ಕನ್ನಡಪ್ರಭ ವಾರ್ತೆ ಮಂಗಳೂರು
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ತಾಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ, ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ಯುವ ಕಾಂಗ್ರೆಸ್ ಸದಸ್ಯರು ಸಕ್ರಿಯವಾಗಿ ಕೆಲಸ ಮಾಡಲಿದ್ದಾರೆ. ಈ ನಿಟ್ಟಿನಲ್ಲಿ ಯುವ ಕಾಂಗ್ರೆಸ್ನ ಬಲಿಷ್ಠ ತಂಡಗಳನ್ನು ರಚಿಸಲಾಗುವುದು ಎಂದರು.
ಬೂತ್ ಮಟ್ಟದಲ್ಲಿ ಯುವಕರನ್ನು ಒಂದುಗೂಡಿಸುವುದು, ಪಕ್ಷದ ಚಟುವಟಿಕೆಗಳನ್ನು ವೃದ್ಧಿಸುವುದು ಮತ್ತು ಸಮಾಜದಲ್ಲಿ ಸಾಮರಸ್ಯವನ್ನು ಬೆಳೆಸುವುದು ಬೂತ್ ಮಟ್ಟದ ತಂಡಗಳ ಜವಾಬ್ದಾರಿ. ಮುಂಬರುವ ಎಲ್ಲ ಚುನಾವಣೆಗಳನ್ನು ಎದುರಿಸಲು ಈ ಯುವಕರು ಕೈಜೋಡಿಸಲಿದ್ದಾರೆ ಎಂದು ಅವರು ಹೇಳಿದರು.ಮುಖಂಡರಾದ ರೂಪೇಶ್ ರೈ, ಕಿರಣ್ ಬುಡ್ಲೆಗುತ್ತು, ದೀಕ್ಸಿತ್ ಅತ್ತಾವರ, ಆಸೀಫ್, ಪವನ್ ಸಾಲಿಯಾನ್ ಇದ್ದರು.