
-ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಯವಜನತೆಗೆ ಸಲಹೆ । ಬೃಹತ್ ಉದ್ಯೋಗ ಮೇಳಕ್ಕೆ ಸಚಿವ ಚಾಲನೆ
ಕನ್ನಡಪ್ರಭ ವಾರ್ತೆ ಕಲಬುರಗಿ
ದೇಶದಲ್ಲಿ ಉದ್ಯೋಗಾವಕಾಶಗಳಿದ್ದರೂ ಸೂಕ್ತ ಕೌಶಲ್ಯದ ಕೊರತೆಯಿಂದ ಯುವಜನರು ಹಿಂದುಳಿಯುತ್ತಿದ್ದಾರೆ. ಆದ್ದರಿಂದ ಲಭ್ಯವಿರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸ್ವಂತ ಕಾಲ ಮೇಲೆ ನಿಲ್ಲಲು ಯುವಕರು ಮುಂದಾಗಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹೇಳಿದರು.ಪಿ.ಡಿ.ಎ ಕಾಲೇಜಿನ ಅವರಣದಲ್ಲಿ ಕೌಶಲ್ಯಾಭಿವೃದ್ದಿ ಇಲಾಖೆ ಹಾಗೂ ಎಕ್ಸಲರೇಟರ್ ಸಂಸ್ಥೆಯ ಸಹಯೋಗದೊಂದಿಗೆ ಆಯೋಜಿಸಿದ ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ದೇಶಕ್ಕೆ ಹೋಲಿಸಿದಲ್ಲೆ ಕರ್ನಾಟಕದಲ್ಲಿ ಅಷ್ಟೊಂದು ಸಮಸ್ಯೆಯಿಲ್ಲ. ಹಾಗಂತ ನಿರುದ್ಯೋಗಿಗಳು ಇಲ್ಲವಂತಲ್ಲ, ಬದಲಾಗಿ ಉದ್ಯೋಗ ಪಡೆಯುವ ಕೌಶಲ್ಯದ ಕೊರತೆ ಇದೆ. ಅದನ್ನು ನಮ್ಮ ಸರ್ಕಾರ ಸ್ಕಿಲ್ ಕನೆಕ್ಟ್ ಮೂಲಕ ಉದದ್ಯೋಗಾಧಾರಿತ ಕೌಶಲ್ಯ ನೀಡುತ್ತಿದ್ದೆ ಎಂದರು.
ರಾಜ್ಯದಲ್ಲಿ 4 ಲಕ್ಷಕ್ಕೂ ಹೆಚ್ಚು ಡಿಗ್ರಿ ಹಾಗೂ ಡಿಪ್ಲೊಮಾ ಪದವೀಧರರು ''''''''ಯುವನಿಧಿ'''''''' ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಅಲ್ಲದೆ ಈ ಫಲಾನುಭವಿಗಳಿಗೆ ಉದ್ಯೋಗ ಮೇಳದಲ್ಕಿ ಭಾಗಿಯಾಗಲು, ಕೌಶಲ್ಯ ತರಬೇತಿ ಪಡೆಯಲು ತಿಳಿಸಿದರು ಪಡೆಯಲು ಮುಂದೆ ಬಾರದಿರುವುದು ಆಶ್ಚರ್ಯಕರವಾಗಿದೆ. ಉದ್ಯೋಗ ಒದಗಿಸಲು ಕಂಪನಿಗಲು ಮುಂದೆ ಬರುತ್ತಿವೆ, ಇಂತಹ ಸದಾವಕಾಶವವನ್ನು ಯುವ ಸಮೂಹ ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.
ಈ ಉದ್ಯೋಗ ಮೇಳದಲ್ಲಿ ಇನ್ಫೋಸಿಸ್, ಹೆಚ್ಸಿಎಲ್, ಎಕ್ಸ್ಚೇಂಜ್ ಟೆಕ್ನಾಲಜೀಸ್, ಮರ್ಸಿಡಿಸ್ ಬೆಂಝ್, ಸ್ಯಾಮ್ಸಂಗ್, ವಿಪ್ರೋ ಮುಂತಾದ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಿದ್ದು, 3,000ಕ್ಕೂ ಹೆಚ್ಚು ಉದ್ಯೋಗಾವಕಾಶಗಳನ್ನು ನೀಡುತ್ತಿವೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ನಮ್ಮ ಸರ್ಕಾರದ ಮೊದಲ 100 ದಿನಗಳ ಗುರಿಯಲ್ಲಿ ''''''''ಯುವ ಉದ್ಯೋಗ ಸೇತುಗೆ ಆದ್ಯತೆ ನೀಡಲಾಗಿದೆ. ಶೀಘ್ರದಲ್ಲೇ ರಾಜ್ಯದಲ್ಲಿ 70,000 ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದರು.
ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರ ಮಾರ್ಗದರ್ಶನದಲ್ಲಿ ಆನ್ಲೈನ್ ಮೂಲಕವೇ ಜನರು ಎಲ್ಲಾ ಅವಕಾಶಗಳನ್ನು ತಿಳಿದುಕೊಳ್ಳುವಂತಹ ಒಂದು ವೇದಿಕೆಯನ್ನು ನಿರ್ಮಿಸಿದ್ದೇವೆ.
4,000 ಕ್ಕೂ ಹೆಚ್ಚು ಉದ್ಯೋಗಾವಕಾಶಗಳಿದ್ದು, ಈ ಕಾರ್ಯಕ್ರಮದಲ್ಲಿ 80 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿವೆ ಎಂದರು.
ಆನ್ಲೈನ್ ಮೂಲಕ ಸಂದರ್ಶನಕ್ಕೆ ಹಾಜರಾಗಿ ಉದ್ಯೋಗ ಗಿಟ್ಟಿಸಿಕೊಂಡ ಕಿರಣಕುಮಾರ, ದೀಪಕ ಸೇರಿ ಆಯ್ದ ಯುವಕರಿಗ ಸಚಿವ ಡಾ.ಸರಣಪ್ರಕಾಶ ಪಾಟೀಲ ಉದ್ಯೋಗದ ಆಫರ್ ಲೆಟರ್ ನೀಡಿ ಶುಭ ಕೋರಿದಲ್ಲದೆ ನಂತರ ಕಂಪನಿಗಳು ಸಂದರ್ಶನ ನಡೆಸುತ್ತಿರುವ ಸ್ಥಳಕ್ಕೆ ಭೇಟಿ ನೇಮಕಾತಿ ಪ್ರಕ್ರಿಯೆ ವೀಕ್ಷಿಸಿದರು.
ಶಾಸಕ ಅಲ್ಲಮಪ್ರಭು ಪಾಟೀಲ, ಜಿಲ್ಲಾ ಪಂಚಾಯತ್ ಸಿ.ಇ.ಓ ರಾಹುಲ ಸಂಕನೂರ್, ಹಿರಿಯ ಸಹಾಯಕ ಆಯುಕ್ತರಾದ ಸಾಹಿತ್ಯ ಅಲದಕಟ್ಟಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ನಾಗುಬಾಯಿ ಸೂರ್ಯವಂಶಿ, ಹೆಚ್.ಕೆ.ಇ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ರಾಜಾ ಭೀಮಳ್ಳಿ, ಕಾರ್ಯದರ್ಶಿ ಉದಯಕುಮಾರ, ಸೇರಿದಂತೆ ವಿವಿಧ ಭಾಗಗಳಿಂದ ಬಂದ ಸಾವಿರಾರು ಸಂಖ್ಯೆಯಲ್ಲಿ ಉದ್ಯೋಗಕಾಂಕ್ಷಿಗಳು ಭಾಗವಹಿಸಿದ್ದರು. ಶಿಕ್ಷಕಿ ಅರ್ಚನಾ ನಿರೂಪಿಸಿದರು. ಪಿ.ಡಿ.ಎ. ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಎಸ್.ಡಿ. ಪಾಟೀಲ್ ವಂದಿಸಿದರು.