ಕನ್ನಡಪ್ರಭ ವಾರ್ತೆ ಶಿಕಾರಿಪುರ
ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಡಾ.ಸರ್ವಪಲ್ಲಿ ರಾಧಾಕೃಷ್ಣ ಸಭಾಂಗಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸ್ವಾತಂತ್ರೋತ್ಸವದ ಪ್ರಯುಕ್ತ ಸ್ವಾತಂತ್ರ್ಯ ಹೋರಾಟಕ್ಕೆ ಶಿಕಾರಿಪುರ ತಾಲೂಕು ಹಾಗೂ ಶಿವಮೊಗ್ಗ ಜಿಲ್ಲೆಯ ಕೊಡುಗೆ ಎಂಬ ವಿಷಯದ ಬಗ್ಗೆ ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ರಸಪ್ರಶ್ನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸುಲಭವಾಗಿ ದೊರೆತಿಲ್ಲ. ಸ್ವಾತಂತ್ರ್ಯಕ್ಕಾಗಿ ಹಲವು ಹೋರಾಟಗಾರರು ಜೀವ ತ್ಯಾಗ ಮಾಡಿದ್ದಾರೆ. ರಕ್ತಸಿಕ್ತ ಹೋರಾಟದ ಫಲ ಸ್ವಾತಂತ್ರ್ಯ ದೊರಕಿದೆ. ಸ್ವಾತಂತ್ರ್ಯಕ್ಕಾಗಿ ಜೀವ ತ್ಯಾಗ ಮಾಡಿದ ಹೋರಾಟಗಾರರನ್ನು ನಿತ್ಯ ಸ್ಮರಿಸಬೇಕು. ಈ ಸ್ವಾತಂತ್ರ್ಯವನ್ನು ಯುವಪೀಳಿಗೆ ದೇಶದ ಅಭಿವೃದ್ಧಿಗಾಗಿ ಬಳಸಿಕೊಳ್ಳಬೇಕು. ದೇಶಾಭಿಮಾನ ಹೊಂದುವ ಮೂಲಕ ಕೊಡುಗೆ ನೀಡಬೇಕು. ಸೋಲು ಗೆಲುವು ಲೆಕ್ಕಿಸದೆ ಸ್ಪರ್ಧಾತ್ಮಕ ಮನೋಭಾವನೆಯಿಂದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಸಲಹೆ ನೀಡಿದರು.ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಘಟಕ ಅಧ್ಯಕ್ಷ ಎಚ್.ಡಿ.ಮಧುಕೇಶ್ವರ್ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣ ತ್ಯಾಗ ಮಾಡಿದ ಮಹಾನ್ ನಾಯಕರ ಆದರ್ಶ ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿ ಜೀವನ ಹಾಳು ಮಾಡಿಕೊಳ್ಳದೇ ಉತ್ತಮ ಶಿಕ್ಷಣ ಪಡೆದು ಪೋಷಕರು ಹಾಗೂ ಶಿಕ್ಷಕರಿಗೆ ಗೌರವ ತರಬೇಕು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಲವು ಕಾರ್ಯಕ್ರಮ ಆಯೋಜಿಸುವ ಮೂಲಕ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.
ರಸಪ್ರಶ್ನೆ ಕಾರ್ಯಕ್ರಮದಲ್ಲಿ ಪ್ರಥಮ ಬಹುಮಾನವನ್ನು ಅಕ್ಷರ ರೆಸಿಡೆನ್ಸಿಯಲ್ ಸ್ಕೂಲ್, ದ್ವಿತೀಯ ಬಹುಮಾನ ಪುಷ್ಪಾ ವಿದ್ಯಾಸಂಸ್ಥೆ, ತೃತೀಯ ಬಹುಮಾನ ಬನಸಿರಿ ಲಯನ್ಸ್ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ಪಡೆದರು.