ಕನ್ನಡಪ್ರಭ ವಾರ್ತೆ ಬಳ್ಳಾರಿ
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಹಾಗೂ ಸಂಸ್ಥೆಯ ಸ್ಕಿಲ್ ಡೆವಲಪ್ಮೆಂಟ್ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಚುನಾವಣೆ ಮುನ್ನ ನೀಡಿದ ಐದು ಗ್ಯಾರಂಟಿಗಳನ್ನು ಈಡೇರಿಸಲು ನಮ್ಮ ಸರ್ಕಾರ ಬದ್ಧವಾಗಿ ಕಾರ್ಯನಿರ್ವಹಿಸುತ್ತಿದೆ. ಈಗಾಗಲೇ ನಾಲ್ಕು ಗ್ಯಾರಂಟಿಗಳು ಜಾರಿಗೊಳಿಸಲಾಗಿದ್ದು, ಸಮರ್ಪಕವಾಗಿ ಅನುಷ್ಠಾನಗೊಂಡಿವೆ. ಯುವನಿಧಿ ಯೋಜನೆಯನ್ನು ಸಹ ಜಾರಿಗೊಳಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ₹250 ಕೋಟಿ ಅನುದಾನ ನಿಗದಿಗೊಳಿಸಿಕೊಳ್ಳಲಾಗಿದೆ. `ಯುವನಿಧಿ’ಯ ಮೊತ್ತವು ಭವಿಷ್ಯದಲ್ಲಿ ಪ್ರತಿ ವರ್ಷಕ್ಕೆ ₹2500 ಕೋಟಿಗಳಿಗಿಂತ ಹೆಚ್ಚಾಗುವ ಸಾಧ್ಯತೆಯಿದೆ. ಐಟಿಐ, ಎಂಜಿನಿಯರಿಂಗ್, ಡಿಪ್ಲೊಮಾ ಪದವೀಧರರಿಗೆ ಕೌಶಲ್ಯಾಧಾರಿತ ಮತ್ತು ಉದ್ಯೋಗ ಭರವಸೆಯ ಪ್ರಾಕ್ಟಿಕಲ್ ತರಬೇತಿ ಸ್ಕಿಲ್ಗ್ಯಾಪ್ ತುಂಬುವ ವ್ಯವಸ್ಥೆಯನ್ನು ಜಾರಿ ಮಾಡಲು ಉದ್ಯೋಗದಾತರು ಮತ್ತು ಕೈಗಾರಿಕೋದ್ಯಮಿಗಳನ್ನೊಳಗೊಂಡ `ಸ್ಕಿಲ್ ಮಿಷನ್’ ಪ್ರಾರಂಭಿಸಲಾಗಿದೆ ಎಂದರು.
ಪ್ರಸ್ತುತ ಕರ್ನಾಟಕದಲ್ಲಿ 12 ಸಾವಿರ ವೈದ್ಯಕೀಯ ಸೀಟುಗಳು ಪ್ರತಿವರ್ಷ ಲಭ್ಯ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೂಕ್ತ ಅವಕಾಶಗಳನ್ನು ಕಲ್ಪಿಸಲು ಪ್ರತಿ ಜಿಲ್ಲೆಯಲ್ಲಿ ಒಂದು ಸರ್ಕಾರಿ ಮೆಡಿಕಲ್ ಕಾಲೇಜು ಪ್ರಾರಂಭಿಸುವ ಚಿಂತನೆ ನಡೆದಿದೆ. ಆಗ ಹೆಚ್ಚಿನ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪಡೆಯಲಿದ್ದಾರೆ ಎಂದರು.ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ನಡೆಸುತ್ತಿರುವ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಕರ್ನಾಟಕದಲ್ಲಿಯೇ ಅತ್ಯುತ್ತಮವಾಗಿದೆ ಎಂದು ಶ್ಲಾಘಿಸಿದರು.
ಇದೇ ವೇಳೆ ಬಳ್ಳಾರಿ ಜಿಲ್ಲೆಯ ಕೌಶಲ್ಯಾಭಿವೃದ್ಧಿ ಪ್ರಗತಿಗೆ ಸಂಬಂಧಿಸಿದಂತೆ ಸಂಸ್ಥೆಯ ಪ್ರಮುಖರು ಸಚಿವರಿಗೆ ಮನವಿ ಸಲ್ಲಿಸಿದರು.