ಕನ್ನಡಪ್ರಭ ವಾರ್ತೆ ವಿಜಯಪುರ
ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು ಎರಡು ಸಲ ಚಿಕ್ಕೋಡಿ, ಮೂರು ಸಲ ವಿಜಯಪುರ ಎಂಪಿಯಾಗಿ ಅವರ ಸಾಧನೆ ಶೂನ್ಯ. ಜಿಲ್ಲೆಗಾಗಿ ಒಂದೇ ಒಂದು ಪ್ರಶ್ನೆಯನ್ನೂ ಅವರು ಕೇಳಿಲ್ಲ. ಇದು ಬದಲಾವಣೆ ಕಾಲವಾಗಿದ್ದು, ನನಗೆ ಅವಕಾಶ ನೀಡಿದರೆ ನನ್ನ ಅನುಭವ ಹಾಗೂ ಪ್ರಾಮಾಣಿಕ ಶ್ರಮದಿಂದ ಜಿಲ್ಲೆಯನ್ನು ಪ್ರಗತಿಯತ್ತ ಕೊಂಡೊಯ್ಯುತ್ತೇನೆ ಎಂದು ಹೇಳಿದರು.
ಜಿಪಂ ಮಾಜಿ ಸದಸ್ಯ ಕಲ್ಲು ದೇಸಾಯಿ ಮಾತನಾಡಿ, ಮೂರು ಸಲ ಅಧಿಕಾರದಲ್ಲಿರುವ ಹಾಲಿ ಸಂಸದರಿಂದ ಕೊಲ್ಹಾರ ಪಟ್ಟಣಕ್ಕೆ ಯಾವುದೇ ಉಪಯೋಗವಾಗಿಲ್ಲ. ಸದ್ಯದ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಅವರು ಉತ್ತಮ ಸಂಘಟಕರು, ಅಭಿವೃದ್ಧಿ ಪರ ಚಿಂತಕರಾಗಿರುವುದರಿಂದ ಇವರನ್ನು ಗೆಲ್ಲಿಸುವುದು ನಮಗೆಲ್ಲ ಅನಿವಾರ್ಯವಾಗಿದೆ. ಜಿಲ್ಲೆ ಮತ್ತು ನಮ್ಮ ಪಟ್ಟಣದ ಪ್ರಗತಿಗೆ ಆಲಗೂರರು ಶ್ರಮಿಸಲಿದ್ದಾರೆ. ಸಾಮಾನ್ಯ ಜನರೂ ಜಿಗಜಿಣಗಿಯವರಿಂದ ಜಿಗುಪ್ಸೆ ಹೊಂದಿದ್ದಾರೆ ಎಂದು ಹೇಳಿದರು.ಈ ವೇಳೆ ಮಲ್ಲು ದೇಸಾಯಿ, ಅಧ್ಯಕ್ಷ ಮುಸ್ಕಾನ್ ಶಿರಬೂರ, ರಫೀಕ್ ಪಕಾಲಿ, ಮುಖಂಡರಾದ ಬಿ. ಎಸ್. ಪತಂಗಿ, ಕಮಲವ್ವ ಮಾಕಾಳಿ, ಗಂಗಾಧರ ಸಂಬಣ್ಣಿ, ಉಸ್ಮಾನ್ ಪಟೇಲ, ದಸ್ತೀಗರಸಾಬ್ ಸೇರಿದಂತೆ ಸ್ಥಳೀಯರು, ಪ್ರಮುಖರು ಭಾಗವಹಿಸಿದ್ದರು.