ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ಜಿಲ್ಲಾಡಳಿತದ ವತಿಯಿಂದ ನಗರದ ಕುವೆಂಪು ಕಲಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸವಿತಾ ಮಹರ್ಷಿಗಳು ಸಮಾಜಮುಖಿಯಾಗಿ ಬೆಳೆದು ಇತರರಿಗೆ ದಾರಿದೀಪವಾಗಿದ್ದಾರೆ. ಇಂತಹ ಮಹಾತ್ಮರ ಜಯಂತಿ ಆಚರಿಸುವ ಮೂಲಕ ಸರ್ಕಾರ ಇವರ ಆದರ್ಶಗಳನ್ನು ಇಂದಿನ ಜನತೆ ಆಳವಡಿಸಿಕೊಂಡು ನಡೆಯಲು ಬೆಳಕು ತೋರಿಸಿದೆ ಎಂದರು. ಸವಿತಾ ಸಮಾಜವು ಅತೀ ಕಡಿಮೆ ಜನಸಂಖ್ಯೆ ಹೊಂದಿರುವ ವರ್ಗವಾಗಿದ್ದು, ಇವರನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ಸರ್ಕಾರದ ಉದ್ದೇಶವಾಗಿದೆ. ಈ ವರ್ಗದವರಿಗೆ ಸರ್ಕಾರ ಹಲವಾರು ಸೌಲಭ್ಯ ನೀಡಿದ್ದು, ಈ ಸವಲತ್ತು ಸದುಪಯೋಗಪಡಿಸಿಕೊಂಡು ಅಭಿವೃದ್ಧಿ ಹೊಂದುವಂತೆ ತಿಳಿಸಿದರು.ಸಾಹಿತಿ ಚಟ್ನಳ್ಳಿ ಮಹೇಶ್ ಸವಿತಾ ಮಹರ್ಷಿ ಕುರಿತು ವಿಶೇಷ ಉಪನ್ಯಾಸ ನೀಡಿ, ಕಾಯಕಕ್ಕೆ ಹೆಚ್ಚಿನ ಮಹತ್ವ ನೀಡಿದವರು ಮಹಾಪುರುಷರು, ಕಾಯಕದಲ್ಲಿ ಮೇಲು ಕೀಳೆಂಬುದಿಲ್ಲ ಅದು ತನ್ನದೇ ಆದ ಶ್ರೇಷ್ಠತೆ ಹೊಂದಿದೆ. ಕಾಯಕ ಹೀನನಾದರೆ ಬದುಕಿಗೆ ಅರ್ಥವಿರುವುದಿಲ್ಲ. ಪ್ರತಿಯೊಬ್ಬರಿಗೂ ತಾವು ಮಾಡುವ ವೃತ್ತಿ ಬಗ್ಗೆ ಗೌರವವಿರಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ಉಪ ವಿಭಾಗಾಧಿಕಾರಿಗಳ ಕಚೇರಿಯ ಉಪ ತಹಸೀಲ್ದಾರ್ ಶಾರದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ರಮೇಶ್ ಹಾಗೂ ಸವಿತಾ ಸಮಾಜದ ಮುಖಂಡರು ಉಪಸ್ಥಿತರಿದ್ದರು.