ವಿದ್ಯಾವಂತ ನಿರುದ್ಯೋಗಿಗಳಿಗೆ ಯುವನಿಧಿ ಸಹಕಾರಿ

KannadaprabhaNewsNetwork |  
Published : Jan 13, 2024, 01:32 AM IST
ಶಿರ್ಷಿಕೆ-೧೨ಕೆ.ಎಂ.ಎಲ್.ಅರ್.೨-ಮಾಲೂರಿನ ಪುರಸಭೆ ಉದ್ಯಾನವನದಲ್ಲಿರುವ ಸ್ವಾಮಿ ವಿವೇಕಾನಂದ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಶಾಸಕ ಕೆ.ವೈ.ನಂಜೇಗೌಡ ಅವರು ರಾಷ್ಟ್ರೀಯ ಯುವ ದಿನವನ್ನು ಆಚರಿಸಿದರು. | Kannada Prabha

ಸಾರಾಂಶ

ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆ ಘೋಷಣೆಯಂತೆ ಈಗಾಗಲೇ ನಾಲ್ಕು ಗ್ಯಾರಂಟಿ ಅನುಕೂಲಗಳು ಅರ್ಹ ಫಲಾನುಭವಿಗಳಿಗೆ ಪ್ರತಿ ತಿಂಗಳು ತಲುಪುತ್ತಿದ್ದು ,ಈಗ ಐದನೇ ಯೋಜನೆ ಯುವನಿಧಿ ಗ್ಯಾರಂಟಿ ಇಂದು ಮಾನ್ಯ ಮುಖ್ಯಮಂತ್ರಿ ಗಳಿಂದ ಶಿವಮೊಗ್ಗದ ಪ್ರೀಡಂ ಪಾರ್ಕ್ನಲ್ಲಿ ಲೋಕಾರ್ಪಣೆಯಾಗಿದೆ.

ಕನ್ನಡಪ್ರಭ ವಾರ್ತೆ ಮಾಲೂರುರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯಿಂದ ವಿದ್ಯಾವಂತ ನಿರುದ್ಯೋಗಿ ಫಲಾನುಭವಿಗಳಿಗೆ ಪ್ರತಿ ತಿಂಗಳು ನಗದು ವರ್ಗಾವಣೆಯಾಗಿದ್ದು,ದೇಶದಲ್ಲೇ ಮೊದಲು ಎಂದು ಶಾಸಕ ಕೆ.ವೈ.ನಂಜೇಗೌಡ ಹೇಳಿದರು.

ಪಟ್ಟಣದ ಬಸ್ ನಿಲ್ದಾಣ ಬಳಿಯ ಪುರಸಭೆ ಉದ್ಯಾನವನದಲ್ಲಿ ರಾಷ್ಟ್ರೀಯ ಯುವದಿನದ ಅಂಗವಾಗಿ ವಿವೇಕಾನಂದ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ನಂತರ ಮಾತನಾಡಿದ ಅವರು, ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆ ಘೋಷಣೆಯಂತೆ ಈಗಾಗಲೇ ನಾಲ್ಕು ಗ್ಯಾರಂಟಿ ಅನುಕೂಲಗಳು ಅರ್ಹ ಫಲಾನುಭವಿಗಳಿಗೆ ಪ್ರತಿ ತಿಂಗಳು ತಲುಪುತ್ತಿದ್ದು ,ಈಗ ಐದನೇ ಯೋಜನೆ ಯುವನಿಧಿ ಗ್ಯಾರಂಟಿ ಇಂದು ಮಾನ್ಯ ಮುಖ್ಯಮಂತ್ರಿ ಗಳಿಂದ ಶಿವಮೊಗ್ಗದ ಪ್ರೀಡಂ ಪಾರ್ಕ್ನಲ್ಲಿ ಲೋಕಾರ್ಪಣೆಯಾಗಿದೆ, ೨೦೨೩-೨೪ ನೇ ಸಾಲಿನಲ್ಲಿ ಈಗಾಗಲೇ ನೋಂದಣಿ ಆಗಿರುವ ೬೯ ಸಾವಿರ ನಿರುದ್ಯೋಗಿ ಯುವಕ-ಯುವತಿಯರಿಗೆ ಹಾಗೂ ೩೯ ಸಾವಿರ ಡಿಪ್ಲೋಮಾ ಶಿಕ್ಷಣ ಪಡೆದವರಿಗೆ ೨೫೦ ಕೋಟಿ ಹಣ ನೇರವಾಗಿ ಖಾತೆ(ಡಿಬಿಟಿ)ಮೂಲಕ ಸಂದಾಯವಾಗುತ್ತದೆ ಎಂದರು.ತಹಸೀಲ್ದಾರ್ ರಮೇಶ್,ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಚ್.ಹನುಮಂತಪ್ಪ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಧುಸೂಧನ್,ಎಚ್.ಎಂ.ವಿಜಯನರಸಿಂಹ ,ಮುಖಂಡರಾದ ವೀರಭದ್ರಪ್ಪ,ಎಂ.ವಿ.ಹನುಮಂತಪ್ಪ,ಬಾಳಿಗಾನಹಳ್ಳಿ ಶ್ರೀನಿವಾಸ್,ಎ.ಅಶ್ವಥ ರೆಡ್ಡಿ,ವಿಜಯಲಕ್ಷ್ಮೀ ಸಿಂಗ್,ಬೆಡಶೆಟ್ಟಿಹಳ್ಳಿ ರಮೇಶ್,ನವೀನ್ ಕುಮಾರ್,ಸತೀಶ್,ಗೋಪಿನಾಥ್,ಜಾಕಿ ಮಂಜುನಾಥ್,ಮೈಲಾಂಡಹಳ್ಳಿ ನಾರಾಯಣಸ್ವಾಮಿ,ಪುರಸಭೆ ಸದಸ್ಯ ಆರ್.ವೆಂಕಟೇಶ್,ಇಂತಿಯಾಜ್ ಖಾನ್ ಇನ್ನಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಸಿಲಿನ ಹೊಡೆತಕ್ಕೆ ಸಾವಿರಾರು ಮೀನುಗಳ ಮಾರಣಹೋಮ
ನಿರಾಶ್ರಿತರ ಕಣ್ಣೀರು ಒರೆಸುವ ಕೆಲಸ