್‌ನಲ್ಲಿ ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ನಮೋ ನವ-ಮತದಾನ ಅಭಿಯಾನವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ದ ಅವರು ಹಾಗೂ ಯುವ ಮೋರ್ಚ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರ ವರ್ಚುವಲ್ ಸಭೆಯ ಭಾಗವಹಿಸಿ ವೀಕ್ಷಣೆ ಮಾಡಿ ಮಾತನಾಡಿದರು.

ದೇಶದ ಅಭಿವೃದ್ಧಿ ಇಂದಿನ ಯುವ ಪೀಳಿಗೆ ಮೇಲಿದೆ ಆದುದರಿಂದ ಇಂದಿನ ಸಭೆಯಲ್ಲಿ ನಿಮಗೆಲ್ಲರಿಗೂ ಮತದಾನದ ಪ್ರಾಮುಖ್ಯತೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹಾಜರಿದ್ದ ನೂರಾರು ಯುವಕ-ಯುವತಿಯರಿಗೆ ಕಾರ್ಯಕ್ರಮದ ಮಹತ್ವದ ಕುರಿತು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ತಾಪಂ ಸದಸ್ಯರಾದ ಹೊನ್ನಗೊಂಡನಹಳ್ಳಿ ಚಿಕ್ಕಣ್ಣ, ಮುಖಂಡರಾದ ಸಂತೆಪೇಟೆ ನಟರಾಜ್, ಪ್ರಧಾನ ಕಾರ್ಯದರ್ಶಿಗಳಾದ ಚಿಕ್ಕನಕೋಟೆ ಕರಿಯಣ್ಣ, ಹಿರಿಯ ಮುಖಂಡರಾದ ತಾರಾನಾಥ್, ಗ್ರಾಪಂ ಸದಸ್ಯರಾದ ಎಂ.ಶಿವಲಿಂಗಯ್ಯ, ಯುವ ಮುಖಂಡರಾದ ಭಾಸ್ಕರ್, ಬರಗೂರು ಯುವರಾಜ್, ಜೈರಾಮ್, ಉದ್ದಪ್ಪ, ಲಕ್ಕೇಗೌಡ ಸೇರಿದಂತೆ ಹಲವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!