ಕನ್ನಡಪ್ರಭ ವಾರ್ತೆ ತುರುವೇಕೆರೆ
ತಾವು ಮುಂಬರುವ ದಿನಗಳಲ್ಲಿ ಯುವಕರಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಶಿಬಿರಗಳನ್ನು ಆಯೋಜಿಸುವೆ. ನಮ್ಮ ತಾಲೂಕಿನಿಂದಲೂ ಐಎಎಸ್ ಮತ್ತು ಕೆಎಎಸ್ ಅಧಿಕಾರಿಗಳು ಆಗಬೇಕೆಂಬ ಕನಸಿದೆ. ಅದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಅದರಲ್ಲೂ ಬಡ ವಿದ್ಯಾರ್ಥಿಗಳಿಗೆ ತಮ್ಮ ಕೈಲಾದ ಸಹಾಯ ಮಾಡುವ ಭರವಸೆಯನ್ನು ದೊಡ್ಡಾಘಟ್ಟ ಚಂದ್ರೇಶ್ ನೀಡಿದರು. ಮಕ್ಕಳ ತಜ್ಞ ಡಾ.ನಂಜಪ್ಪ ಮಾತನಾಡಿ ತಾಲೂಕಿನಲ್ಲಿ ಯುವ ಜನಪ್ರತಿನಿಧಿಯ ಅಗತ್ಯವಿದೆ. ಯುವಕರ ಆಶೋತ್ತರಗಳಿಗೆ ಸ್ಪಂದಿಸುವ ನಾಯಕನ ಅವಶ್ಯಕತೆ ಇದೆ. ಈಗ ದೊಡ್ಡಾಘಟ್ಟ ಚಂದ್ರೇಶ್ ಯುವಕರ ಆಶಾಕಿರಣವಾಗಿದ್ದಾರೆ. ಅವರನ್ನು ಬೆಂಬಲಿಸುವ ಮೂಲಕ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಕೈ ಜೋಡಿಸೋಣ ಎಂದರು. ಜೆಡಿಎಸ್ ನ ವಿದ್ಯಾರ್ಥಿ ಘಟಕದ ಅಧ್ಯಕ್ಷ ಋತ್ವಿಕ್ ಮಾತನಾಡಿ ಯುವಕರ ಆಶಾಕಿರಣವಾಗಿರುವ ದೊಡ್ಡಾಘಟ್ಟ ಚಂದ್ರೇಶ್ ಸಾವಿರಾರು ಸೇವಾ ಕಾರ್ಯಗಳನ್ನು ನಿಸ್ವಾರ್ಥದಿಂದ ಮಾಡಿದ್ದಾರೆ. ಅವರು ಜನ ಸೇವೆಯೇ ಜನಾರ್ಧನನ ಸೇವೆ ಎಂದು ತಿಳಿದಿದ್ದಾರೆ. ಅವರ ಸೇವೆ ಮತ್ತು ಮಾರ್ಗದರ್ಶನದಲ್ಲಿ ಯುವಕರೆಲ್ಲಾ ಹೆಜ್ಜೆ ಹಾಕೋಣ ಎಂದು ಹೇಳಿದರು.
ಈ ಸಂದರ್ಭದಲ್ಲಿ ನಿವೃತ್ತ ಪ್ರಾಂಶುಪಾಲ ನಾಗರಾಜಯ್ಯ ಕಣಕೂರು ಮನೋಜ್, ಡಿ.ಹೊಸಳ್ಳಿ ಚಂದನ್, ದೊಡ್ಡ ಮಾರ್ಗೋನ ಹಳ್ಳಿ ಪ್ರಕಾಶ್ ಸೇರಿದಂತೆ ಇತರರಿದ್ದರು.